ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜೂ.16: ಪಶ್ಚಿಮ ವಲಯದ 32 ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) ಗಳನ್ನು ವರ್ಗಾವಣೆ ಮಾಡಿ ಐಜಿಪಿ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಕುಂದಾಪುರ ನಗರ ಪೊಲೀಸ್ ಠಾಣೆಗೆ ವಿನಯ್ ಕೊರ್ಲಹಳ್ಳಿ, ಗಂಗೊಳ್ಳಿ ಪೊಲೀಸ್ ಠಾಣೆಗೆ ಹರೀಶ್ ನಾಯ್ಕ್, ಶಂಕರನಾರಾಯಣ ಪೊಲೀಸ್ ಠಾಣೆಗೆ ನಾಸೀರ್ ಹುಸೇನ್, ಕೊಲ್ಲೂರು ಪೊಲೀಸ್ ಠಾಣೆಗೆ ಜಯಶ್ರೀ ಅವರನ್ನು ವರ್ಗಾಯಿಸಲಾಗಿದೆ.