Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೊಂಬಟ್ಟು: ಕಾಡಿನಲ್ಲಿ ನಾಪತ್ತೆಯಾಗಿದ್ದ ಯುವಕ 8 ದಿನದ ಬಳಿಕ ಪತ್ತೆ
    ಊರ್ಮನೆ ಸಮಾಚಾರ

    ತೊಂಬಟ್ಟು: ಕಾಡಿನಲ್ಲಿ ನಾಪತ್ತೆಯಾಗಿದ್ದ ಯುವಕ 8 ದಿನದ ಬಳಿಕ ಪತ್ತೆ

    Updated:25/09/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ದಟ್ಟ ಅಡವಿಯೊಳಗೆ ನಾಪತ್ತೆಯಾಗಿದ್ದ ಯುವಕ 8 ದಿನಗಳ ನಂತರ ಪ್ರತ್ಯಕ್ಷವಾದ ಘಟನೆ ಶನಿವಾರ ಅಮಾಸೆಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಚ್ಚಟ್ಟು ಗ್ರಾಮದ ತೊಂಬಟ್ಟುವಿನಲ್ಲಿ ನಡೆದಿದೆ.

    Click Here

    Call us

    Click Here

    ಇರ್ಕಿಗದ್ದೆ ಶೀನ ನಾಯ್ಕ ಅವರ ಪುತ್ರ ವಿವೇಕಾನಂದ (28) ಸೆ. 16ರ ಮಧ್ಯಾಹ್ನ ಕಂಬಕ್ಕಾಗಿ ಮರವೊಂದನ್ನು ಕಡಿದು ತರಲೆಂದು ಹೋಗಿದ್ದು, ದಾರಿ ತಪ್ಪಿ ಅರಣ್ಯದಲ್ಲಿ ಕಾಣೆಯಾಗಿದ್ದರು. ಶನಿವಾರ ಮನೆಯಿಂದ 4 ಕಿ.ಮೀ. ದೂರದ ಕಬ್ಬಿನಾಲೆಯ ಕಾಡಿನ ಸಮೀಪ ಪತ್ತೆಯಾಗಿದ್ದಾರೆ. ಅವರೊಂದಿಗೆ ತೆರಳಿದ್ದ ನಾಯಿ ಜತೆಗೇ ಇದ್ದು ಸ್ವಾಮಿನಿಷ್ಠೆ ಮೆರೆದಿದೆ.

    ಸೆ. 16ರ ಮಧ್ಯಾಹ್ನ ವಿವೇಕಾನಂದ ಕಾಡಿಗೆ ಹೋಗಿದ್ದರು. ಜತೆಗೆ 2 ಸಾಕುನಾಯಿಗಳೂ ಹೋಗಿದ್ದವು. ಅದರಲ್ಲೊಂದು ಮರಳಿತ್ತು. ಮನೆಯವರಿಗೆ ಆತ ಕಾಡಿಗೆ ತೆರಳಿದ್ದು ಗೊತ್ತಿರಲಿಲ್ಲ. ಹಳೆಯ ಮಾಳಿಗೆ ಮನೆಯಾಗಿದ್ದರಿಂದ ಮಧ್ಯಾಹ್ನ ಊಟ ಮಾಡಿ ಮಹಡಿಯಲ್ಲಿ ಮಲಗಿರಬಹುದು ಅಂದು ಕೊಂಡಿದ್ದರು. ಸಂಜೆಯಾದಾಗ ಆತ ಕಾಣಿಸದ ಕಾರಣ ಆತಂಕಗೊಂಡ ಮನೆಯವರು ಅಕ್ಕಪಕ್ಕದವರಿಗೆ ಸುದ್ದಿ ತಿಳಿಸಿ ಹುಡುಕಾಟ ಆರಂಭಿಸಿದರು. ರಾತ್ರಿ 12ರ ವರೆಗೂ ಕಾಡಿನಲ್ಲಿ ನೂರಾರು ಜನ ಹುಡುಕಾಡಿದರು. ರವಿವಾರ ಅಮಾಸೆಬೈಲು ಪೊಲೀಸರು, ಅರಣ್ಯ ಇಲಾಖೆಯವರು ಸೇರಿ ಹುಡುಕಾಡಿದರು. ಬಳಿಕ ಶುಕ್ರವಾರದವರೆಗೆ ಪ್ರತೀ ದಿನ ನೂರಕ್ಕೂ ಮಿಕ್ಕಿ ಜನ ಹುಡುಕಾಡಿದರೂ ಪ್ರಯೋಜನ ಆಗಿರಲಿಲ್ಲ.

    8ನೇ ದಿನವಾದ ಶನಿವಾರ ಮನೆಯಿಂದ 4 ಕಿ.ಮೀ. ದೂರದ ಕಾಡಿನ ಅಂಚಿನಲ್ಲಿದ್ದ ಕಬ್ಬಿನಾಲೆ ಜಗನ್ನಾಥ ಶೆಟ್ಟಿಗಾರ್ ಅವರ ಮನೆಯ ಬಳಿ ಕಾಡಿನಿಂದ ಇಳಿದು ಬರುತ್ತಿರುವ ಯುವಕನ್ನು ನೋಡಿದ ಮನೆಯವರು ಒಳಗೆ ಕರೆದೊಯ್ದು ಉಪಚರಿಸಿ ಊರಿನವರಿಗೆ ಮಾಹಿತಿ ನೀಡಿದರು. ಆಹಾರವಿಲ್ಲದೆ ತೀವ್ರ ಬಳಲಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    9 + 3 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.