ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ 9 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೈಂದೂರು ಬಿಜೆಪಿ ವತಿಯಿಂದ ಉಪ್ಪುಂದ ಕಂಚಿಕಾನುವಿನಲ್ಲಿ ಏರ್ಪಡಿಸಿದ್ದ “ಸಾರ್ವಜನಿಕ ಸಂಪರ್ಕ ಅಭಿಯಾನ ಮತ್ತು ನಾಗೂರು ಲಲಿತಕೃಷ್ಣ ಸಭಾಂಗಣದಲ್ಲಿ ಏರ್ಪಡಿಸಿದ್ದ ವರ್ತಕರ ಸಭೆ” ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿ ಮಾತನಾಡಿದರು.

ಸಾರ್ವಜನಿಕ ಸಂಪರ್ಕ ಸಭೆ 
ವರ್ತಕರ ಸಭೆ 
ವರ್ತಕರ ಸಭೆ
ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೋಳೆ, ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು ಸೇರಿದಂತೆ ಪಕ್ಷದ ಮುಖಂಡರು ಮತ್ತು ವರ್ತಕರು ಉಪಸ್ಥಿತರಿದ್ದರು.










