Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಡಾಳಿಯಲ್ಲಿ ಹಡಿಲು ಭೂಮಿ ನಾಟಿ ಕಾರ್ಯಕ್ಕೆ ಜಿ.ಪಂ. ಸಿಇಒ ಚಾಲನೆ
    ಊರ್ಮನೆ ಸಮಾಚಾರ

    ಹಡಾಳಿಯಲ್ಲಿ ಹಡಿಲು ಭೂಮಿ ನಾಟಿ ಕಾರ್ಯಕ್ಕೆ ಜಿ.ಪಂ. ಸಿಇಒ ಚಾಲನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಜು.25:
    ಕುಂದನಾಡು ರೈತ ಉತ್ಪಾದಕರ ಕಂಪೆನಿ ನೇತೃತ್ವದಲ್ಲಿ ಉಡುಪಿ ಜಿ.ಪಂ., ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೃಷಿ ಇಲಾಖೆ ಉಡುಪಿ, ಕುಂದಾಪುರ ತಾ.ಪಂ., ಅಂಪಾರು ಗ್ರಾ.ಪಂ., ರೋಟರಿ ಕ್ಲಬ್ ಅಂಪಾರು ಹಾಗೂ ವನಶ್ರೀ ಸಂಜೀವಿನಿ ಒಕ್ಕೂಟ ಅಂಪಾರಿನ ಸಂಯುಕ್ತ ಆಶ್ರಯದಲ್ಲಿ ಅಂಪಾರು ಗ್ರಾಮದ ಹಡಾಳಿಯಲ್ಲಿ ನಡೆದ ಜಿಲ್ಲಾ ಮಟ್ಟದ ಹಡಿಲು ಭೂಮಿ ನಾಟಿ ಕಾರ್ಯಕ್ಕೆ ಜಿ.ಪಂ. ಸಿಇಒ ಪ್ರಸನ್ನ ಎಚ್. ಚಾಲನೆ ನೀಡಿದರು.

    Click Here

    Call us

    Click Here

    ಈ ವೇಳೆ ಸಿಇಒ ಪ್ರಸನ್ನ ಅವರು ಕೋಣಗಳನ್ನು ಕಟ್ಟಿ ಗದ್ದೆಯನ್ನು ಉಳುಮೆ ಮಾಡಿದ್ದಲ್ಲದೆ, ನೇಜಿ ನೆಟ್ಟು ಖುಷಿಪಟ್ಟರು. ಬಳಿಕ ಅವರು ಮಾತನಾಡಿ, ಜಿಲ್ಲೆಯ 155ಗ್ರಾ.ಪಂ.ಗಳಲ್ಲಿ ಪ್ರತೀ ಗ್ರಾ.ಪಂ.ಗೆ ತಲಾ 10 ಎಕರೆ ಹಡಿಲು ಭೂಮಿ ನಾಟಿ ಮಾಡುವ ಗುರಿಯನ್ನು ಹೊಂದಿದ್ದೇವೆ. ಇದರ ಪ್ರಕಾರ ಕನಿಷ್ಠ 1,550 ಎಕರೆ ಹಡಿಲು ಭೂಮಿ ಹಸನಾಗಲಿದೆ. ಈವರೆಗೆ 1.130 ಎಕರೆ ಭೂಮಿಯನ್ನು ಗುರುತಿಸಿ, ನಾಟಿ ಮಾಡುವ ಕಾರ್ಯವಾಗುತ್ತಿದೆ ಎಂದರು.

    ಜಿ.ಪಂ. ಸಿಇಒ ಅವರೊಂದಿಗೆ ತಾ.ಪಂ. ಇಒ ಭಾರತಿ, ಸಂಜೀವಿನಿ ಒಕ್ಕೂಟದ ಮಹಿಳೆಯರು, ಕುಂದನಾಡು ಒಕ್ಕೂಟದ ಸದಸ್ಯರು, ಗ್ರಾ.ಪಂ. ಸದಸ್ಯರು, ಊರವರು ಸಹ ನಾಟಿ ಕಾರ್ಯದಲ್ಲಿ ಭಾಗಿಯಾದರು.

    ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದನಾಡು ರೈತ ಉತ್ಪಾದಕರ ಕಂಪೆನಿಯ ಬಲಾಡಿ ಸಂತೋಷ್ ಕುಮಾರ್ ಶೆಟ್ಟಿ ಮಾತನಾಡಿ, ಜಿಲ್ಲಾ ಪಂಚಾಯತ್ ಆಶಯದಂತೆ ನಮ್ಮ ಸಂಸ್ಥೆಯಿಂದಲೂ ಹಡಿಲು ಭೂಮಿ ನಾಟಿ, ನೈಸರ್ಗಿಕ ಆಹಾರವನ್ನು ಹೆಚ್ಚೆಚ್ಚು ಉತ್ಪಾದಿಸುವ ಗುರಿ ಹಾಕಿಕೊಂಡಿದ್ದೇವೆ. ಅದರ ಭಾಗವಾಗಿ ಇಲ್ಲಿ ಕಳೆದ 3-4 ವರ್ಷಗಳಿಂದ ಹಡಿಲು ಬಿಟ್ಟಿರುವ ಗದ್ದೆಗಳಲ್ಲಿ ನಾಟಿ ಮಾಡಲಾಗುತ್ತಿದೆ. ಈ ವರ್ಷ 3 ಹಂಗಾಮಿನಲ್ಲೂ ಬೆಳೆಯುವ ಗುರಿಯಿದ್ದು, ತರಕಾರಿಯನ್ನು ಬೆಳೆಯುತ್ತೇವೆ ಎಂದರು.

    ಕುಂದಾಪುರ ತಾ.ಪಂ. ಕಾರ್ಯನಿರ್ವಹಣಾಧಿಖಾರಿ ಭಾರತಿ, ಕುಂದಾಪುರ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ರೂಪಾ ಮಾಡ, ಅಂಪಾರು ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಕುಮಾರ್ ಶೆಟ್ಟಿ ಮಾತನಾಡಿದರು.

    Click here

    Click here

    Click here

    Click Here

    Call us

    Call us

    ಹಿರಿಯ ಕೃಷಿಕರಾದ ರಘುರಾಮ ಶೆಟ್ಟಿ, ಮಂಜಯ್ಯ ಶೆಟ್ಟಿ ಹಾಗೂ ಭಾಸ್ಕರ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು.

    ಅಂಪಾರು ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮಿ ಶೆಟ್ಟಿ, ಸದಸ್ಯರು, ವನಶ್ರೀ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ರೋಶನಿ ಶೆಟ್ಟಿ, ಪದಾಧಿಕಾರಿಗಳು, ಸದಸ್ಯರು, ರೋಟರಿ ಕ್ಲಬ್ ಪದಾಧಿಕಾರಿಗಳು, ಕಾರ್ಕಳ ತಾಲೂಕು ಕಸಾಪ ಅಧ್ಯಕ್ಷೆ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ತಾ.ಪಂ. ಮ್ಯಾನೇಜರ್ ರಾಮಚಂದ್ರ ಮಯ್ಯ, ಮತ್ತಿತರ ಅಧಿಕಾರಿಗಳು, ಉಪಸ್ಥಿತರಿದ್ದರು.

    ವಕೀಲರಾದ ಶಾನ್ಕಟ್ಟು ಉಮೇಶ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು. ಗ್ರಾ.ಪಂ. ಸದಸ್ಯ ಗಣೇಶ್ ಅಡಿಗ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಪ.ಜಾ & ಪ.ಪಂದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್‌ ವಿತರಣೆ

    26/05/2026

    ಶಂಕರನಾರಾಯಣ: 1990ರ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳ ಕುಟುಂಬ ಮಿಲನ ಕಾರ್ಯಕ್ರಮ

    26/05/2026

    ಜನತಾ ಪಿಯು ಕಾಲೇಜ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್‌, ಉಡುಪಿ ಜಿಲ್ಲೆಗೆ ಪ್ರಥಮ ರ‍್ಯಾಂಕ್‌

    26/05/2026
    Leave A Reply Cancel Reply

    18 + four =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಪ.ಜಾ & ಪ.ಪಂದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್‌ ವಿತರಣೆ
    • ಶಂಕರನಾರಾಯಣ: 1990ರ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳ ಕುಟುಂಬ ಮಿಲನ ಕಾರ್ಯಕ್ರಮ
    • ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ
    • ಜನತಾ ಪಿಯು ಕಾಲೇಜ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್‌, ಉಡುಪಿ ಜಿಲ್ಲೆಗೆ ಪ್ರಥಮ ರ‍್ಯಾಂಕ್‌
    • ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಲಿ: ಡಾ. ನಾಗಲಕ್ಷ್ಮೀ ಚೌಧರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.