ಬೈಂದೂರು ಶಾರದೋತ್ಸವದ ಸುವರ್ಣ ಮಹೋತ್ಸವ: ದಸರಾ ಕ್ರೀಡಾಕೂಟ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ಶಾರದೋತ್ಸವ ಸುವರ್ಣ ಮಹೋತ್ಸವದ ಅಂಗವಾಗಿ ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಭಾನುವಾರ ಬೈಂದೂರು ಗಾಂಧಿ ಮೈದಾನದಲ್ಲಿ ಜರುಗಿತು.

Call us

Click Here

ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಕ್ರೀಡೆ ಮನುಷ್ಯರಲ್ಲಿ ಏಕಾಗ್ರತೆ ಹಾಗೂ ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯವಿದೆ. ಸೋಲೇ ಗೆಲುವಿನ ಸೋಪಾನ ಎಂದು ಕ್ರೀಡಾಸ್ಪೂರ್ತಿಯಿಂದ ಸ್ವರ್ಧೆಯಲ್ಲಿ ಭಾಗವಹಿಸಿ ಎಂದು ಕರೆ ನೀಡಿದರು.

ಬೈಂದೂರು ದಸರಾ ಸಮಿತಿ ಅಧ್ಯಕ್ಷ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕ್ರೀಡಾಕೂಟ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷರಾದ ಗಿರೀಶ್ ಬೈಂದೂರು, ಬಿ.ಎಮ್. ನಾಗರಾಜ್ ಗಾಣಿಗ, ಶಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಆಚಾರ್ ಬೈಂದೂರು, ಬೈಂದೂರು ತಾಲೂಕು ಯುವ ಜನ ಕ್ರೀಡಾ ಇಲಾಖೆಯ ಯೋಜನಾಧಿಕಾರಿ ಪ್ರಭಾಕರ್ ಎಸ್ ಉಪಸ್ಥಿತರಿದ್ದರು.

ದಯಾನಂದ ಪಿ ಸ್ವಾಗತಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply