ಸಿ.ಎ. ಫೌಂಡೇಶನ್ ಹಾಗೂ ಇಂಟರ್ ಮೀಡಿಯೇಟ್ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸಿ.ಎ. ಫೌಂಡೇಶನ್ ಹಾಗೂ ಇಂಟರ್ ಮೀಡಿಯೇಟ್ ತೇರ್ಗಡೆ ಹೊಂದಿದ ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.

Call us

Click Here

ಮೇ 2023ರಲ್ಲಿ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯ ಗ್ರೂಪ್ ಎರಡರಲ್ಲಿ ತೇರ್ಗಡೆ ಹೊಂದಿದ ಶ್ರಾವ್ಯ, ರೋಹನ್, ಚೇತನಾ, ಮಂದಾರ್ ಮತ್ತು ಗ್ರೂಪ್ ಒಂದರಲ್ಲಿ ತೇರ್ಗಡೆ ಹೊಂದಿದ ನಾದಶ್ರೀ, ರಂಜನ್, ಶಾಂಭವಿ, ಅನುಷಾ ಹಾಗೂ ಡಿಸೆಂಬರ್ 2022ರಲ್ಲಿ ನಡೆದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಂಕಿತ ಮೊಗವೀರ, ಸುಜನರಾಣಿ, ಸುಚಿ ಸಿ. ಶೆಟ್ಟಿ, ಪನ್ನಗ, ಗಣೇಶ್ ಭಟ್ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ಪ್ರೀತಿ ಹೆಗ್ಡೆ, ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಹಾಗೂ ಕಾಲೇಜಿನ ಸಿ.ಎ. ಮತ್ತು ಸಿ.ಎಸ್. ಸಂಯೋಜಕರಾದ ಸತೀಶ್ ಶೆಟ್ಟಿ ಹೆಸ್ಕತ್ತೂರು ಉಪಸ್ಥಿತರಿದ್ದರು.

Leave a Reply