ಲಂಚ ಸ್ವೀಕರಿಸುತ್ತಿದ್ದ ಮೆಸ್ಕಾಂ ಸಿಬ್ಬಂದಿ ಲೋಕಾಯುಕ್ತ ಬಲೆಗೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು
: ಲಂಚ ಸ್ವೀಕರಿಸುತ್ತಿದ್ದ ಲೈನ್ ಮ್ಯಾನ್ ಓರ್ವನನ್ನು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಬೈಂದೂರು ಮೆಸ್ಕಾಂನಲ್ಲಿ ಲೈನ್ಮ್ಯಾನ್ ಆಗಿರುವ ರಮೇಶ್ ಬಡಿಗೇರ ಆಪಾದಿತನಾಗಿದ್ದು, ರೂ.2000 ಲಂಚ ಸ್ವೀಕರಿಸುವ ಸಂದರ್ಭ ಸಿಕ್ಕಿಬಿದ್ದಿದ್ದಾನೆ.

Call us

Click Here

ಮರ ಕಡಿಯುವ ಸಲುವಾಗಿ ವಿದ್ಯುತ್ ಕಂಬದ ಲೈನ್ ನಿಷ್ಕ್ರಿಯಗೊಳಿಸಲು ಕುಸುಮಾ ಎಂಬವರು ಮನವಿ ಮಾಡಿದ್ದರು. ಇದಕ್ಕೆ ಮೆಸ್ಕಾಂ ಸಿಬ್ಬಂದಿ ಲಂಚದ ಬೇಡಿಕೆ ಇರಿಸಿದ್ದ ಎನ್ನಲಾಗಿದೆ. ಈ ಸಂದರ್ಭ ಲಂಚ ಪಡೆಯುತ್ತಿದ್ದಾಗ ಡಿವೈಎಸ್‌ಪಿ ಪ್ರಕಾಶ್, ಇನ್ಸ್‌ಪೆಕ್ಟರ್ ಜಯರಾಮ್ ಗೌಡ ಅವರ ತಂಡ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾನೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Leave a Reply