Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದುಬೈನಲ್ಲಿ ಕುಂದಗನ್ನಡ ಉತ್ಸವ: ಮೂವರು ಎಲೆಮರೆಯ ಸಾಧಕರಿಗೆ ಕುಂದಾಪ್ರ ಕನ್ನಡ ರತ್ನ ಪ್ರಶಸ್ತಿ
    ಊರ್ಮನೆ ಸಮಾಚಾರ

    ದುಬೈನಲ್ಲಿ ಕುಂದಗನ್ನಡ ಉತ್ಸವ: ಮೂವರು ಎಲೆಮರೆಯ ಸಾಧಕರಿಗೆ ಕುಂದಾಪ್ರ ಕನ್ನಡ ರತ್ನ ಪ್ರಶಸ್ತಿ

    Updated:12/10/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಆಯೋಜಿಸಲಾಗುತ್ತಿರುವ ಕುಂದಗನ್ನಡ ಉತ್ಸವದಲ್ಲಿ ಮೂವರು ಎಲೆಮರೆಯ ಸಾಧಕರಿಗೆ ಕುಂದಾಪ್ರ ಕನ್ನಡ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

    Click Here

    Call us

    Click Here

    ಗೋಪ್ರೇಮಿ ಸಮಾಜ ಸೇವಕ ಸಂಜೀವ ದೇವಾಡಿಗ, ಪಡುಕೋಣೆಯ ಖ್ಯಾತ ನಾಟಿ ವೈದ್ಯ ಮ್ಯಾಕ್ಸಿಮ್ ಒಲಿವೆರಾ ಹಾಗೂ ಜೀವರಕ್ಷಕ ಮುಳುಗುತಜ್ಞ ದಿನೇಶ್ ಖಾರ್ವಿ ಅವರನ್ನು ಕುಂದಾಪ್ರ ಕನ್ನಡ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

    ಪಡುಕೋಣೆ ನಿವಾಸಿ ಮಾಕ್ಷಿಮ್ ಒಲಿವೆರಾ ಅವರು ಕಳೆದ 25 ವರ್ಷಗಳಿಂದ ನಾಟಿ ಔಷಧವನ್ನು ಅತ್ಯಂತ ಕಡಿಮೆ ದರದಲ್ಲಿ ನೀಡುತ್ತಾ ಬರುತ್ತಿದ್ದಾರೆ. ತಮ್ಮ 20ನೇ ವಯಸ್ಸಿನಲ್ಲಿಯೇ ಪ್ರಕೃತಿಯಲ್ಲಿ ಸಿಗುವ ಔಷಧ ಗಿಡಗಳ ಮಾಹಿತಿಯನ್ನು ಪಡೆದುಕೊಂಡು ಕ್ರಮೇಣ ತಂದೆಯ ಕಾಲದ ನಂತರ ಸ್ವತಂತ್ರವಾಗಿ ನಾಟಿ ಔಷಧವನ್ನು ನೀಡುತ್ತಾ ಬಂದಿದ್ದಾರೆ. ಅವರಿಂದ ವಿವಿಧ ರೋಗಗಳಿಗೆ ಔಷಧ ಪಡೆದುಕೊಳ್ಳಲು ದೂರದ ಊರುಗಳಿಂದಲೂ ರೋಗಿಗಳು ಅರಸಿ ಬರುತ್ತಾರೆ.

    ಸಂಜೀವ ದೇವಾಡಿಗ ಅವರು ವೃತ್ತಿಯಲ್ಲಿ ಬೈಕ್ ಮೆಕ್ಯಾನಿಕ್. ಆದರೆ ರಸ್ತೆಯಲ್ಲಿ ಅಪಘಾತಕ್ಕೀಡಾಗುವ ಅನಾಥ ಗೋವುಗಳಿಗೆ ಸಂಜೀವ ದೇವಾಡಿಗರೇ ಆಪತ್ಪಾಂದವ. ಬೈಂದೂರಿನಿಂದ ಉಪ್ಪುಂದ ಕಂಬದಕೋಣೆ ತನಕವೂ ಅಪಘಾತಕ್ಕೀಡಾಗುವ ದನಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಬದುಕಿಸಿದ್ದಾರೆ. ಎರಡು ದಶಕದಿಂದ ಸದ್ದಿಲ್ಲದೇ ತಮ್ಮ ಸೇವೆಯನ್ನು ಮುಂದುವರಿಸಿರುವ ಸಂಜೀವ ದೇವಾಡಿಗ ಅವರು ಇತ್ತೀಚಿಗೆ ಅಪಘಾತಕ್ಕೀಡಾದ ಗೋವುಗಳಿಗೆ ಆರೈಕೆ ಮಾಡುವ ಸಲುವಾಗಿ ತಮ್ಮ ಗ್ಯಾರೇಜ್ ಎದುರೇ ಶೆಟ್ ನಿರ್ಮಿಸಿಕೊಂಡು ಗೋವುಗಳನ್ನು ಸಲಹುತ್ತಿದ್ದಾರೆ.

    ಗಂಗೊಳ್ಳಿ ನಿವಾಸಿಯಾಗಿರುವ ದಿನೇಶ್ ಖಾರ್ವಿ ಅವರು ನದಿ ಹಾಗೂ ಸಮುದ್ರಕ್ಕೆ ಬಿದ್ದು ಹತ್ತಾರು ಶವಗಳನ್ನು ಹುಡುಕಿ ಮೇಲೆತ್ತುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಾ ಬರುತ್ತಿದ್ದಾರೆ. ಪಂಚಗಂಗಾವಳಿ ನದಿ ಹಾಗೂ ಸಮುದ್ರ ತೀರದಲ್ಲಿ ಇಂತಹ ಅವಘಡಗಳು ಸಂಭವಿಸಿದಾಗ ಜನರು ನೆನಪಿಸಿಕೊಳ್ಲುವ ವ್ಯಕ್ತಿ ಎಲೆಮರೆಯ ಕಾಯಿಯಂತೆ ನಿರಂತರವಾಗಿ ತಮ್ಮ ಸೇವೆ ಮಾಡುತ್ತಾ ಬರುತ್ತಿದ್ದಾರೆ.

    Click here

    Click here

    Click here

    Call us

    Call us

    ► ದುಬೈನಲ್ಲಿ ಕುಂದಗನ್ನಡ ಉತ್ಸವ – 2023: ಮಂದರ್ತಿ ಮೇಳದ ಯಕ್ಷಗಾನ, ಸಾಧಕರಿಗೆ ಸನ್ಮಾನ – https://kundapraa.com/?p=69428 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.