ಅಂಬರ್‌ಗ್ರಿಸ್ ಹೋಲುವ ವಸ್ತು ಮಾರಾಟಕ್ಕೆ ಯತ್ನ. ಮೂವರನ್ನು ವಶಕ್ಕೆ ಪಡೆದ ಪೊಲೀಸರು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಅಂಬರ್‌ಗ್ರಿಸ್ [ತಿಮಿಂಗಲ ವಾಂತಿ] ಎಂದು ಹೇಳಿ ವಂಚಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಶಿವಮೊಗ್ಗ ಮೂಲದವರಾದ ನಿರಂಜನ್ ಎಸ್ (26), ಮಿಲನ್ ಮೋನಿಶ್ ಶೆಟ್ಟಿ (27), ಪೃಥ್ವಿ ಡಾಮಿಕ್ (31) ಬಂಧಿತರು.

Call us

Click Here

ಬೈಂದೂರು ಹೊಸ ನಿಲ್ದಾಣದ ಬಳಿಕ ತಿಮಿಂಗಲದ ವಾಂತಿ ಎಂದು ಹೇಳಿಕೊಂಡು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ತಿಮಿಂಗಲ ವಾಂತಿ ಎಂದು ಹೇಳಿ 10 ಲಕ್ಷ ರೂ ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದು ಗಮನಕ್ಕೆ ಬಂದಿದೆ.

ಆಪಾದಿತರನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದಿದ್ದು ಅವರಿಂದ ಸುಮಾರು 3 ಕೆ.ಜಿ 910 ಗ್ರಾಂ ತೂಕದ ಅಂಬರ್ಗ್ರಿಸ್ ಹೊಲುವ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಬೈಂದೂರು ಉಪನಿರೀಕ್ಷಕ ನಿರಂಜನ್ ಗೌಡ, ಸಿಬ್ಬಂದಿಗಳಾದ ಅಶೋಕ್ ರಾತೋಡ್, ಶ್ರೀನಿವಾಸ್, ಸುಜಿತ್ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply