Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉದಯ್ ಕೊಠಾರಿ ಅವರಿಗೆ ಶೆಫಿನ್ಸ್ ಕ್ರಿಯಾಶೀಲ ಶಿಕ್ಷಕ ಪ್ರಶಸ್ತಿ
    Uncategorized

    ಉದಯ್ ಕೊಠಾರಿ ಅವರಿಗೆ ಶೆಫಿನ್ಸ್ ಕ್ರಿಯಾಶೀಲ ಶಿಕ್ಷಕ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನ ಅಂಗವಾಗಿ ಶೆಫಿನ್ಸ್ ಸಂಸ್ಥೆಯಿಂದ ಅತಿಥಿ ಹಾಗೂ ಗೌರವ ಶಿಕ್ಷಕರ ತರಬೇತಿಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯೆಡಾಡಿ-ಮತ್ಯಾಡಿಯಲ್ಲಿ ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ತರಬೇತಿಗೆ ಕುಂದಾಪುರ ತಾಲೂಕಿನ 8 ಶಾಲೆಯ 20 ಶಿಕ್ಷಕರು ಭಾಗವಹಿಸಿದ್ದು, ಅವರ ನಡುವೆ ಶೆಫಿನ್ಸ್ ಕ್ರಿಯಾಶೀಲ ಶಿಕ್ಷಕ ಪ್ರಶಸ್ತಿಗಾಗಿ ಸ್ಪರ್ಧೆ ಯನ್ನು ಏರ್ಪಡಿಸಲಾಗಿತ್ತು. ಎಲ್ಲಾ ಅತಿಥಿ/ ಗೌರವ ಶಿಕ್ಷಕರೂ ತಾವು ಪಾಠ ಮಾಡುವ ವಿಷಯದಲ್ಲಿ ಬಹಳ ಅದ್ಭುತವಾಗಿ ಬಹಳಷ್ಟು ಟೀಚಿಂಗ್ ಎಯ್ಡ್ ಜೊತೆಗೆ ಭಾಗವಹಿಸಿ, ತಮ್ಮ ಅಧ್ಯಾಪನದಲ್ಲಿನ ಕ್ರಿಯಾಶೀಲತೆಯನ್ನು ಪ್ರದರ್ಶಿಸಿದರು. ಮೂರು ಸುತ್ತಿನ ಈ ಸ್ಪರ್ದೆಯ ಅಂತಿಮ ಸುತ್ತಿನಲ್ಲಿ ಬಿದ್ಕಲ್ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನಾಗರತ್ನ ಹಾಗೂ ಜಪ್ತಿ ರಾಮಚಂದ್ರ ಅನುದಾನಿತ ಶಾಲೆಯ ಉದಯ್ ಕೊಠಾರಿ ಮತ್ತು ವಿಜಯ್ ಕಣದಲ್ಲಿದ್ದರು.

    ಕೊನೆಯ ಸುತ್ತಿನಲ್ಲಿ ರಾಮಚಂದ್ರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಜಪ್ತಿಯ ಗೌರವ ಶಿಕ್ಷಕರಾದ ಉದಯ ಕೊಠಾರಿ ಉಳಿದೆಲ್ಲ ಶಿಕ್ಷಕರ ಮೆಚ್ಚುಗೆ ಪಡೆದು, ಶೆಫಿನ್ಸ್ ಕ್ರಿಯಾಶೀಲ ಶಿಕ್ಷಕ ಪ್ರಶಸ್ತಿಗೆ ಭಾಜನರಾದರು. ಅವರು ಜಪ್ತಿಯ ಶಾಲೆಯಲ್ಲಿ ಶಿಕ್ಷಕರಾಗಿ 10 ವರ್ಷ ಸೇವೆ ಸಲ್ಲಿಸಿದ್ದು ಮೊಟ್ಟ ಮೊದಲ ಬಾರಿಗೆ ಪಡೆದ ಪ್ರಶಸ್ತಿ ಇದು ಎಂದು ಸಂತಸ ವ್ಯಕ್ತಪಡಿಸಿರುತ್ತಾರೆ.

    ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕುಂದಾಪುರ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಕನ್ಯಾ, ಅತಿಥೇಯ ಯಡಾಡಿ ಮತ್ಯಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ರಮಣಿ, ಶಾಲಾಭಿವೃದ್ಧಿ ಮಂಡಳಿ ಅಧ್ಯಕ್ಷ ಮಂಜುನಾಥ ಮೊಗವೀರ, ಶೆಫಿನ್ಸ್ ನಿರ್ದೇಶಕ ಮನೋಜ್ ಕಡಬ, ತರಬೇತುದಾರೆ ಸ್ಮಿತಾ ಕೆ. ಸಿ., ಸಂಯೋಜಕಿ ಅರ್ಪಿತಾ ಬ್ರಹ್ಮಾವರ, ಇಜಾಜ್ ಮನ್ನ ಮತ್ತು ಇತರ ಅತಿಥಿ/ ಗೌರವ ಶಿಕ್ಷಕರು ಉಪಸ್ಥಿತರಿದ್ದರು.

    ಶೆಫಿನ್ಸ್ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ ಉಡುಪಿಯು ಅತಿಥಿ ಹಾಗೂ ಗೌರವ ಶಿಕ್ಷಕರಿಗೆ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿಯನ್ನು ಹಮ್ಮಿಕೊಳ್ಳುತ್ತಿದ್ದು, ಈ ವರೆಗೆ ಒಟ್ಟು 3 ಬ್ಯಾಚ್ ತರಬೇತಿಗಳು ಸಂಪನ್ನಗೊಂಡಿವೆ. ಪ್ರತೀ ಬ್ಯಾಚಿನಲ್ಲಿಯೂ ಒಬ್ಬರು ಅತಿಥಿ/ ಗೌರವ ಶಿಕ್ಷಕರಿಗೆ ಕ್ರಿಯಾಶೀಲ ಶಿಕ್ಷಕ ಪ್ರಶಸ್ತಿಯನ್ನು ನೀಡುವ ಪರಿಪಾಠವನ್ನು ಹೊಂದಿದ್ದು, ಮೊದಲ ಬ್ಯಾಚಿನಲ್ಲಿ ಬಂಟ್ವಾಳ ತಾಲೂಕು ಅಜ್ಜಿಬೆಟ್ಟು ಶಾಲೆಯ ಗೌರವ ಶಿಕ್ಷಕಿ ಶ್ರೀಮತಿ ಪ್ರಿನ್ಸಿ ಬ್ರಿಟ್ಟೋ ಈ ಪ್ರಶಸ್ತಿಯನ್ನು ಪಡೆದಿದ್ದರೆ, ಎರಡನೇ ಬ್ಯಾಚಿನಲ್ಲಿ ಉಡುಪಿ ತಾಲೂಕು ಮಂಚಿ ಸರಕಾರಿ ಪ್ರೌಢ ಶಾಲೆಯ ಅತಿಥಿ ಶಿಕ್ಷಕ ಶ್ರೀ ಗೌರೀಶ್ ಗೌಡ ಪ್ರಶಸ್ತಿಯನ್ನು ಪಡೆದಿರುತ್ತಾರೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    7 − 2 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.