ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್‌ನಿಂದ ಶಿಕ್ಷಕ ಸನ್ಮಾನ ಕಾರ್ಯಕ್ರಮ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ದ.ಕ-ಉಡುಪಿ ಜಿಲ್ಲೆ. ಕುಂದಾಪುರ-ಬೈಂದೂರು ವಲಯವು ಶಿಕ್ಷಕರ ದಿನಾಚರಣೆ ಅಂಗವಾಗಿ ಕುಂದಾಪುರದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕ ಸನ್ಮಾನ ಕಾರ್ಯಕ್ರಮವನ್ನು ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಉದ್ಘಾಟಿಸಿದರು.

Call us

Click Here

ಸಂಸ್ಥೆಯ ನಿಯೋಜಿತ ಅಧ್ಯಕ್ಷರಾದ ದಿವಾಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರ ಸನ್ಮಾನದ ಅಂಗವಾಗಿ ನರೇಂದ್ರ ಎಸ್ ಗಂಗೊಳ್ಳಿ ಅವರ ಬಹುಮುಖಿ ಸೇವಾ ಸಾಧನೆಯನ್ನು ಗುರುತಿಸಿ ಸಂಸ್ಥೆಯ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

. ಈ ಸಂದರ್ಭದಲ್ಲಿ ಸಲಹಾ ಸಮಿತಿ ಅಧ್ಯಕ್ಷ ನಾಗರಾಜ್ ರಾಯಪ್ಪನಮಠ, ನಿಕಟ ಪೂರ್ವ ಅಧ್ಯಕ್ಷ ರಾಜಾ ಮಠದಬೆಟ್ಟು, ನಿಯೋಜಿತ ಕಾರ್ಯದರ್ಶಿ ದಿನೇಶ್ ರಾಯಪ್ಪನಮಠ ನಿಯೋಜಿತ ಸಲಹಾ ಸಮಿತಿ ಅಧ್ಯಕ್ಷ ದಿನೇಶ್ ಗೋಡೆ, ಉಪಾಧ್ಯಕ್ಷರಾದ ರಾಘವೇಂದ್ರ ಭಟ್ ,ಪ್ರಕಾಶ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾ ಛಾಯಾಕಾರ್ಯದರ್ಶಿ ಅಮೃತ ಬೀಜಾಡಿ ಸನ್ಮಾನ ಪತ್ರ ವಾಚಿಸಿದರು. ನಾಗೇಶ್ ಕೋಟ ಕಾರ್ಯಕ್ರಮವನ್ನು ನಿರೂಪಿಸಿದರು , ಸುರೇಶ್ ಜಮದಗ್ನಿ ವಂದಿಸಿದರು.

Leave a Reply