ಬೈಂದೂರು: ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘದಿಂದ ನಾಲ್ವರು ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಡಾ.ಬಿ.ಆರ್.ಅಂಬೇಡ್ಕರ್ ಮಹಿಳಾ ಸಂಘ ಬೈಂದೂರು ವತಿಯಿಂದ ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಜರುಗಿದ ಅಕ್ಷರ ಬೆಳಕು ಕಾರ್ಯಕ್ರಮದಲ್ಲಿ ದಲಿತ ಸಮುದಾಯದ ನಾಲ್ವುರು ವಿದ್ಯಾರ್ಥಿಗಳನ್ನು ಶೈಕ್ಷಣಿಕ ದತ್ತು ಸ್ವೀಕಾರ ಮಾಡಿಕೊಳ್ಳಲಾಯಿತು.

Call us

Click Here

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ವಿ.ಶೈನ್ ಕೊಚಿಂಗ್ ಸೆಂಟರ್ ನಿರ್ದೇಶಿಕ ಹರೀಶ್ ಕುಮಾರ್ ಶೆಟ್ಟಿ, ದಲಿತ ಸಂಘಟನೆಯ ಮುಖಂಡರಾದ ಮಂಜುನಾಥ ಗಿಳಿಯಾರು, ವಾಸುದೇವ ಮುದೂರು, ಪೊಲೀಸ್ ವೃತ್ತ ನಿರೀಕ್ಷಕ ಸವಿತ್ರತೇಜ, ಸಂಘಟನೆಯ ಪದಾಧಿಕಾರಿಗಳಾದ ವಿನಯ, ಗೀತಾ ಸುರೇಶ್ ಕುಮಾರ್, ಸುರೇಶ್ ಕುಮಾರ್, ದ.ಸಂ.ಸ ಬೈಂದೂರು ತಾಲೂಕಿನ ಪದಾಧಿಕಾರಿಗಳಾದ ಭಾಸ್ಕರ್, ಶಿವರಾಜ, ಗೋವಿಂದ. ಬೈಂದೂರು ಡಾ.ಬಿ.ಆರ್. ಅಂಬೇಡ್ಕರ್ ಸಂಘದ ರಂಗ. ಎಸ್, ದಯಾನಂದ.ಪಿ. ಹಾಗೂ ಮಹಿಳಾ ಸಂಘದ ಮಹಿಳಾ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಶಿಕ್ಷಕ ಚಂದ್ರ ಕೆ ದೇವಾಡಿಗ ಸ್ವಾಗತಿಸಿದರು. ಶಿಕ್ಷಕಿ ಚೈತ್ರಾ ಸತೀಶ್ ಕಾರ್ಯಕ್ರಮ ನಿರ್ವಹಿಸಿದರು.

Leave a Reply