ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತ ಶ್ರೀಧರ್ ಪಿ ಅವರಿಗೆ ಸನ್ಮಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಮಂಗಳೂರು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾಗಿದ್ದು, 2021 ರಲ್ಲಿ ವಲಯ ಅರಣ್ಯಾಧಿಕಾರಿ ವಿಭಾಗದಲ್ಲಿ ಅರಣ್ಯ ಸಂರಕ್ಷಣೆ ಮತ್ತು ಅಭಿವೃದ್ದಿ ಸಾಧನೆಗಳನ್ನು ಪರಿಗಣಿಸಿ, ಅರಣ್ಯ ಇಲಾಖೆಯು ನೀಡುವ ” ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಸ್ವೀಕರಿಸಿರುವ ಪಿ. ಶ್ರೀಧರ ಅವರಿಗೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮಂಡಳಿ ಅಳ್ವೆಗದ್ದೆ ಶಿರೂರು ಇವರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Call us

Click Here

ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಗಣಪತಿ ಮೊಗವೀರ, ಗೌರವ ಅಧ್ಯಕ್ಷರಾದ ನಾರಾಯಣ ಟಿ. ಅಳ್ವೆಗದ್ದೆ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ರಾಮ ಎನ್ ಅಳ್ವೆಗದ್ದೆ, ಕೋಶಾಧಿಕಾರಿ ವಿಶ್ವನಾಥ ಮೊಗವೀರ, ಬೈಂದೂರು ವಲಯ ಭಜನಾ ಒಕ್ಕೂಟದ ಅಧ್ಯಕ್ಷರಾದ ಅಶ್ವತ್ ನಾರಾಯಣ, ಉಡುಪಿ ಜಿಲ್ಲಾ ಭಜನಾ ಒಕ್ಕೂಟದ ಪದಾಧಿಕಾರಿ ಪಾಂಡುರಂಗ ಅಳ್ವೆಗದ್ದೆ ಹಾಗೂ ಪಿ. ಶ್ರೀಧರ ಅವರ ಕುಟುಂಬದವರು ಉಪಸ್ಥಿತರಿದ್ದರು.

Leave a Reply