Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಂಡ್ಸೆ ಗ್ರಾಮವನ್ನು ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಿಂದ ಕೈಬಿಡಲು ಆಗ್ರಹ
    ಊರ್ಮನೆ ಸಮಾಚಾರ

    ವಂಡ್ಸೆ ಗ್ರಾಮವನ್ನು ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಿಂದ ಕೈಬಿಡಲು ಆಗ್ರಹ

    Updated:20/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಪಶ್ಚಿಮ ಘಟ್ಟ ಜೀವ ಸೂಕ್ಷ್ಮ ಪ್ರದೇಶಗಳ ವ್ಯಾಪ್ತಿಗೆ ಸೇರಿಸಲಾಗಿದೆ ಎನ್ನಲಾದ ಪ್ರದೇಶಗಳನ್ನು ಅಧಿಕಾರಿಗಳ ಮಟ್ಟದಲ್ಲಿ ಪ್ರಥಮವಾಗಿ ಗಡಿ ಗುರುತಿಸುವಿಕೆ, ಭೌಗೋಳಿಕ ಸಮೀಕ್ಷೆಯನ್ನು ಮಾಡಬೇಕಾಗಿತ್ತು. ಆ ಕೆಲಸ ಆಗದೇ ಇವತ್ತು ಗೊಂದಲಗಳು ಉಂಟಾಗಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಸ್ಪರ ದೋಷರೋಪಣೆಯನ್ನು ಮಾಡುವುದನ್ನು ಬಿಟ್ಟು ರೈತರು, ಜನಸಾಮಾನ್ಯರ ಹಿತಾಸಕ್ತಿಯನ್ನು ಎತ್ತಿ ಹಿಡಿಯಬೇಕಾಗಿದೆ. ಜನರಿಗೆ ಮತ್ತೆ ಮತ್ತೆ ಸಮಸ್ಯೆಗಳು ಆಗಬಾರದು ಎಂದು ವಿಧಾನ ಪರಿಷತ್ ಸದಸ್ಯ, ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಪ್ರತಾಪಚಂದ್ರ ಶೆಟ್ಟಿ ಹೇಳಿದರು.

    Click Here

    Call us

    Click Here

    ವಂಡ್ಸೆ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಅರಣ್ಯ ಇಲಾಖೆಯ ವಿಶ್ರಾಂತಿದಾಮದಲ್ಲಿ ಪಶ್ಚಿಮ ಘಟ್ಟ ಸೂಕ್ಷ್ಮ ಪ್ರದೇಶದಿಂದ ವಂಡ್ಸೆ ಗ್ರಾಮವನ್ನು ಕೈ ಬಿಡಬೇಕು ಎನ್ನುವ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಲ್‌ಕರ್ ಮಾತನಾಡಿ, ಈ ಹಿಂದೆ 35ಗ್ರಾಮಗಳು ಉಡುಪಿ ಜಿಲ್ಲೆಯಲ್ಲಿ ವರದಿ ವ್ಯಾಪ್ತಿಗೆ ಬಂದಿತ್ತು. ನಂತರ ಅದು 22ಕ್ಕೆ ಇಳಿದಾಗ ವಂಡ್ಸೆ ಗ್ರಾಮ ವರದಿಯ ವ್ಯಾಪ್ತಿಯಿಂದ ಹೊರಗೂಳಿಯಿತು. ಮತ್ತೆ ಹೇಗೆ ಸೇರ್ಪಡೆಗೊಂಡಿತ್ತು ಎನ್ನುವುದು ವಿಚಿತ್ರವಾಗಿದೆ ಎಂದರು.

    ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ಡಾ.ಅತುಲ್ ಕುಮಾರ್ ಶೆಟ್ಟಿ ಮಾತನಾಡಿ,ಕಂದಾಯ ಇಲಾಖೆ-ಅರಣ್ಯ ಇಲಾಖೆ ಜಂಟೀ ಸಮೀಕ್ಷೆ ಮಾಡಿಲ್ಲ. ಗ್ರಾಮಗಳ ನಕ್ಷೆ ಸಿದ್ಧಪಡಿಸಿಲ್ಲ. ಗ್ರಾಮ ಮಟ್ಟದಲ್ಲಿ ಅಧಿಕಾರಿಗಳ ಸಭೆ ನಡೆಸಿಲ್ಲ. ನಾವು ಆಕ್ಷೇಪಿಸಿ ನೀಡಿದ ಅರ್ಜಿಯನ್ನು ಸರಿಯಾಗಿ ಚರ್ಚಿಸಿ ತೀರ್ಮಾನಕ್ಕೆ ಬಂದಿಲ್ಲ. ಹಿಂದೆ ಅಭಯಾರಣ್ಯ ಸೇರ್ಪಡೆಯ ಸಂದರ್ಭ ಕೂಡಾ ಅವೈಜ್ಞಾನಿಕವಾಗಿ ಮೂಕಾಂಬಿಕಾ ಅಭಯರಣ್ಯ ವ್ಯಾಪ್ತಿಗೆ ಹಲವು ಗ್ರಾಮಗಳನ್ನು ಸೇರ್ಪಡೆಗೊಳಿಸಲಾಯಿತು. ಈ ಬಾರಿ ನಮಗೆ ಸಕಾರಾತ್ಮಕವಾದ ಫಲಿತಾಂಶ ಬೇಕು ಎಂದರು.

    ಬಾ.ಕಿ.ಸಂ.ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಮಾತನಾಡಿ, ಪಶ್ಚಿಮ ಘಟ್ಟ ಜೀವ ಸೂಕ್ಷ್ಮ ಪ್ರದೇಶಗಳ ಗುರುತಿಸುವಿಕೆ ಆರಂಭಗೊಂಡು ಎರಡುವರೆ ವರ್ಷ ಆಯಿತು. ರಾಜ್ಯ ಸಮಿತಿ, ಜಿಲ್ಲಾ ಸಮಿತಿಗಳು ರಚನೆ ಆದವು. ಆ ಸಮಿತಿಗಳು ಗ್ರಾಮ ಮಟ್ಟದಲ್ಲಿ ಸಭೆ ನಡೆಸಿದ್ದಾವೆಯೇ? ಗ್ರಾಮದ ನಕ್ಷೆಯನ್ನು ಇಟ್ಟುಕೊಂಡು ಸಮೀಕ್ಷೆ ಮಾಡಿದ್ದಾವೆಯೇ? ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ನೀಡಿಲ್ಲವೇ? ಕೇಂದ್ರ ಮಟ್ಟದಲ್ಲಿ ಸಂಸದರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಯಾವ ನಿರ್ಣಯ ಅಂಗೀಕರಿಸಲಾಯಿತು. ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಾಸ್ತಾವಿತ ಜೀವ ಸೂಕ್ಷ್ಮ ಪ್ರದೇಶದಲ್ಲಿ ಹುಲಿ ಕಾರಿಡಾರ್ ಮಾಡುವ ಉದ್ದೇಶ ಏನು ಎಂದು ಪ್ರಶ್ನಿಸಿದರು.

    ಗ್ರಾ.ಪಂ.ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಮಾತನಾಡಿ, ಪಶ್ಚಿಮ ಘಟ್ಟ ಜೀವ ಸೂಕ್ಷ್ಮ ಪ್ರದೇಶಕ್ಕೆ ಸೇರುವ ಯಾವುದೇ ಆರ್ಹತೆ ಇಲ್ಲದ ವಂಡ್ಸೆ ಗ್ರಾಮವನ್ನು ಸೇರಿಸಿದ್ದು ವಿಪರ್ಯಾಸ. ಈ ಗ್ರಾಮ ಒಂದೆಡೆ ಸಿಆರ್‌ಜೆಡ್ ವ್ಯಾಪ್ತಿಗೂ ಒಳಪಟ್ಟಿದ್ದು ಪರಿಗಣಿಸಿದರೆ ಸಮುದ್ರ ಭಾಗಕ್ಕೆ ಹತ್ತಿರವಿದೆ ಎಂದಾಗುತ್ತದೆ. ಕೊಡಚಾದ್ರಿಯಿಂದ 25 ಕಿ.ಮೀ.ದೂರದಲ್ಲಿರುವ ಈ ಗ್ರಾಮವನ್ನು ಸೇರಿಸಿದ್ದು ಇವತ್ತು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಅಧಿಕಾರಿಗಳು ಸ್ಪಷ್ಟವಾದ ಉತ್ತರ ನೀಡಬೇಕು ಎಂದರು.

    Click here

    Click here

    Click here

    Call us

    Call us

    ಗ್ರಾಮಮಟ್ಟದಲ್ಲಿ ಆಕ್ಷೇಪಗಳ ಸಲ್ಲಿಕೆಗೆ ನ.2ರ ತನಕ ಅವಕಾಶವಿದ್ದು, ಪ್ರತಿ ಗ್ರಾಮ ಮಟ್ಟದಿಂದ ಆಕ್ಷೇಪ ಸಲ್ಲಿಸುವುದು, ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಸಮಿತಿ ರಚಿಸಿಕೊಂಡು ಮುಂದಿನ ಹೋರಾಟ ಕೈಗೆತ್ತಿಕೊಳ್ಳುವುದು, ಅ.28ಕ್ಕೆ ಕೆರಾಡಿಗೆ ಆಗಮಿಸಲಿರುವ ಸಂಸದ ಬಿ.ಎಸ್.ಯಡ್ಯೂರಪ್ಪನವರ ಜೊತೆ ಈ ಬಗ್ಗೆ ಚರ್ಚಿಸುವ ನಿರ್ಣಯಗಳನ್ನು ಅಂಗೀಕರಿಸಲಾಯಿತು.

    ಜಿ.ಪಂ.ಸದಸ್ಯೆ ಇಂದಿರಾ ಶೆಟ್ಟಿ, ತಾ.ಪಂ.ಸದಸ್ಯರಾದ ಎಚ್.ಮಂಜಯ್ಯ ಶೆಟ್ಟಿ, ರಮೇಶ ಗಾಣಿಗ, ಎಸಿಎಫ್ ಸತೀಶ್ ಬಾಬ ರೈ, ತಹಶೀಲ್ದಾರ್ ಗಾಯತ್ರಿ ನಾಯಕ್, ಗ್ರಾ.ಪಂ.ಉಪಾಧ್ಯಕ್ಷೆ ಶಾರದಾ ರುದ್ರಯ್ಯ ಆಚಾರ್ಯ, ಶಂಕರನಾರಾಯಣ ಗ್ರಾ.ಪಂ.ಅಧ್ಯಕ್ಷ ಸದಾಶಿವ ಶೆಟ್ಟಿ, ಜಡ್ಕಲ್ ಗ್ರಾ.ಪಂ.ಅಧ್ಯಕ್ಷ ಅನಂತ ಮೂರ್ತಿ, ಕೊಲ್ಲೂರು ಗ್ರಾ.ಪಂ.ನ ಅಧ್ಯಕ್ಷ ವಿಶ್ವನಾಥ ಅಡಿಗ, ಹಳ್ಳಿಹೊಳೆ ಗ್ರಾ.ಪಂ.ಅಧ್ಯಕ್ಷೆ ಭಾಗೀರಥಿ, ಚಿತ್ತೂರು ಗ್ರಾ.ಪಂ.ಅಧ್ಯಕ್ಷ ಸಂತೋಷ ಮಡಿವಾಳ, ವಂಡ್ಸೆ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ವಂಡಬಳ್ಳಿ ಜಯರಾಮ ಶೆಟ್ಟಿ, ವಿ.ಕೆ.ಶಿವರಾಮ ಶೆಟ್ಟಿ, ಶ್ರೀನಿವಾಸ ಪೂಜಾರಿ, ಅರಣ್ಯ ಸಮಿತಿ ಅಧ್ಯಕ್ಷ ಬಗ್ವಾಡಿ ರಾಜೀವ ಶೆಟ್ಟಿ, ವಿವಿಧ ಸಂಘಟನೆಗಳ ಪ್ರಮುಖರು, ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು. ಉದಯಕುಮಾರ ಶೆಟ್ಟಿ ಸ್ವಾಗತಿಸಿ, ಪಂಚಾಯತ್ ಕಾರ್ಯದರ್ಶಿ ಶಂಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಪಿಡಿಒ ಹೆಚ್.ವಿ ಇಬ್ರಾಹಿಂಪುರ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    4 + five =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.