Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಡುಪ್ರಾಣಿಗಳಿಗಳ ಉಪಟಳ ತಪ್ಪಿಸಲು ಅರಣ್ಯ ಇಲಾಖೆ ಸೋತಿದೆ
    ಊರ್ಮನೆ ಸಮಾಚಾರ

    ಕಾಡುಪ್ರಾಣಿಗಳಿಗಳ ಉಪಟಳ ತಪ್ಪಿಸಲು ಅರಣ್ಯ ಇಲಾಖೆ ಸೋತಿದೆ

    Updated:18/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಕೃಷಿಗೆ ಈ ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ವ್ಯಾಪಕವಾಗಿ ಕಾಡುತ್ತಿದ್ದು, ಸಮಸ್ಯೆಯ ಪರಿಹಾರಕ್ಕೆ ಅರಣ್ಯ ಇಲಾಖೆ ಪರಿಣಾಮಕಾರಿ ಕ್ರಮಗಳ ಅನುಷ್ಠಾನಕ್ಕೆ ಮುಂದಾಗುತ್ತಿಲ್ಲ. ಚೀನ ಮೊದಲಾದ ರಾಷ್ಟ್ರಗಳಲ್ಲಿ ಕಾಡು ಪ್ರಾಣಿಗಳ ಬೆದರಿಸಲು ಬೇರೆ ಬೇರೆ ವಿಧಾನಗಳಿದ್ದು, ಇಲ್ಲೂ ಕೂಡಾ ಅಂಥಹ ಪ್ರಯೋಗಗಳು ನಡೆಯಬೇಕಿದೆ ಎಂದು ಭಾ.ಕಿ.ಸಂ.ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷ ಬಿ.ವಿ ಪೂಜಾರಿ ಅಭಿಪ್ರಾಯ ಪಟ್ಟರು.

    Click Here

    Call us

    Click Here

    ಉಡುಪಿ ಜಿಲ್ಲಾ ರೈತ ಸಂಘ, ಭಾರತೀಯ ಕಿಸಾನ್ ಸಂಘ ಉಡುಪಿ ಜಿಲ್ಲಾ ಸಮಿತಿ, ಭಾ.ಕಿ.ಸಂ.ಕುಂದಾಪುರ ಕ್ಷೇತ್ರ ಹಾಗೂ ಕೋಟೇಶ್ವರ ವಲಯ ಸಮಿತಿ ಸಹಭಾಗಿತ್ವದಲ್ಲಿ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ನಡೆದ ರೈತರ ಮಾಹಿತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. ಕೃಷಿಯ ಬಗ್ಗೆ ಹಿಮ್ಮುಖ ನೀತಿ ಆತಂಕ ಮೂಡಿಸುತ್ತಿದೆ. ಸರಿಯಾದ ಪ್ರೋತ್ಸಾಹ, ಧಾರಣೆ ಇಲ್ಲದಿರುವುದು ಕೂಡಾ ಇದಕ್ಕೆ ಕಾರಣ ಎಂದ ಅವರು, ಇವತ್ತು ಕೃಷಿಕರು, ಕೃಷಿಕಾರ್ಮಿಕರು ಮದ್ಯ ವ್ಯಸನಕ್ಕೆ ಒಳಗಾಗುತ್ತಿರುವುದು ಬೇಸರದ ಸಂಗತಿ. ಇವತ್ತು ಎಲ್ಲ ಕೆಟ್ಟ ಕೃತ್ಯಗಳ ಹಿಂದೆಯೂ ಮದ್ಯದ ಇರುತ್ತದೆ. ಈ ಬಗ್ಗೆ ಜಾಗೃತಿ ಕೃಷಿಕರಲ್ಲಿ ಬರಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯರು ಆದ ಪ್ರತಾಪಚಂದ್ರ ಶೆಟ್ಟಿ ವಹಿಸಿದ್ದರು. ದ.ಕ, ಉಡುಪಿ ಜಿಲ್ಲೆ ಹಾಪ್‌ಕಾಮ್ಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಹಿರಿಯ ತೋಟಗಾರಿಕಾ ನಿರ್ದೇಶಕ ಕೆ.ಪಿ.ಚಿದಂಬರ, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರ ವಿಭಾಗದ ವಿಷಯ ತಜ್ಞ ಡಾ.ಎನ್.ಇ.ನವೀನ್, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಷಯ ತಜ್ಞ ಡಾ.ಚೈತನ್ಯ ಹೆಚ್.ಎಸ್., ಕೋಟೇಶ್ವರದ ಪ್ರಗತಿಪರ ಕೃಷಿಕ ಮಹಮ್ಮದ್ ರಫೀಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

    ಭಾರತೀಯ ಕಿಸಾನ್ ಅಧ್ಯಕ್ಷ ಮೋಹನ ಆಚಾರ್ಯ ಸ್ವಾಗತಿಸಿ, ಶೇಷಗಿರಿ ಗೋಟ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಚಂದ್ರಿಕಾ ಪ್ರಾರ್ಥಿಸಿ, ಗುರುರಾಜ್ ಕಾರ್ಯಕ್ರಮ ನಿರ್ವಹಿಸಿದರು. ಕಾರ‍್ಯಾಗಾರದಲ್ಲಿ ಸಾವಯವ ಕೃಷಿ, ತೋಟಗಾರಿಕಾ ಇಲಾಖೆಯಿಂದ ಸಿಗುವ ಸೌಲಭ್ಯಗಳ ಮಾಹಿತಿ, ತೋಟಗಾರಿಕಾ ಬೆಳೆಗಳ ಮಾರಾಟದ ಕುರಿತು ಮಾಹಿತಿ ನೀಡಲಾಯಿತು.

    Like this:

    Like Loading...

    Related

    Agriculture kundapura
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d