Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ದೇವಳಕ್ಕೆ ತೆರಳಿದ್ದ ಮಹಿಳೆಯ ಚಿನ್ನ ಎಗರಿಸಿದ್ದ ಆರೋಪಿ ಬಂಧನ
    ಅಪಘಾತ-ಅಪರಾಧ ಸುದ್ದಿ

    ಕೊಲ್ಲೂರು ದೇವಳಕ್ಕೆ ತೆರಳಿದ್ದ ಮಹಿಳೆಯ ಚಿನ್ನ ಎಗರಿಸಿದ್ದ ಆರೋಪಿ ಬಂಧನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು:
    ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ದರ್ಶನಕ್ಕೆ ತೆರಳಿದ್ದ ಮಹಿಳೆಯ ಚಿನ್ನಾಭರಣಗಳಿದ್ದ ಪರ್ಸ್ ಕದ್ದಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ಗಿರೀಶ್ ಬಿ.ಜಿ. (32) ಬಂಧಿತ ಆರೋಪಿ.

    Click Here

    Call us

    Click Here

    ಜೂ.4ರಂದು ಸುರತ್ಕಲ್ ನಿವಾಸಿ ಪ್ರವೀಣ್ ಎನ್ನುವರು ಪತ್ನಿಯೊಂದಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದ್ದು, ಈ ವೇಳೆ ಚಿನ್ನಾಭರಣವನ್ನು ತಮ್ಮೊಂದಿಗೆ ಕೊಂಡೊಯ್ದುದ್ದಾರೆ. ಚಿನ್ನಾಭರಣಗಳನ್ನು ಚಿಕ್ಕ ಪರ್ಸ್ ನಲ್ಲಿ ಹಾಕಿ ವ್ಯಾನಟಿ ಬ್ಯಾಗ್ ನಲ್ಲಿಟ್ಟುಕೊಂಡಿದ್ದರು. ದೇವರ ದರ್ಶನ ಮಾಡಿ ಹೊರಗಡೆ ಬಂದಾಗ ವ್ಯಾನಟಿ ಬ್ಯಾಗ್ ಜೀಪ್ ಓಪನ್ ಆಗಿದ್ದು ಚಿನ್ನಾಭರಣಗಳಿದ್ದ ಚಿಕ್ಕ ಪರ್ಸ್ ಕಳವಾಗಿತ್ತ. ಒಟ್ಟು 13 ½ ಪವನ್ ಚಿನ್ನ [4 ಲಕ್ಷದ 75 ಸಾವಿರ ರೂ. ಮೌಲ್ಯ] ಕಳವಾದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

    ಈ ಬಗ್ಗೆ ತನಿಖೆ ಕೈಗೊಂಡ ಕೊಲ್ಲೂರು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಾಸಗಿ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ ತೀರ್ಥಹಳ್ಳಿ ಮೂಲದ ಗಿರೀಶ್ ಬಿ.ಜಿ. ದೇವಸ್ಥಾನಕ್ಕೆ ಬಂದಿದ್ದ ವೇಳೆ ಚಿನ್ನ ಕಳವುಗೈದ ಬಗ್ಗೆ ಪ್ರಕರಣ ದಾಖಲಾಗಿದೆ. ಕಳವು ಮಾಡಿದ ಚಿನ್ನಾಭರಣಗಳಾದ 7½ ಪವನ್ ಚಿನ್ನದ ಚೈನ್, 3 ಪವನ್ ತೂಕದ ಎರಡು ಚಿನ್ನದ ಬಳೆ, 1½ ಪವನ್ ಚಿನ್ನದ ಚೈನ್, ½ ಪವನ್ ಚಿನ್ನದ ಬಳೆ, 1 ಪವನ್ ತೂಕದ 4 ಜೊತೆ ಚಿನ್ನದ ಕಿವಿ ಓಲೆ ಸಹಿತ ಒಟ್ಟು 108 ಗ್ರಾಂ ಆರೋಪಿಯಿಂದ ವಶಕ್ಕೆ ಪಡೆಯಲಾಗಿದೆ.

    ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಮಚಿಂದ್ರ ಹಾಕೆ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ ಟಿ., ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ ನೇತೃತ್ವದಲ್ಲಿ ಕೊಲ್ಲೂರು ಠಾಣೆ ಉಪನಿರೀಕ್ಷಕರಾದ ಜಯಶ್ರೀ, ಸುಧಾರಾಣಿ, ಸಿಬ್ಬಂದಿಗಳಾದ ನಾಗೇಂದ್ರ ಹಾಗೂ ಸಂದೀಪ್ ಕಾರ್ಯಾಚರಣೆ ನಡೆಸಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಜ್ಯ ಮಟ್ಟದ ನೆಟ್‌ಬಾಲ್‌ ಪಂದ್ಯಾಟದಲ್ಲಿ ಕೊಲ್ಲೂರು ಪ.ಪೂ ಕಾಲೇಜಿನ ಬಾಲಕರ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

    07/11/2025

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d