Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಂಡ್ಲೂರಿನಲ್ಲಿ ಕಿಡಿಗೇಡಿಗಳಿಂದ ಹಿಂದೂ ಬಾವುಟಕ್ಕೆ ಬೆಂಕಿ
    ಊರ್ಮನೆ ಸಮಾಚಾರ

    ಕಂಡ್ಲೂರಿನಲ್ಲಿ ಕಿಡಿಗೇಡಿಗಳಿಂದ ಹಿಂದೂ ಬಾವುಟಕ್ಕೆ ಬೆಂಕಿ

    Updated:25/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ತಾಲೂಕಿನ ಕೋಮು ಸೂಕ್ಷ್ಮ ಪ್ರದೇಶವಾದ ಕಂಡ್ಲೂರು ಬೂದಿ ಮುಚ್ಚಿದ ಕೆಂಡದಂತಾಗಿದ್ದು, ತೆರೆಮರೆಯಲ್ಲಿ ಕೋಮು ಸಂಘರ್ಷ ಮುಂದುವರಿದಿದೆ. ಪೊಲೀಸರ ಶಾಂತಿ ಸಭೆಯ ಬಳಿಕವೂ ಯಾರೋ ಕಿಡಿಗೇಡಿಗಳು ಶಾರದೋತ್ಸವಕ್ಕಾಗಿ ಹಾಕಿದ್ದ ಹಿಂದೂ ಧರ್ಮದ ಭಗವಧ್ವಜಕ್ಕೆ ಭಾನುವಾರ ತಡರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

    Click Here

    Call us

    Click Here

    ಘಟನೆಯ ವಿವರ:
    ಕಂಡ್ಲೂರಿನಲ್ಲಿ ನಡೆಸಲುದ್ದೇಶಿಸಿರುವ 50ನೇ ವರ್ಷದ ಶಾರದೋತ್ಸದ ಪ್ರಯುಕ್ತ ಪೇಟೆಯ ಸುತ್ತಲೂ ಬಂಟಿಗ್ಸ್, ಬ್ಯಾನರ್, ಬಾವುಟಗಳನ್ನು ಹಾಕಲಾಗಿತ್ತು. ಯಾರೋ ಕಿಡಿಗೇಡಿಗಳು ಶಾಂತಿ ಕದಡುವ ಸಲುವಾಗಿ ಭಾನುವಾರ ರಾತ್ರಿ ವೇಳೆಗೆ ಕಂಡ್ಲೂರು ಸೇತುವೆಯ ಸಮೀಪ ರಸ್ತೆಯ ಮೇಲ್ಬಾಗದಲ್ಲಿ ಹಾಕಲಾಗಿದ್ದ ಕೇಸರಿ ಭಗವಧ್ವಜಕ್ಕೆ ಬೆಂಕಿ ಹಚ್ಚಿದ್ದಾರೆ. (ಕುಂದಾಪ್ರ ಡಾಟ್ ಕಾಂ ವರದಿ)

    ಕಂಡ್ಲೂರಿನಲ್ಲಿ ವಾರದ ಹಿಂದಷ್ಟೇ ಶಾರದೋತ್ಸವದ ವಿಚಾರವಾಗಿಯೇ ಹಿಂದೂ ಯುವಕರ ಮೇಲೆ ಅನ್ಯಕೋಮಿನ ಹುಡುಗರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಆ ಪೈಕಿ ಪ್ರಮುಖ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲಾಗಿತ್ತು. ಕೋಮು ಸೂಕ್ಷ್ಮ ಪ್ರದೇವಾದ್ದರಿಂದ ಜಿಲ್ಲಾ ವರಿಷ್ಠಾಧಿಕಾರಿ ಅಣ್ಣಾಮಲೈ ಘಟನಾ ಸ್ಥಳಕ್ಕೆ ಭೇಟಿ ನೀಡಿ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಸಿದ್ದರು. ಕುಂದಾಪುರ ಡಿವೈಎಸ್ಪಿ ನೇತೃತ್ವದಲ್ಲಿ ಕಂಡ್ಲೂರಿನಲ್ಲಿಯೇ ಶಾಂತಿಸಭೆ ನಡೆಸಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಎರಡೂ ಕೋಮಿನ ಮುಖಂಡರುಗಳನ್ನು ಕರೆದು ಸೌಹಾರ್ದಯುತವಾಗಿ ಶಾರದೋತ್ಸವವನ್ನು ಆಚರಿಸುವಂತೆ ಕೋರಿಕೊಂಡಿದ್ದರು. ಆದರೆ ಸಭೆ ನಡೆದು ಎರಡು ದಿನಗಳು ಕಳೆಯುವ ಮೊದಲೇ ಕಿಡಿಗೇಡಿಗಳು ದುಷ್ಕೃತ್ಯ ನಡೆಸಿದ್ದಾರೆ. (ಕುಂದಾಪ್ರ ಡಾಟ್ ಕಾಂ ವರದಿ) ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಕಂಡ್ಲೂರಿನ ನಾಗರಿಕರು ಧರ್ಮದ ನಡುವೆ ಪದೆ ಪದೆ ಸಂಘರ್ಷವನ್ನು ತರುವವರ ವಿರುದ್ಧ ಕಿಡಿ ಕಾರಿದ್ದಾರೆ.

    Kandluru flag fire4 Kandluru flag fire2 Kandluru flag fire1

    Kandlur Vishwa Hindu Parishath
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025

    Comments are closed.

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.