Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಿರ್ಮಾಪಕರಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್
    ಸಿನಿ ಟಾಕೀಸ್

    ನಿರ್ಮಾಪಕರಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು:
    ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ನಟನೆ ಜೊತೆಗೆ ನಿರ್ಮಾಣದಲ್ಲೂ ಗುರುತಿಸಿಕೊಂಡಿದ್ದಾರೆ. ತಮ್ಮ ಶಮಿಕಾ ಎಂಟರ್ ಪ್ರೈಸಸ್ ಮೂಲಕ ರಾಧಿಕಾ ಮೂರು ಸಿನಿಮಾಗನ್ನು ನಿರ್ಮಾಣ ಮಾಡಿದ್ದಾರೆ.

    Click Here

    Call us

    Click Here

    ಇದೀಗ ಅವರ ಸಹೋದರ ರವಿರಾಜ್ ಚಂದನವನಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ನಟನಾಗಿ ಅಲ್ಲ ನಿರ್ಮಾಪಕನಾಗಿ. ರವಿರಾಜ್ ಅವರಿಗೆ ಸಿನಿಮಾರಂಗ ಹೊಸದೇನಲ್ಲ. ತನ್ನ ಸಹೋದರಿ ರಾಧಿಕಾ ಅವರ ಶಮಿಕಾ ಎಂಟರ್ ಪ್ರೈಸಸ್ ನಲ್ಲಿ ಸಹ ನಿರ್ಮಾಪಕನಾಗಿ ಕೆಲಸ ಮಾಡಿರುವ ಅನುಭವ ರವಿರಾಜ್ ಅವರಿಗಿದೆ. ‘ಲಕ್ಕಿ’, ‘ಸ್ವೀಟಿ ನನ್ನ ಜೋಡಿ’, ಭೈರಾದೇವಿ ಸಿನಿಮಾಗಳಲ್ಲಿ ರವಿರಾಜ್ ತಂಗಿ ರಾಧಿಕಾ ಜೊತೆ ಕೆಲಸ ಮಾಡಿದ್ದರು ಜೊತೆಗೆ ಸಿನಿಮಾ ವಿತರಣೆ ವಿಭಾಗದಲ್ಲೂ ಕೆಲಸ ಮಾಡಿದ್ದಾರೆ. ಆದರೀಗ ಸ್ವತಂತ್ರ ನಿರ್ಮಾಪಕರಾಗಿ ಚಂದನವನಕ್ಕೆ ಪದಾರ್ಪಣೆ ಮಾಡತ್ತಿದ್ದಾರೆ ರವಿರಾಜ್.

    ತಮ್ಮದೇ ಆದ ಹೊಸ ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ್ದು ಈಗಾಗಲೇ ಮೊದಲ ಸಿನಿಮಾದ ಚಿತ್ರೀಕರಣ ಕೂಡ ಮುಗಿಸಿದ್ದಾರೆ. ರವಿರಾಜ್ ತಮ್ಮ ನಿರ್ಮಾಣ ಸಂಸ್ಥೆಗೆ ‘ಶ್ರೀ ದುರ್ಗಾಪರಮೇಶ್ವರಿ ಪ್ರೊಡಕ್ಷನ್’ ಎಂದು ಹೆಸರಿಟ್ಟಿದ್ದಾರೆ. ಅಂದಹಾಗೆ ಇದು ರವಿರಾಜ್ ಅವರ ತಂದೆಯ ಕನಸಿನ ಬ್ಯಾನರ್. ಅಪ್ಪನ ಕನಸನ್ನು ‘ಶ್ರೀ ದುರ್ಗಾಪರಮೇಶ್ವರಿ’ ಬ್ಯಾನರ್ ಮೂಲಕ ನನಸು ಮಾಡಿದ್ದಾರೆ ರವಿರಾಜ್. ತಮ್ಮ ಬ್ಯಾನರ್ನ ಮೊದಲ ಸಿನಿಮಾವಾಗಿ ಹಾರರ್ ಚಿತ್ರ ತಯಾರಾಗಿದ್ದು ರಿಲೀಸ್ಗೆ ರೆಡಿಯಾಗಿದೆ. ಇದುವರೆಗೂ ನೋಡಿರದ ಹಾರರ್ ಸಬ್ಜೆಕ್ಟ್ ಮೂಲಕ ಅಭಿಮಾನಿಗಳನ್ನು ಭಯ ಬೀಳಿಸಲು ಸಜ್ಜಾಗಿದ್ದಾರೆ ರವಿರಾಜ್ ಮತ್ತು ತಂಡ.

    ಅಂದಹಾಗೆ ರವಿರಾಜ್ ಅವರ ಚೊಚ್ಚಲ ನಿರ್ಮಾಣದ ಸಿನಿಮಾದಲ್ಲಿ ದೊಡ್ಡ ದೊಡ್ಡ ಸ್ಟಾರ್ಸ್ ನಟಿಸಿದ್ದಾರೆ. ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ಈ ಹಾರರ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಯಾರೆಲ್ಲ ನಟಿಸಿದ್ದಾರೆ, ನಿರ್ದೇಶಕ ಯಾರು ಎನ್ನುವುದನ್ನು ಸೀಕ್ರೆಟ್ ಆಗಿಯೇ ಇಟ್ಟಿದ್ದಾರೆ ನಿರ್ಮಾಪಕ ರವಿರಾಜ್. ಹಾರರ್ ಸಿನಿಮಾ ಎಂದು ಸಾಕಷ್ಟು ಕುತೂಹಲ ಮೂಡಿಸಿರುವ ರವಿರಾಜ್ ಸದ್ಯದಲ್ಲೇ ಅಭಿಮಾನಿಗಳ ಮುಂದೆ ಬರಲಿದ್ದಾರೆ.

    ಶ್ರೀ ದುರ್ಗಾಪರಮೇಶ್ವರಿ ಬ್ಯಾನರ್ ಮೂಲಕ ಉತ್ತಮ ಸಿನಿಮಾಗಳನ್ನು ಮಾಡುವ ಆಸೆ ಇಟ್ಟುಕೊಂಡಿದ್ದಾರೆ. ವರ್ಷಕ್ಕೆ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಬೇಕು ಎನ್ನುವುದು ಅವರ ಕನಸು. ಸದ್ಯ ಹಾರರ್ ಸಿನಿಮಾ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಸಹೋದರಿ ರಾಧಿಕಾ ಈಗಾಗಲೇ ಸಿನಿಮಾರಂಗದಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ತಂಗಿಯ ಹಾಗೆ ಅಣ್ಣ ಕೂಡ ದೊಡ್ಡ ಮಟ್ಟದ ಖ್ಯಾತಿಗಳಿಸಲಿ ಎನ್ನುವುದು ಎಲ್ಲರ ಆಶಯ.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾರರ್, ಹಾಸ್ಯ ಮತ್ತು ವಿಸ್ಮಯದ ಪರಿಗೆ ಪ್ರೇಕ್ಷಕ ಫಿದಾ –  ‘ಛೂ ಮಂತರ್’ ಚಿತ್ರ ವಿಮರ್ಶೆ

    11/02/2025

    ಯಾಕೂಬ್ ಖಾದರ್ ಗುಲ್ವಾಡಿ ನಿರ್ದೇಶನದ ಟ್ರಿಪಲ್‌ ತಲಾಖ್‌ ಸಿನಿಮಾಗೆ ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಚಿತ್ರ ಪ್ರಶಸ್ತಿ

    24/01/2025

    ಕನ್ನಡದ ಅತೀ ದೊಡ್ಡ ಡಾನ್ಸ್‌ ಮ್ಯೂಸಿಕ್‌ ವಿಡಿಯೋ ಸಾಂಗ್‌. ಡ್ಯಾನ್ಸ್ ಪ್ರತಿಭೆಯ ಅನಾವರಣ “ನಿಲ್ಲಬೇಡ”

    23/11/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d