Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಸಮಾಜಕ್ಕೆ ನಮ್ಮ ಕೊಡುಗೆ – ವಿಚಾರ ಸಂಕಿರಣ
    ಊರ್ಮನೆ ಸಮಾಚಾರ

    ಕುಂದಾಪುರ: ಸಮಾಜಕ್ಕೆ ನಮ್ಮ ಕೊಡುಗೆ – ವಿಚಾರ ಸಂಕಿರಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಪ್ರತಿಯೊಬ್ಬ ಪ್ರಜೆಯು ತನ್ನ ವೃತ್ತಿ ಪ್ರವೃತ್ತಿಯಲ್ಲಿ ಸಮಾಜಕ್ಕೆ ಅನುಕೂಲವಾಗುವ ಸಹಕಾರ ನೀಡಿದರೆ ಸಮಾಜದ ಅಭಿವೃದ್ಧಿಗೆ ಆತ ಕೊಡುಗೆ ನೀಡಿದಂತಾಗುತ್ತದೆ. ಇದರಿಂದ ಸರಕಾರದ ಸಹಾಯ ನಿರೀಕ್ಷೆ ಮಾಡದೇ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ ಹೇಳಿದರು.

    Click Here

    Call us

    Click Here

    ರೋಟರಿ ಕುಂದಾಪುರ ದಕ್ಷಿಣದ ವತಿಯಿಂದ ಏರ್ಪಡಿಸಲಾದ ಸಮಾಜಕ್ಕೆ ನಮ್ಮ ಕೊಡುಗೆ ವಿಚಾರ ಸಂಕಿರಣದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

    ಆರ್ಥಿಕ, ಸಾಮಾಜಿಕ ತೊಂದರೆ ಗೊಳಗಾದವರಿಗೆ ಸಹಾಯ ಮಾಡುವು ದರೊಂದಿಗೆ ಅಸಹಾಯಕ ಜೀವನ ನಡೆಸುವವರಿಗೆ ಮುನ್ನಡೆಯಲು ಮಾರ್ಗದರ್ಶನ ಮಾಡಿದರೆ ಅದೇ ದೊಡ್ಡ ಕೊಡುಗೆಯಾಗುತ್ತದೆ ಎಂದು ಹಲವು ಘಟನೆಗಳನ್ನು ಉದಾಹರಿಸಿ ಅವರು ಹೇಳಿದರು.

    ಕೆನರಾ ಬ್ಯಾಂಕಿನ ನಿವೃತ್ತ ಪ್ರಬಂಧಕ ಕೆ.ಪಿ.ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ವೈಯಕ್ತಿಕವಾಗಿಯೂ, ಸಂಘ ಸಂಸ್ಥೆಗಳ ಮೂಲಕವೂ ಅರ್ಹರನ್ನು ಗುರುತಿಸಿ ಸಹಾಯ ಮಾಡಿದಾಗ, ಸಹಾಯ ಪಡೆದವರು ಏಳಿಗೆ ಹೊಂದಿದಾಗ ಸಂತಸವಾಗುತ್ತದೆ ಎಂದರು.

    ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಹಿರಿಯ ಪ್ರಬಂಧಕ ವಾಸುದೇವ ಕಾರಂತ ಮಾತನಾಡಿ, ನಮ್ಮ ವೃತ್ತಿಯಲ್ಲಿ ಜನರಿಗೆ ಸಹಾಯ ಮಾಡಲು ಸಾಕಷ್ಟು ಅವಕಾಶವಿರುವಾಗ ಈ ಅವಕಾಶ ಸದ್ಬಳಕೆ ಮಾಡಿಕೊಂಡಾಗ ಪ್ರಯೋಜನ ಪಡೆದವರ ಪ್ರಗತಿ ಮನಸ್ಸಿಗೆ ತೃಪ್ತಿ ನೀಡುತ್ತದೆ. ಪ್ರತಿಯೊಬ್ಬ ಗ್ರಾಹಕ ವೃತ್ತಿ ವ್ಯವಹಾರದಲ್ಲಿ ಯಶಸ್ಸು ಸಾಧಿಸಿದರೆ ಸಮಾಜ ಬೆಳೆದಂತೆ ಎಂದರು.

    Click here

    Click here

    Click here

    Call us

    Call us

    ಉದ್ಯಮಿ ಕೆ.ಕೆ. ಕಾಂಚನ್ ಮಾತನಾಡಿ, ಬದುಕಿನ ಬಾಲ್ಯ ಬಹಳ ಸಂಕಟಮಯವಾಗಿದ್ದರೂ ಛಲದಿಂದ ಮುನ್ನಡೆಯುವ ಪ್ರೇರಣೆ ನಮ್ಮಲ್ಲಿ ಮೂಡಬೇಕು. ಯುವ ಜನಾಂಗ ವಿದ್ಯೆಯೊಂದಿಗೆ ಜೀವನ ಮೌಲ್ಯ ಅರಿಯುವಂತೆ ನಾವು ನಡೆಸಿದ ಪ್ರಯತ್ನ ಯಶಸ್ವಿಯಾದರೆ ಸಮಾಜ ಆರೋಗ್ಯ ಪೂರ್ಣವಾಗಿ ಬೆಳೆಯುತ್ತದೆ. ದುಶ್ಚಟಗಳಿಂದ ಯುವಕರು ದೂರವಿರುವಂತೆ ಮಾರ್ಗದರ್ಶನ ಮಾಡುವುದು ಸಮಾಜ ಸುಸ್ಥಿತಿಯಿಂದ ಬೆಳೆಯುವಂತೆ ಮಾಡುವ ಕೊಡುಗೆ ಎಂದರು.

    ಕುಂದಪ್ರಭ ಅಧ್ಯಕ್ಷ ಯು. ಎಸ್. ಶೆಣೈ ಮಾತನಾಡಿ, ಕುಂದಾಪುರ ಸೇರಿದಂತೆ ಕರಾವಳಿಯಲ್ಲಿ ವಿವಿಧ ಕ್ಷೇತ್ರದಲ್ಲಿ ಅದ್ಬುತ ಅಭಿವೃದ್ಧಿ ಕಾರ್ಯ ನಡೆಯಲು ಸಮಾಜದ ಗಣ್ಯರ, ತಜ್ಞರ ಕೊಡುಗೆ ದೊಡ್ಡದು. ಅವರಿಂದ ಪ್ರೇರಿತರಾಗಿ ಸರಕಾರ ಪೂರಕ ನೆರವು ಒದಗಿಸಿದ, ಅಭಿವೃದ್ಧಿ ನಡೆಸಿದ ಉದಾಹರಣೆಗಳು ಇವೆ. ಸಾವಿರಾರು ಯುವಕರು ದಾನಿಗಳ, ಸಂಘ ಸಂಸ್ಥೆಗಳ ನೆರವಿನಿಂದಲೇ ದೇಶ ವಿದೇಶಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಫಲಾಪೇಕ್ಷೆ ಇಲ್ಲದೇ ನಡೆಸುವ ಸಮಾಜ ಸೇವೆಗೆ ಹೆಚ್ಚು ಗೌರವ ದೊರೆಯುತ್ತದೆ ಎಂದರು.

    ಉತ್ತಮ ಹೋವಿಯೋ, ಕ್ಲಿನಿಕ್‌ನ ಮುಖ್ಯಸ್ಥ ಡಾ. ಉತ್ತಮ ಕುಮಾರ್ ಶೆಟ್ಟಿ ಮಾತನಾಡಿ, ನನ್ನ ವೈದ್ಯಕೀಯ ವೃತ್ತಿಯೊಂದಿಗೆ ಪರಿಸರ ಉಳಿವು ಹಾಗೂ ಉತ್ತಮ ತಳಿಗಳ ಸಸ್ಯಗಳನ್ನು ಬೆಳೆಸಿ ಸಾರ್ವಜನಿಕವಾಗಿ ಕೊಡುಗೆಯಾಗಿ ನೀಡಿದ್ದರಿಂದ ಬಹಳಷ್ಟು ಫಲಪ್ರದ ಫಲಿತಾಂಶ ಕಂಡಿದ್ದೇನೆ. ಸಮಾಜದ ಅಭಿವೃದ್ಧಿಯಲ್ಲಿ ಇಂತಹ ಪ್ರಯತ್ನಗಳು ಮೌಲ್ಯಯುತವಾದುವು ಎಂದರು.

    ಉದ್ಯಮಿ ಸಚಿನ್ ನಕ್ಕತ್ತಾಯ, ಉದ್ಯೋಗ ಸೃಷ್ಠಿ ಸಮಾಜಕ್ಕೆ ನೀಡುವ ಮಹತ್ವದ ಕೊಡುಗೆ. ಊರ ಪರವೂರ ನೂರಾರು ಮಂದಿಗೆ ಉದ್ಯೋಗ ಅವರ ಮಕ್ಕಳಿಗೆ ವಿದ್ಯೆ ನಾವು ನೀಡಿದ್ದೇವೆ. ಉದ್ಯೋಗಾವಕಾಶ ಕಲ್ಪಿಸುವುದು ಇಂದಿನ ದಿನ ಬಹಳ ಅಗತ್ಯವಾದುದು. ಎಂದರು.

    ಶೋಭಾ ಭಟ್, ಶ್ರೀನಿವಾಸ ಶೇಟ್, ರಾಘವೇಂದ್ರ ಶೇಟ್ ಚರ್ಚೆಯಲ್ಲಿ ಪಾಲ್ಗೊಂಡರು. ಗೋಷ್ಠಿ ನಿರ್ವಹಿಸಿದ ಬಿಎಸ್‌ಎನ್‌ಎಲ್ ನಿವೃತ್ತ ಅಧಿಕಾರಿ ಸುರೇಖಾ ಪುರಾಣಿಕ ಮಾತನಾಡಿ, ಕುಟುಂಬ ನಿರ್ವಹಣೆಗೆ ತೊಂದರೆ ಇರುವ ಮಹಿಳೆಯರಿಗೆ ಸಹಾಯ ಮಾಡಿದರೆ, ಒಬ್ಬ ಆರ್ಥಿಕವಾಗಿ ಅನುಕೂಲವಿರುವ ಪ್ರಜೆ, ಅರ್ಹ ಇನ್ನೊಬ್ಬ ವ್ಯಕ್ತಿಗೆ ಉದ್ಯೋಗ ದೊರಕುವಂತೆ ಮಾಡಿದರೆ ಅದೇ ಪುಣ್ಯದ ಕಾರ್ಯ ಎಂದು ತಿಳಿಸಿ ವಿಚಾರ ಸಂಕಿರಣದಲ್ಲಿ ಭಾಗವಹಿಸಿದವರಿಗೆ ವಂದನೆ ಸಲ್ಲಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಇಸ್ರೇಲ್‌ನ ಜನತೆಯ ಮನಗೆದ್ದ ಬೆಂಗಳೂರಿನ ಯಕ್ಷದೇಗುಲ ಯಕ್ಷಗಾನ ವೈಭವ

    08/11/2025

    ತ್ರಾಸಿ ಬಳಿ ನಿಂತಿದ್ದ ಲಾರಿಯಲ್ಲಿ ಚಾಲಕನ ಮೃತದೇಹ ಪತ್ತೆ

    08/11/2025

    ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯ್ದ 21 ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಣೆ

    08/11/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಆಳ್ವಾಸ್ ಕಾನೂನು ಕಾಲೇಜು: ಎನ್‌ಎಸ್‌ಎಸ್ ಮತ್ತು ರೆಡ್‌ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ
    • ಇಸ್ರೇಲ್‌ನ ಜನತೆಯ ಮನಗೆದ್ದ ಬೆಂಗಳೂರಿನ ಯಕ್ಷದೇಗುಲ ಯಕ್ಷಗಾನ ವೈಭವ
    • ತ್ರಾಸಿ ಬಳಿ ನಿಂತಿದ್ದ ಲಾರಿಯಲ್ಲಿ ಚಾಲಕನ ಮೃತದೇಹ ಪತ್ತೆ
    • ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯ್ದ 21 ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಣೆ
    • ಗುಜ್ಜಾಡಿ: ನಾಯಿಗಳಿಗೆ ಹಾಗೂ ಬೆಕ್ಕುಗಳಿಗೆ ಉಚಿತ ರೇಬಿಸ್ ನಿರೋಧಕ ಲಸಿಕಾ ಶಿಬಿರ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d