Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಧಾನಸಭಾ ಚುನಾವಣೆ: ಮಸ್ಟರಿಂಗ್ ಕೇಂದ್ರದಿಂದ ಮತಗಟ್ಟೆಯತ್ತ ಅಧಿಕಾರಿಗಳ ಪಯಣ
    ಊರ್ಮನೆ ಸಮಾಚಾರ

    ವಿಧಾನಸಭಾ ಚುನಾವಣೆ: ಮಸ್ಟರಿಂಗ್ ಕೇಂದ್ರದಿಂದ ಮತಗಟ್ಟೆಯತ್ತ ಅಧಿಕಾರಿಗಳ ಪಯಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಮೇ.10ರಂದು ನಡೆಯಲಿರುವ ಚುನಾವಣೆಗೆ ಸಿದ್ಧರಾಗಿರುವ ಅಧಿಕಾರಿಗಳು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ಹಾಗೂ ಬೈಂದೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ಥಾಪಿಸಿರುವ ಮಸ್ಟರಿಂಗ್ ಕೇಂದ್ರದಲ್ಲಿ ಹಾಜರಾಗಿ ತಮ್ಮತಮ್ಮ ಕೇಂದ್ರಗಳಿಗೆ ಅಗತ್ಯವಿರುವ ಮತದಾನ ಯಂತ್ರ ಮತ್ತು ಅನ್ಯ ಪರಿಕರಗಳನ್ನು ಸ್ವೀಕರಿಸಿ, ತಮಗೆ ನಿಗದಿಗೊಳಿಸಿದ ವಾಹನಗಳಲ್ಲಿ ತೆರಳಿದರು.

    Click Here

    Call us

    Click Here

    ಕುಂದಾಪುರ ಚುನಾವಣಾಧಿಕಾರಿ ರಶ್ಮಿ ಅವರ ನೇತೃತ್ದಲ್ಲಿ ಕುಂದಾಪುರ ಕ್ಷೇತ್ರದ ಮಸ್ಟರಿಂಗ್ ಭಂಡಾರ್ಕಾರ್ಸ್ ಕಾಲೇಜಿನ ಆರ್.ಎನ್.ಶೆಟ್ಟಿ ಹಾಲ್ನಲ್ಲಿ ನಡೆದರೆ, ಬೈಂದೂರು ಚುನಾವಣೆ ಜಗದೀಶ ಗಂಗಣ್ಣನವರ್ ನೇತೃತ್ವದಲ್ಲಿ ಬೈಂದೂರು ಕ್ಷೇತ್ರದ ಮಸ್ಟರಿಂಗ್ ಕಾಲೇಜಿನ ಹಾಲ್ನಲ್ಲಿ ನಡೆಯಿತು. ಅಧಿಕಾರಿ ಹಾಗೂ ಸಿಬ್ಬಂದಿಗಳು ಮತಯಂತ್ರ ಸಹಿತ ಮತಕೇಂದ್ರಕ್ಕೆ ತೆರಳಿದರು.

    ಸಿಬ್ಬಂದಿ ಹಾಜರಾತಿ ದಾಖಲಿಸಲು ಮತ್ತು ಪರಿಕರಗಳನ್ನು ವಿತರಿಸಲು ಸೆಕ್ಟರ್ ಅಧಿಕಾರಿಗಳ ನೇತೃತ್ವದ ವಿಭಾಗಗಳನ್ನು ತೆರೆಯಲಾಗಿತ್ತು. ಅವುಗಳಿಗೆ ಸಂಬಂಧಿಸಿದ ವಿವರಗಳ ಫಲಕಗಳನ್ನು ಅಲ್ಲಲ್ಲಿ ಪ್ರದರ್ಶಿಸಲಾಗಿತ್ತು. ಬೆಳಗ್ಗಿನಿಂದ ಬಂದ ಸಿಬ್ಬಂದಿ ಫಲಾಹಾರ ಪೂರೈಸಿ, ತಮ್ಮ ವಿಭಾಗದಲ್ಲಿ ಸೇರಿ ಪರಸ್ಪರ ಪರಿಚಯ ಮಾಡಿಕೊಂಡು, ಪರಿಕರಗಳನ್ನು ಸ್ವೀಕರಿಸಿ, ಪರಿಶೀಲನೆ ನಡೆಸಿದರು. 246 ಮತಗಟ್ಟೆಗಳಿಗೆ ನಿಯೋಜಿಸಲಾದ ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿಗಳು, ಪೋಲೀಸ್ ಸಿಬ್ಬಂಧಿಗಳು, ಸಿಎಪಿಎಫ್ ಸಿಬ್ಬಂಧಿಗಳು ಭಾಗವಹಿಸಿ ತಮ್ಮ ಮತಗಟ್ಟೆಗಳಿಗೆ ಹಂಚಿಕೆ ಮಾಡಿದ ಚುನಾವಣಾ ಸಾಮಾಗ್ರಿಗಳನ್ನು, ಇವಿಎಂ ಹಾಗೂ ವಿವಿಪ್ಯಾಡ್ ಮತಯಂತ್ರಗಳನ್ನು ಮಸ್ಟರಿಂಗ್ ಕೇಂದ್ರದಿಂದ ಪಡೆದು ಅವುಗಳು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಂಡರು. ಅದೇ ದಿನ ಮೊದಲೇ ನಿಗದಿಪಡಿಸಿದ ಮತಗಟ್ಟೆಗಳಿಗೆ ವಾಹನದಲ್ಲಿ ತೆರಳಲಿದ್ದಾರೆ.

    ಚುನಾವಣೆಗೆ ಸಕಲ ಸಿದ್ದತೆ
    ಬೈಂದೂರು ಚುನಾವಣಾಧಿಕಾರಿ ಜಗದೀಶ ಚುನಾವಣಾ ತಯಾರಿ ಬಗ್ಗೆ ಮಾತನಾಡಿ, ಮೇ. 10 ರಂದು ಬೆಳಗ್ಗೆ 7ಗಂಟೆಯಿAದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು ಮತದಾನ ಪ್ರಕ್ರಿಯೆಗಾಗಿ ಸುಮಾರು 2500ಕ್ಕೂ ಅಧಿಕ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಚುನಾವಣೆಗಾಗಿ ಸಕಲ ಸಿದ್ದತೆ ಮಾಡಕೊಳ್ಳಲಾಗಿದೆ ಎಂದರು.

    ಚುನಾವಣಾ ಪ್ರಕ್ರಿಯೆ:
    ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 5 ಮತಗಟ್ಟೆಗಳು ದುರ್ಬಲ ಹಾಗೂ 44 ಮತಗಟ್ಟೆಗಳು ನಿರ್ಣಾಯಕ ಮತಗಟ್ಟೆಗಳಿದ್ದು, ಇಲ್ಲಿ ಮತಗಟ್ಟೆಗಳಿಗೆ ಸಿಎಪಿಎಫ್ನ ಅರ್ಧ ತುಕಡಿ ಭದ್ರತೆಯನ್ನು ಒದಗಿಸಲಾಗಿದೆ ಹಾಗೂ ಹೆಚ್ಚುವರಿಯಾಗಿ 1 ಪೋಲೀಸ್ ಸಿಬ್ಬಂಧಿಯನ್ನು ನಿಯೋಜಿಸಲಾಗಿದೆ. 246 ಮತಗಟ್ಟೆಗಳ ಪೈಕಿ 123 ಮತಗಟ್ಟೆಗಳಲ್ಲಿ ವೆಬ್ಕಾಸ್ಟಿಂಗ್ ನ್ನು ಮಾಡಲಾಗಿದ್ದು, ಇದರ ಮೂಲಕ ನೇರ ಪ್ರಸಾರವನ್ನು ಮಾನ್ಯ ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆ, ಉಡುಪಿ ಇವರ ಕಛೇರಿಯಲ್ಲಿ ವೀಕ್ಷಿಸಲಾಗುತ್ತದೆ ಎಂದರು.

    Click here

    Click here

    Click here

    Call us

    Call us

    ಮತದಾನ ಪ್ರಕ್ರಿಯೆ ಮುಗಿದ ಬಳಿಕ ಮತಗಟ್ಟೆ ಅಧಿಕಾರಿಗಳು ಚುನಾವಣಾ ಸಾಮಾಗ್ರಿಗಳನ್ನು, ಶಾಸನಬದ್ಧ, ಶಾಸನಬದ್ಧವಲ್ಲದ ಲಕೋಟೆಗಳನ್ನು, ಚುನಾವಣಾ ಪ್ರಕ್ರಿಯೆಯಲ್ಲಿ ಬಳಸುವ ಮುಖ್ಯವಾದ ವಿವರಗಳುಳ್ಳ ನಮೂನೆಗಳು ಹಾಗೂ ಮತದಾನವಾದ ಇವಿಎಂ ಮತ್ತು ವಿವಿಪ್ಯಾಡ್ ಮತಯಂತ್ರಗಳನ್ನು ಡಿಮಸ್ಟರಿಂಗ್ ಕೇಂದ್ರಕ್ಕೆ ಸಲ್ಲಿಸಿದ ನಂತರ ಸದರಿ ಚುನಾವಣಾ ಸಾಮಾಗ್ರಿಗಳನ್ನು ಜಿ.ಪಿ.ಎಸ್ ಅಳವಡಿಸಿರುವ ಮುಚ್ಚಿದ ಕಂಟೈನರ್ಗಳಲ್ಲಿ ಉಡುಪಿಯ ಭದ್ರತಾ ಕೊಠಡಿಗಳಲ್ಲಿ ದಾಸ್ತಾನು ಇಡಲಾಗುವುದು ಎಂದರು.

    ಮತದಾನದ ಹಿಂದಿನ ದಿನ ಹಾಗೂ ಮತದಾನದ ದಿನದಂದು ಯಾವುದಾದರೂ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾದ ಪ್ರಕರಣಗಳು ಕಂಡು ಬಂದಲ್ಲಿ ಹಾಗೂ ಕಾನೂನು ಸುವ್ಯವಸ್ಥೆಗೆ ವಿರುದ್ಧವಾದ ಪ್ರಕರ£ಣಗಳು ಕಂಡು ಬಂದಲ್ಲಿ ಚುನಾವಣಾಧಿಕಾರಿಗಳ ಕಾರ್ಯಾಲಯ 118 ಬೈಂದೂರು ವಿಧಾನಸಭಾ ಕ್ಷೇತ್ರದ ಕಂಟ್ರೋಲ್ ರೂಂ ಲ್ಯಾಂಡ್ ಲೈನ್ ನಂ 08254 251657, ಕಂಟ್ರೋಲ್ ರೂಂ ಮೊಬೈಲ್ ನಂ. 9380753009 ಇಲ್ಲಿಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೂಡ್ಲುಕಟ್ಟೆ: ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್‌ ಕಾರ್ಯಕ್ರಮ

    22/12/2025

    ಕುಂದಾಪುರ: ಜೂಜಾಟದಲ್ಲಿ ತೊಡಗಿದ್ದ 3 ಮಂದಿಯ ಬಂಧನ

    22/12/2025

    ಸಹಕಾರ ಭಾರತಿ ಅಭ್ಯಾಸ ವರ್ಗ: ಜನರಿಗೆ ಹೆಚ್ಚು ಸಹಕಾರ ನೀಡುವುದೇ ಗುರಿಯಾಗಲಿ – ಶಾಸಕ ಕಿರಣ್ ಕುಮಾರ್ ಕೊಡ್ಗಿ

    22/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಮೂಡ್ಲುಕಟ್ಟೆ: ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್‌ ಕಾರ್ಯಕ್ರಮ
    • ಕುಂದಾಪುರ: ಜೂಜಾಟದಲ್ಲಿ ತೊಡಗಿದ್ದ 3 ಮಂದಿಯ ಬಂಧನ
    • ಸಹಕಾರ ಭಾರತಿ ಅಭ್ಯಾಸ ವರ್ಗ: ಜನರಿಗೆ ಹೆಚ್ಚು ಸಹಕಾರ ನೀಡುವುದೇ ಗುರಿಯಾಗಲಿ – ಶಾಸಕ ಕಿರಣ್ ಕುಮಾರ್ ಕೊಡ್ಗಿ
    • ದೇವಾಡಿಗ ನವೋದಯದ ಸಂಘ ಬೆಂಗಳೂರು: ದಿನದರ್ಶಿಕೆ ಬಿಡುಗಡೆ ಸಮಾರಂಭ
    • ಕೋಡಿಕನ್ಯಾಣದಲ್ಲಿ ವೈಭವದ ಉಂಜಲೋತ್ಸವ ಸಂಪನ್ನ, ತಿರುಮಲಾಧೀಶನ್ನು ಕಣ್ತುಂಬಿಕೊಂಡ ಭಕ್ತರು

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.