Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲಾರಿ, ಟೆಂಪೋ ಚಾಲಕ – ಮಾಲೀಕರಿಂದ ಜಿಲ್ಲಾಡಳಿತದ ವಿರುದ್ಧ ವಿವಿಧೆಡೆ ಪ್ರತಿಭಟನೆ
    ಊರ್ಮನೆ ಸಮಾಚಾರ

    ಲಾರಿ, ಟೆಂಪೋ ಚಾಲಕ – ಮಾಲೀಕರಿಂದ ಜಿಲ್ಲಾಡಳಿತದ ವಿರುದ್ಧ ವಿವಿಧೆಡೆ ಪ್ರತಿಭಟನೆ

    Updated:28/09/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಜಿಲ್ಲೆಯ ಲಾರಿ ಚಾಲಕ – ಮಾಲೀಕರ ಸಂಕಷ್ಟಗಳಿಗೆ ಸ್ಪಂದಿಸದ ಜಿಲ್ಲಾಡಳಿತದ ವಿರುದ್ಧ ಕೋಟ, ಕೋಟೇಶ್ವರ, ಹೆಮ್ಮಾಡಿ, ಬೈಂದೂರು, ಬ್ರಹ್ಮಾವರ, ಕಾರ್ಕಳ ಸೇರಿದಂತೆ ವಿವಿಧ ಭಾಗಗಳಲ್ಲಿ ಲಾರಿ ಮಾಲೀಕರು ಹಾಗೂ ಚಾಲಕರು ಕಟ್ಟಡ ಸಾಮಾಗ್ರಿ ಸಾಗಾಟ ಸ್ಥಗಿತಗೊಳಿಸಿ ಬುಧವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.

    Click Here

    Call us

    Click Here

    ಮರಳು, ಕಲ್ಲು, ಕಬ್ಬಿಣ, ಕೆಂಪು ಕಲ್ಲು, ಜೆಲ್ಲಿ, ಕೆಂಪು ಮಣ್ಣು ಸಾಗಿಸುವ ವ್ಯವಹಾರದಲ್ಲಿ 5000ಕ್ಕೂ ಅಧಿಕ ವಾಹನಗಳು ತೊಡಗಿಕೊಂಡಿದೆ. ಸಾಗಾಟ ಪರವಾನಿಗೆ, ಟ್ರಿಪ್ ಶೀಟ್ ಮೊದಲಾದ ಕಾರಣಗಳನ್ನು ಮುಂದೊಡ್ಡಿ ಪೊಲೀಸರು ವಾಹನ ವಶಪಡಿಸಿಕೊಳ್ಳುತ್ತಿದ್ದಾರೆ. ಲಾರಿ ಮಾಲಿಕರಿಗೆ 50,000ಕ್ಕೂ ಅಧಿಕ ದಂಡ ವಿಧಿಸುತ್ತಿದ್ದಾರೆ. ವಾಸ್ತವ ಅರಿವಿರುವ ಸರಕಾರ ಹಾಗೂ ಜಿಲ್ಲಾಡಳಿತ ಈ ಬಗ್ಗೆ ಸ್ಪಂದಿಸದೇ ಮೌನ ವಹಿಸಿದ್ದು, ಲಾರಿ ಮಾಲೀಕ ಚಾಲಕರನ್ನು ಸಂಕಷ್ಟಕ್ಕೆ ನೂಕಿದೆ ಎಂದು ಪ್ರತಿಭಟನಾ ನಿರತರು ಆರೋಪಿಸಿದ್ದಾರೆ.

    • ಕೋಟದಲ್ಲಿ ಲಾರಿ ಚಾಲಕ – ಮಾಲೀಕರು ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಿ ಗಮನ ಸೆಳೆದರು
    • ಕೋಟದಲ್ಲಿ ಲಾರಿ ಚಾಲಕ – ಮಾಲೀಕರು ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಿ ಗಮನ ಸೆಳೆದರು

    ಕೂಲಿ ಕಾರ್ಮಿಕರಿಗೆ ಉದ್ಯೋಗವಿಲ್ಲ:
    ಜಿಲ್ಲಾಡಳಿತ ಕಾನೂನು ಬಿಗುಗೊಳಿಸಿರುವುದರಿಂದ ಮರಳು, ಕಲ್ಲು, ಕೆಂಪು ಕಲ್ಲು, ಜೆಲ್ಲಿ, ಕೆಂಪು ಮಣ್ಣು ಮೊದಲಾದ ಕಟ್ಟಡ ಸಾಮಾಗ್ರಿಗಳನ್ನು ತೆಗೆಯುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಸಾವಿರಾರು ಕೂಲಿ ಕಾರ್ಮಿಕರು ಸಂಕಷ್ಟ ಎದುರಿಸುವಂತಾಗಿದೆ. ನಿತ್ಯದ ದುಡಿಮೆಯನ್ನೇ ನಂಬಿ ಬದುಕುವ ಕೂಲಿ ಕಾರ್ಮಿಕರು 2-3 ವಾರದಿಂದ ಕೆಲಸವಿಲ್ಲದೇ ಕುಳಿತಿದ್ದಾರೆ. ಜಿಲ್ಲೆಯಲ್ಲಿ 5000ಕ್ಕೂ ಅಧಿಕ ಲಾರಿಗಳು ಸಂಚರಿಸುತ್ತಿದ್ದು, ಚಾಲಕ, ಕ್ಲೀನರ್, ಲೋಡರ್ಸ್, ಹೆಲ್ಪರ್ ಸೇರಿದಂತೆ 30,000ಕ್ಕೂ ಅಧಿಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ.

    ವ್ಯವಹಾರಗಳಿಗೆ ಹೊಡೆತ:
    ಜಿಲ್ಲೆಯಲ್ಲಿ ಕಟ್ಟಡ ಸಾಮಾಗ್ರಿ ಸಾಗಾಟ, ಕೆಂಪುಕಲ್ಲು, ಜೆಲ್ಲಿ, ಮರಳು ಗಣಿಗಾರಿಕೆ ಉದ್ಯಮದಿಂದ ಪರೋಕ್ಷವಾಗಿ ಹೋಟೆಲ್, ಗ್ಯಾರೇಜ್ ಹಾಗೂ ಇನ್ನಿತರ ಸ್ಥಳೀಯ ಉದ್ಯಮಗಳಿಗೆ ನಿರಂತರ ವ್ಯವಹಾರ ದೊರೆಯುತ್ತಿತ್ತು. ವಾಹನ ಸ್ಥಗಿತದಿಂದಾಗಿ ಅವಲಂಬಿತ ವ್ಯವಹಾರವೂ ಕ್ಷೀಣಗೊಂಡಿದೆ.

    ಕೋಟೇಶ್ವರದಲ್ಲಿ ರಸ್ತೆ ಬದಿ ನಿಲ್ಲಿಸಲಾಗಿರುವ ಟೆಂಪೋ ಲಾರಿಗಳು

    ಪ್ರತ್ಯೇಕ ನೀತಿ ಅಗತ್ಯ:
    ರಾಜ್ಯದಲ್ಲಿ ಮರಳು ಹಾಗೂ ಇನ್ನಿತರ ಕಟ್ಟಡ ಸಾಮಾಗ್ರಿಗಳ ಗಣಿಗಾರಿಕೆಗೆ ಪ್ರತ್ಯೇಕ ನೀತಿ ಅಗತ್ಯವಿದೆ. ಕರಾವಳಿ ಭಾಗದಲ್ಲಿ ಸಿ.ಆರ್.ಝಡ್ ಕಾನೂನಿನ ಕಾರಣಕ್ಕೆ ಅಗತ್ಯಕ್ಕೆ ತಕ್ಕಷ್ಟು ಮರಳು ತೆಗೆಯಲು ಸಾಧ್ಯವಿಲ್ಲ. ಕೆಂಪುಕಲ್ಲು, ಜೆಲ್ಲಿ ಗಣಿಗಾರಿಕೆಗೆ ಹಲವು ತೊಡಕುಗಳಿವೆ. ಮನೆ, ಕಟ್ಟಡ ಕಟ್ಟುವವರಿಗೆ ಕಲ್ಲು ಮರಳಿನ ಅಗತ್ಯವಿದ್ದು ಬೇಡಿಕೆ ಹೆಚ್ಚಿರುವುದರಿಂದ ಸಕ್ರಮಕ್ಕಿಂತ ಅಕ್ರಮವೇ ಹೆಚ್ಚು ಎನ್ನುವ ಪರಿಸ್ಥಿತಿ ಇದೆ.

    Click here

    Click here

    Click here

    Click Here

    Call us

    Call us

    ಕೋಟದಲ್ಲಿ ರಸ್ತೆ ಬದಿ ನಿಲ್ಲಿಸಲಾಗಿರುವ ಟೆಂಪೋ ಲಾರಿಗಳು

    ಪರವಾನಿಕೆ ಪಡೆಯುವಲ್ಲಿನ ಜಟಿಲತೆ ಹಾಗೂ ಗಣಿ, ಪೊಲೀಸ್, ಕಂದಾಯ, ಅರಣ್ಯ ಇಲಾಖಾ ಅಧಿಕಾರಿಗಳ ಲಂಚಬಾಕತನ ಮತ್ತು ಗಣಿ ಉದ್ದಿಮೆದಾರರ ಅತಿಯಾಸೆ ಅಕ್ರಮ ಗಣಿಗಾರಿಕೆಗೆ ಹೆಚ್ಚು ಪ್ರಾಶಸ್ತ್ಯ ನೀಡುವಂತಾಗಿದೆ. ಕಟ್ಟಡ ಸಾಮಾಗ್ರಿಗಳ ಬೇಡಿಕೆ ಇದ್ದರೂ ಪೂರೈಸಲಾಗದ ಪರಿಸ್ಥಿತಿ ಇದ್ದು ಸರಕಾರವೂ ಇದಕ್ಕೆ ಸರಿಯಾದ ನೀತಿ ರೂಪಿಸದೇ ಪರೋಕ್ಷವಾಗಿ ಅಕ್ರಮಕ್ಕೆ ಅನುವು ಮಾಡಿಕೊಡುತ್ತಿದೆ. ಸರಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದ್ದರೆ, ಅಕ್ರಮದಲ್ಲಿ ತೊಡಗಿರುವವರ ಜೇಬು ಮಾತ್ರ ತುಂಬುತ್ತಿದೆ.

    * ಕಟ್ಟಡ ಸಾಮಾಗ್ರಿ ಸಾಗಾಟ ಉದ್ಯಮವನ್ನೇ ನಂಬಿ ಸಾವಿರಾರು ಕುಟುಂಬಗಳು ಬದುಕುತ್ತಿವೆ. ಮನೆ ಕಟ್ಟಡ ನಿರ್ಮಿಸುವವರು ಕಟ್ಟಡ ನಿರ್ಮಿಸುವವರಿಗೆ ಕಲ್ಲು ಮಣ್ಣು ಮರಳು ಇಲ್ಲದೇ ಕಾಮಗಾರಿ ನಡೆಸಲು ಸಾಧ್ಯವಿಲ್ಲ. ಜಟಿಲ ಕಾನೂನು ಸಡಿಲಗೊಳಿಸಲಿ ಇಲ್ಲವೇ ಮಾನವೀಯತೆ ನೆಲೆಯಲ್ಲಿ ಸಾಗಾಟಕ್ಕೆ ಸರಕಾರ ಅನುವು ಮಾಡಿಕೊಡಲಿ. ಇದನ್ನೇ ನಂಬಿ ಬದುಕುತ್ತಿರುವ ಚಾಲಕರು, ಕೂಲಿ ಕಾರ್ಮಿಕರ ಹೊಟ್ಟೆಯ ಮೇಲೆ ಹೊಡೆಯಬೇಡಿ. ಜಿಲ್ಲಾಡಳಿತ ಸಮಸ್ಯೆ ಆಲಿಸುವ ತನಕ ನಮ್ಮ ಪ್ರತಿಭಟನೆ ಮುಂದುವರಿಯಲಿದೆ – ಸುಧೀರ್ ಮಲ್ಯಾಡಿ, ಕೋಟದಲ್ಲಿ ಪ್ರತಿಭಟನಾ ನಿರತ ಲಾರಿ ಮಾಲಿಕ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    thirteen + five =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.