ಬಿಲ್ಲವೋತ್ಸವ-2023: ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರಿಗೆ ಸನ್ಮಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕತಾರ್:
ಇತ್ತೀಚಿಗೆ ಡಿ.ಪಿ.ಎಸ್ ಸಭಾಂಗಣ ಏರ್ಪಡಿಸಲಾಗಿದ್ದ “ಬಿಲ್ಲವೋತ್ಸವ-2023” ಕಾರ್ಯಕ್ರಮದಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾದ ಸುಬ್ರಮಣ್ಯ ಹೆಬ್ಬಾಗಿಲು ಅವರನ್ನು ಸನ್ಮಾನಿಸಲಾಯಿತು.

Call us

Click Here

ಕತಾರ್ ದೇಶದಲ್ಲಿ ಕನ್ನಡ ಭಾಷೆ ಸಂಸ್ಕೃತಿಯನ್ನು ಬೆಳೆಸುತ್ತ, ಕರ್ನಾಟಕ ಸಂಘ ಕತಾರ್ ಸದಸ್ಯತ್ವವನ್ನು ದಾಖಲೆಯ ಸಂಖೆಗೆ ಹೆಚ್ಚಿಸಿದ ಹೆಮ್ಮೆಗೆ, ಕನ್ನಡ ಚಲನಚಿತ್ರಗಳನ್ನು ಕತಾರ್ ನಲ್ಲಿ ಬಿಡುಗಡೆ ಮಾಡಲು ವ್ಯವಸ್ಥೆ ಮಾಡಿಕೊಡುವುದಕ್ಕೆ, ಪರಿಸರ ಪರ ಜಾಗೃತಿಗೆ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮ ಸುಪ್ರಸಿದ್ದಗೊಳಿಸಿರುವರು, ಕರೋನ ಮಹಾಮರಿಯ ತಾಂದವದ ಕಾಲದಲ್ಲಿ ‘ಒಂದೇ ಭಾರತ್’ ವಿಶೇಷ ವಿಮಾನ ಸೇವೆಯಲ್ಲಿ ಅವಶ್ಯಕತೆಯಿರುವ ಭಾರತೀಯರನ್ನು ಕತಾರಿನಿಂದ ಮಾತೃ ಭೂಮಿಗೆ ಹಿಂದಿರುಗಲು ಸಹಾಯ ಮಾಡಿರುವುದಕ್ಕೆ ಒಂದು ಕಿರುಕಾಣಿಕೆಯನ್ನು ನೀಡಿ ಗೌರವಿಸಲಾಯಿತು.

ಕತಾರ್ ಬಿಲ್ಲವಾಸ್ ಸಂಘದ ಅಧ್ಯಕ್ಷರಾದ ರಘುನಾಥ ಅಂಚನ್, ಉಪಾಧ್ಯಕ್ಷರಾದ ಅಮಿತ್ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿಯಾದ ಸೀಮಾ ಪೂಜಾರಿ, ಬಹರೈನ್ ಬಿಲ್ಲವಾಸ್ ಸಂಘದ ಪ್ರಧಾನ ಕಾರ್ಯದರ್ಶಿ ರೂಪೇಶ್ ಶಾಲಿಯನ್, ಬಹರೈನ್ ಬಿಲ್ಲವಾಸ್ ಸಂಘದ ಪೂರ್ವಾಧ್ಯಕ್ಷರಾದ ಅಜಿತ್ ಬಂಗೇರಾ , ಚಲನಚಿತ್ರ ನಟ ಪೃಥ್ವಿ ಅಂಬಾರ್ ಪ್ರಸಿದ್ಧ ಚಿಂತಕರಾದ ಡಾ. ಅರುಣ್ ಉಲ್ಲಾಳ್ ಹಾಗು ಇನ್ನಿತರ ಗಣ್ಯರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.

Leave a Reply