ದೋಹಾದ ಅಂತರಾಷ್ಟ್ರೀಯ ಕಿವುಡರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ಥಾನ ಪಡೆದ ಪೃಥ್ವಿರಾಜ್ ಶೆಟ್ಟಿ ಹುಂಚನಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕತಾರ್ನಲ್ಲಿ ವರ್ಷಾಂತ್ಯ ನಡೆಯಲಿರುವ ಅಂತರಾಷ್ಟ್ರೀಯ ಕಿವುಡರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಬೈಂದೂರು ತಾಲೂಕು ಗೋಳಿಹೊಳೆಯ ಪೃಥ್ವಿರಾಜ್ ಶೆಟ್ಟಿ ಹುಂಚನಿ ಸ್ಥಾನ ಪಡೆದಿದ್ದಾರೆ.

Call us

Click Here

32 ವರ್ಷದ ಪೃಥ್ವಿರಾಜ್ ಭಾರತದ ಕಿವುಡರ ಕ್ರಿಕೆಟ್ ತಂಡದ ಪ್ರಧಾನ ವೇಗಿ ಹಾಗೂ ಕೆಳ ಕ್ರಮಾಂಕದ ಬ್ಯಾಟರ್ ಆಗಿದ್ದಾರೆ. ಇತ್ತೀಚೆಗೆ ನಡೆದ ತ್ರಿಕೋನ ಏಕದಿನ ಸರಣಿ, ಅದಕ್ಕೂ ಮೊದಲು ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು.

ಡಿ. 1ರಿಂದ ಡಿ. 12ರ ವರೆಗೆ ಕತಾರ್ನ ದೋಹಾದಲ್ಲಿ ವಿಶ್ವಕಪ್ ಪಂದ್ಯಾವಳಿ ನಡೆಯಲಿದೆ. ವೀರೇಂದ್ರ ಸಿಂಗ್ ಭಾರತ ತಂಡವನ್ನು ಮುನ್ನಡೆಸಲಿದ್ದು, ಆಲ್ರೌಂಡರ್ ಸಾಯ್ ಆಕಾಶ್ ಉಪನಾಯಕನಾಗಿದ್ದಾರೆ. ಪೃಥ್ವಿರಾಜ್ ಶೆಟ್ಟಿ ಹುಂಚನಿ ಈ ತಂಡದಲ್ಲಿರುವ ಕರ್ನಾಟಕದ ಏಕೈಕ ಆಟಗಾರ.

ಕರ್ನಾಟಕ ಮೂಗರ ಕ್ರಿಕೆಟ್ ತಂಡದ ಆಟಗಾರನಾಗಿ, ಕರ್ನಾಟಕ ತಂಡದ ನಾಯಕನಾಗಿರುವ ಪ್ರಥ್ವಿರಾಜ್ ಅವರು, ಗೋಳಿಹೊಳೆ ಗ್ರಾಮದ ಹುಂಚನಿಯ ದಿ| ಸುಭಾಶ್ಚಂದ್ರ ಶೆಟ್ಟಿ ಹಾಗೂ ಶೀಲಾವತಿ ದಂಪತಿಯ ಪುತ್ರರಾಗಿದ್ದಾರೆ.

Leave a Reply