Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಮರ್ಶಾತ್ಮಕ ಚಿಂತನಾ ಶಕ್ತಿ ವಿದ್ಯಾರ್ಥಿಗಳಲ್ಲಿರಬೇಕು: ಡಾ| ಎಂ. ಮಹಾಬಲೇಶ್ವರ ರಾವ್
    ಊರ್ಮನೆ ಸಮಾಚಾರ

    ವಿಮರ್ಶಾತ್ಮಕ ಚಿಂತನಾ ಶಕ್ತಿ ವಿದ್ಯಾರ್ಥಿಗಳಲ್ಲಿರಬೇಕು: ಡಾ| ಎಂ. ಮಹಾಬಲೇಶ್ವರ ರಾವ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ವಿದ್ಯಾರ್ಥಿಗಳಿಗಿಂದು ಪ್ರೇರಣೆ ನೀಡುವ ಉತ್ತಮವಾದ ಸೌಲಭ್ಯಗಳು ದೊರಕುತ್ತಿವೆ. ಗಿಳಿಯಾರು ಕುಶಲ ಹೆಗ್ಡೆ ಸ್ಮಾರಕ ಚಾರಿಟೆಬಲ್ ಟ್ರಸ್ಟ್ನವರು ಎರಡು ದಶಕಗಳಿಂದ ವಿದ್ಯಾರ್ಥಿಗಳಲ್ಲಿ ಪ್ರೇರಣೆ ತುಂಬುತ್ತಿದ್ದಾರೆ. ವಿದ್ಯಾರ್ಥಿಗಳು ಮುಂದೆ ಉತ್ತಮ ಗೌರವದ ಸ್ಥಾನ ಪಡೆದು ಸಂಪಾದನೆ ಮಾಡಿದಾಗ ಇದೇ ರೀತಿ ಅರ್ಹರಿಗೆ ಸಹಾಯ ನೀಡಬೇಕು. ವಿದ್ಯಾರ್ಥಿಗಳು ಶೈಕ್ಷಣಿಕ ವಾತಾವರಣದಲ್ಲಿ ವಿಮರ್ಶಾತ್ಮಕವಾದ ಚಿಂತನಾ ಶಕ್ತಿ ಬೆಳೆಸಿಕೊಳ್ಳಬೇಕು. ಯಾರು ಹೆಚ್ಚು ಪ್ರಶ್ನೆ ಕೇಳುವ ಪ್ರಯತ್ನ ಮಾಡುತ್ತಾರೋ ಅವರು ಅಧ್ಯಯನ ಮಾಡುತ್ತಿದ್ದಾರೆ ಎಂದು ಅರ್ಥ. ಏನು, ಏಕೆ, ಯಾವುದು, ಎಲ್ಲಿ, ಹೇಗೆ… ಹೀಗೆ ವಿಷಯದ ಬಗ್ಗೆ ನಮ್ಮ ಚಿಂತನೆ ಜೀವನದಲ್ಲಿ ರೂಢಿಯಾದರೆ ಯಾವುದೇ ಸಿದ್ಧ ಚೌಕಟ್ಟನ್ನು ಮುರಿದು ಬೆಳೆಯಬಹುದು. ಸೃಜನಾತ್ಮಕ ಚಿಂತನೆ ವಿದ್ಯಾರ್ಥಿಗಳಿಗೆ ಅಗತ್ಯ ಎಂದು ಶಿಕ್ಷಣ ತಜ್ಞ, ನಿವೃತ್ತ ಪ್ರಾಂಶುಪಾಲ ಡಾ| ಎಂ. ಮಹಾಬಲೇಶ್ವರ ರಾವ್ ಹೇಳಿದರು.

    Click Here

    Call us

    Click Here

    ಕುಂದಾಪುರದಲ್ಲಿ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ನಿಂದ ಸರಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ನಡೆದ ವಿದ್ಯಾರ್ಥಿ ಸಹಾಯಧನ ವಿತರಣೆ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

    ಎಸ್.ಎಸ್.ಎಲ್.ಸಿ.ಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಿದ ಅವರು ಕಷ್ಟಗಳು ಬಂದಾಗ ಎದುರಿಸುವ ತಾಳ್ಮೆ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ಪರೀಕ್ಷೆಯಲ್ಲಿ ಕಡಿಮೆ ಅಂಕ, ಫೈಲಾಗುವುದು ಜೀವನದ ಸಂಕಷ್ಟ ಅಲ್ಲ, ಇನ್ನೂ ಅವಕಾಶವಿದೆ. ಜೀವನ ಧೀರ್ಘವಾಗಿದೆ. ಬದುಕು ಬದುಕಲು ಯೋಗ್ಯವಾಗಿದೆ ಎಂದು ತಿಳಿಯಬೇಕು. ನಾವು ತಂತ್ರಜ್ಞಾನದ ಗುಲಾಮರಾಗಬಾರದು. ಅಂತರ್ಜಾಲ ಬಳಕೆಯ ಮೌಲ್ಯ ಅರಿತಿರಬೇಕು. ಪೌರಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಹೇಳಿದ ಅವರು ಹೆತ್ತವರು ಮಕ್ಕಳು ನಮ್ಮಂತೆ ಕಷ್ಟ ಪಡಬಾರದು ಎಂಬ ಕಾರಣಕ್ಕೆ ಅವರನ್ನು ಪರಪುಟ್ಟರನ್ನಾಗಿ ಮಾಡಬಾರದು ಎಂದರು.

    ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಮಾರಂಭವನ್ನು ಉದ್ಘಾಟಿಸಿ, ಪಿಯುಸಿ ರ್ಯಾಂಕ್ ವಿಜೇತರನ್ನು ಗೌರವಿಸಿದರು.

    ಗಿಳಿಯಾರು ಕುಶಲ ಹೆಗ್ಡೆ ಓರ್ವ ಸರಳ, ಸಜ್ಜನ ವ್ಯಕ್ತಿ. ಅವರು ಜೀವನದಲ್ಲಿ ಧಾರ್ಮಿಕ, ಶೈಕ್ಷಣಿಕ, ಸಹಕಾರ, ಸೇವಾ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿದ್ದವರು. ಅವರ ಹೆಸರಲ್ಲಿ ಕುಟುಂಬದವರು, ಹಿತೈಷಿಗಳು ದತ್ತಿ ಸಂಸ್ಥೆ ಸ್ಥಾಪಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದರೊಂದಿಗೆ ಹಲವು ಸಮಾಜ ಅಭಿವೃದ್ಧಿ ಕಾರ್ಯಗಳಿಗೆ ನೆರವು ನೀಡುತ್ತಿರುವುದು ಶ್ಲಾಘನೀಯ. ಕೋವಿಡ್ ಸಮಸ್ಯೆಯ ಕಾಲದಲ್ಲೂ ಉತ್ತಮವಾಗಿ ಸ್ಪಂದಿಸಿ ಜನರಿಗೆ ನೆರವಾದವರು. ಇಂತಹ ಸೇವೆ ನಿರಂತರವಾಗಿ ಮುಂದುವರೆಯಲಿ ಎಂದರು.

    Click here

    Click here

    Click here

    Click Here

    Call us

    Call us

    ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ನ ಅಧ್ಯಕ್ಷ ಬಿ. ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿ, ಗಿಳಿಯಾರು ಕುಶಲ ಹೆಗ್ಡೆಯವರ ಸಾಧನೆ ವಿವರಿಸಿದರು.

    ಗಿಳಿಯಾರು ಕುಶಲ ಹೆಗ್ಡೆ ಟ್ರಸ್ಟ್ನ ವಿಶ್ವಸ್ಥರಾದ ಹಿರಿಯ ಗುತ್ತಿಗೆದಾರ, ಇಂಜಿನಿಯರ್ ಉದಯ ಹೆಗ್ಡೆ, ಗಿಳಿಯಾರು ಕುಶಲ ಹೆಗ್ಡೆ ದತ್ತಿನಿಧಿ ಯೋಜನೆ, ಸಾಧನೆ ವಿವರಿಸಿದರು.

    ಟ್ರಸ್ಟ್ನ ವಿಶ್ವಸ್ಥ ಹಿರಿಯ ವಕೀಲ ಸಂತೋಷ್ ಕುಮಾರ್ ಶೆಟ್ಟಿ, ಹಂದಕುಂದ ಸೋಮಶೇಖರ ಶೆಟ್ಟಿ, ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ವಿಶ್ವಸ್ಥ ಕೆ. ನಾರಾಯಣ ಸಹಾಯಧನ ಪಡೆದ ವಿದ್ಯಾರ್ಥಿಗಳ ವಿವರ ನೀಡಿದರು. ಖಜಾಂಚಿ ಸ್ನೇಹಾ ರೈ, ವಿಶ್ವಸ್ಥರಾದ ಕಿಶೋರ್ ಹೆಗ್ಡೆ, ಸ್ವರೂಪ್ ಹೆಗ್ಡೆ ಅತಿಥಿಗಳನ್ನು ಗೌರವಿಸಿದರು. ಯು.ಎಸ್.ಶೆಣೈ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    26/05/2026

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ

    26/05/2026

    ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ

    26/05/2026
    Leave A Reply Cancel Reply

    5 + 4 =

    Call us

    Click Here

    Call us

    Call us

    Call us
    Highest Viewed Recently
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಪ.ಜಾ & ಪ.ಪಂದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್‌ ವಿತರಣೆ
    • ಶಂಕರನಾರಾಯಣ: 1990ರ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳ ಕುಟುಂಬ ಮಿಲನ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.