Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಜಿ.ಎಸ್.ಬಿ ದೇವಾಲಯಗಳ ಒಕ್ಕೂಟದ ಸುಕೃತ ಸಮಾವೇಶ
    ಊರ್ಮನೆ ಸಮಾಚಾರ

    ಕುಂದಾಪುರ: ಜಿ.ಎಸ್.ಬಿ ದೇವಾಲಯಗಳ ಒಕ್ಕೂಟದ ಸುಕೃತ ಸಮಾವೇಶ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ದೇವರು ನಮಗೆ ನೀಡಿದ ವರ, ಚಿನ್ನ, ಬೆಳ್ಳಿ, ಕಾರು, ಬಂಗಲೆ ಅಲ್ಲ. ಮುಖ್ಯವಾಗಿ ನಮಗೆ ನೀಡಿದ ವರ, ಸಮಯ. ಈ ಸಮಯವನ್ನು ಸರಿಯಾಗಿ ಸದುಪಯೋಗ ಮಾಡಿಕೊಂಡರೆ ಜೀವನದಲ್ಲಿ ಬೇರೆ ಎಲ್ಲಾ ರೀತಿಯ ಸಂಪತ್ತನ್ನು ಗಳಿಸಬಹುದು. ವಿದ್ಯಾರ್ಥಿಗಳು ತಮ್ಮ ಪ್ರತಿಭೆ, ನಡೆ-ನುಡಿ, ಗುರಿ ಸಾಧನೆಯ ಹಾದಿ, ಎಲ್ಲ ವಿಷಯಗಳಲ್ಲೂ ಪರಿಪೂರ್ಣತೆ ಪಡೆಯಲು ಶಿಸ್ತು, ಶ್ರದ್ಧೆಯಿಂದ ಶ್ರಮಿಸಬೇಕು. ದೇವರ ಮೇಲೆ ವಿಶ್ವಾಸವಿಟ್ಟು, ಗುರು ಹಿರಿಯರಲ್ಲಿ ಗೌರವ ಇಟ್ಟು, ಮಾತಾ ಪಿತಾರ ಮಾರ್ಗದರ್ಶನದಲ್ಲಿ ಮುನ್ನಡೆದರೆ ಯಶಸ್ಸು ಖಂಡಿತ ಎಂದು ಉಡುಪಿ ಕುಂಜಿಬೆಟ್ಟು ಶಾರದಾ ವಸತಿ ಶಾಲೆಯ ನಿರ್ದೇಶಕರಾದ ವಿದ್ಯಾವಂತ ಆಚಾರ್ಯ ಹೇಳಿದರು.

    Click Here

    Call us

    Click Here

    ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜಿ.ಎಸ್.ಬಿ. ದೇವಾಲಯಗಳ ಒಕ್ಕೂಟ ಮಂಗಳೂರು ಸಂಘಟನೆಯ ಕುಂದಾಪುರ ವಲಯದ ಸುಕೃತ ಸಮಾವೇಶ ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡುತ್ತಾ ನನ್ನಿಂದ ಸಾಧ್ಯವಿದೆ ಎಂಬ ಆತ್ಮ ವಿಶ್ವಾಸವಿರಿಸಿಕೊಂಡು ಯುವಕರು ಮುನ್ನಡೆದರೆ ಗುರಿ ಸಾಧನೆ ಮಾಡಲು ಸಾಧ್ಯ ಎಂದು ಹಲವು ನಿದರ್ಶನಗಳನ್ನು ನೀಡಿದ ಅವರು, ಯಾವುದೇ ಅನಾನುಕೂಲತೆಗಳನ್ನು ಗೆದ್ದು ಜಯ ಸಾಧಿಸಲು ಸಾಧ್ಯವಿದೆ ಗೌಡ ಸಾರಸ್ವತ ಸಮಾಜದವರಿಗೆ ಬುದ್ಧಿಶಕ್ತಿ, ಜ್ಞಾನ, ಕರ್ತತ್ವ ಶಕ್ತಿ ದೇವರು ನೀಡಿದ್ದಾನೆ. ಧರ್ಮಕ್ಕಾಗಿ ನಮ್ಮವರು ಬಹಳ ತ್ಯಾಗ ಮಾಡಿದ್ದಾರೆ. ಜೀವನವನ್ನು ಸದುಪಯೋಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಿದರು.

    ಸಮಾವೇಶದ ಅಧ್ಯಕ್ಷತೆಯನ್ನು ಕುಂದಾಪುರ ವಲಯದ ಅಧ್ಯಕ್ಷ ಡಿ. ಗೋಪಾಲಕೃಷ್ಣ ಕಾಮತ್ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ. ರಾಧಾಕೃಷ್ಣ ಶೆಣೈ, ಜಿ.ಎಸ್.ಬಿ. ದೇವಾಲಯಗಳ ಒಕ್ಕೂಟದ ಅಧ್ಯಕ್ಷ ಅತುಲ್ ಕುಡ್ವ ಮಂಗಳೂರು, ಕಾರ್ಯದರ್ಶಿ ಆರ್ಬೆಟ್ಟು ಮಾಧವ ಕಾಮತ್, ಕೋಟೇಶ್ವರ ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಶ್ರೀಧರ ಕಾಮತ್ ಭಾಗವಹಿಸಿ, ಶುಭ ಹಾರೈಸಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

    ವೇ.ಮೂ.ಜಿ. ಪ್ರಕಾಶ್ ಭಟ್ ಚೇಂಪಿ, ಸಂಸ್ಕಾರ ಸುಧೆ ಕಾರ್ಯಕ್ರಮ ಮೂಲಕ ಮೌಲಿಕ ಜ್ಞಾನ ಪರಿಚಯಿಸಿದರು.

    Click here

    Click here

    Click here

    Call us

    Call us

    ಹಿರಿಯ ಸಾಧಕರಾದ ವೇ.ಮೂ. ಬಸ್ರೂರು ಪಾಂಡುರಂಗ ಆಚಾರ್ಯ ಉಡುಪಿ, ಡಾ. ಎಸ್.ಎನ್. ಪಡಿಯಾರ್ ಕುಂದಾಪುರ, ಎಚ್. ಗಣೇಶ ಕಾಮತ್ ಗಂಗೊಳ್ಳಿ, ದಕ್ಕೇರಬಾಳು ಮಾಧವ ಕಾಮತ್ ಸಿದ್ದಾಪುರ, ಆಟಕೆರೆ ಲಕ್ಷ್ಮಣ ಗೋವಿಂದ್ರಾಯ ಪೈ ಕೋಟೇಶ್ವರ, ಜಿ. ಪದ್ಮನಾಭ ಕಿಣಿ ಗಾವಳಿ, ಶ್ರೀಮತಿ ಚಂದ್ರಮತಿ ಸದಾಶಿವ ನಾಯಕ್ ಚೇಂಪಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇ.ಮೂ. ದಾಮೋದರ ಆಚಾರ್ಯ ಬಸ್ರೂರು ಇವರಿಗೆ ಮರಣೋತ್ತರ ಗೌರವ ನೀಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

    ಕೆ. ರಾಧಾಕೃಷ್ಣ ಶೆಣೈ ಸ್ವಾಗತಿಸಿದರು. ಗಣೇಶ ನಾಯಕ ಶಿರಿಯಾರ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.