Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಹಾಗೂ ವಿಕಲಚೇತನ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟನೆ
    ಊರ್ಮನೆ ಸಮಾಚಾರ

    ಕುಂದಾಪುರ: ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಹಾಗೂ ವಿಕಲಚೇತನ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಉಡುಪಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರು ಹಲವರಿದ್ದು, ವಿವಿಧ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದರೂ ಕ್ರೀಡಾ ಕ್ಷೇತ್ರದ ಸಾಧನೆಯಲ್ಲಿ ಸ್ವಲ್ಪಮಟ್ಟಿಗಿನ ಹಿನ್ನೆಡೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಸಕ್ರಿಯವಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಬದಲಾವಣೆಗೆ ಕಾಲ ಪಕ್ವವಾಗಿದ್ದು, ಪ್ರಸಕ್ತ ಬದಲಾವಣೆ ಸಮಯ ಆಗಲಿ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

    Click Here

    Call us

    Click Here

    ಜಿಲ್ಲಾ ಪಂಚಾಯಿತಿ ಉಪನಿರ್ದೇಶಕರ ಕಚೇರಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕುಂದಾಪುರ ವಲಯ, ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗ ಆಶ್ರಯದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಹಾಗೂ ವಿಕಲಚೇತನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

    ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿ, ಕ್ರೀಡಾ ಪಟುಗಳಿಗೆ ಗೆಲುವಿನ ಬಹುಮಾನದ ಗುರುಯಿರಬೇಕು. ಸೋಲು ನಿರಾಸೆಗೆ ದಾರಿಯಾಗಬಾರದು. ಕ್ರೀಡೆಯಲ್ಲಿ ಉತ್ತಮ ಅವಕಾಶಗಳಿದ್ದು, ಬದಲಾವಣೆ ತರುವ ಮೂಲಕ ಸಾಧನೆಯ ಶಿಖರವೇರಬೇಕು ಎಂದರು.

    ಕುಂದಾಪುರ ಪುರಸಭೆ ಮಾಜಿ ಅಧ್ಯಕ್ಷ ಮೋಹನದಾಸ ಶೆಣೈ, ದ್ವಜಾರೋಹಣ ನೆರವೇರಿಸಿದರೆ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಕ್ರೀಡಾ ಜ್ಯೋತಿ ಬೆಳಗಿಸಿದರು. ಕುಂದಾಪುರ ತಹಸೀಲ್ದಾರ್ ಶೋಭಾಲಕ್ಷ್ಮೀ ಹೆಚ್.ಎಸ್.ಕ್ರೀಡಾಕೂಟ ಉದ್ಘಾಟಿಸಿದರು.

    ಕುಂದಾಪುರ ಜೂನಿಯರ್ ಕಾಲೇಜ್ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ., ಉಪ ಪ್ರಾಂಶುಪಾಲ ಕಿರಣ್ ಹೆಗ್ಡೆ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಮಂಜುನಾಥ ಆರ್., ಜೂನಿಯರ್ ಕಾಲೇಜ್ ಎಸ್ಡಿಎಂಸಿ ಅಧ್ಯಕ್ಷ ಸತೀಶ್ ಕುಮಾರ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯಕ್, ವಿವಿಧ ಸಂಘಟನೆ ಪದಾಧಿಕಾರಿಗಳಾದ ಚಂದ್ರಶೇಖರ ಶೆಟ್ಟಿ, ಪ್ರಭಾಕರ ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ, ಯುವಜನ ಸೇವೆ ಹಾಗೂ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ ಇದ್ದರು.

    Click here

    Click here

    Click here

    Call us

    Call us

    ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಣಪತಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಕ ಗೋಪಾಲ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು.ಕ್ರೀಡಾಪಟು ಮಹಿಮಾ ಪ್ರತಿಜ್ಞಾ ವಿಧಿ ಭೋದಿಸಿದರು. ಶಿಕ್ಷಕರಾದ ಸತೀಶ್ ಶೆಟ್ಟಿ ಚಿತ್ರಪಾಡಿ, ಚಂದ್ರಶೇಖರ ಬೀಜಾಡಿ ನಿರೂಪಿಸಿದರು. ಕುಂದಾಪುರ ವಲಯ ಶಿಕ್ಷಣಾಧಿಕಾರಿ ಶೋಭಾ ಎಸ್.ಶೆಟ್ಟಿ ವಂದಿಸಿದರು.

    ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಅವರು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಸ್ಪೋಟ್ಸ್ ಡೇ ಅತ್ಯುತ್ತಮ ದಿನವಾಗಿದ್ದು, ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳ ಗುರಿ ಪದಕ ಪಡೆಯುವ ಕಡೆಗೆ ಇರಲಿ. ಭಾಗವಹಿಸುವಿಕೆಯಲ್ಲಿ ಸ್ಪಷ್ಟತೆಯಿರಬೇಕು. ಗುರಿಯಿಟ್ಟುಕೊಂಡು ಮುಂದಡಿ ಇಟ್ಟರೆ ಧಕ್ಕಿಸಿಕೊಳ್ಳುವುದು ಕಷ್ಟವಲ್ಲ.

    ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಸುವುದಕ್ಕೆ ಬೆನ್ನೆಲುಬಾಗಿ ನಿಂತ ಸೂಪರ್ ಗ್ರೇಡ್ ಎಲೆಕ್ಟ್ರಿಕ್ ಗುತ್ತಿಗೆದಾರ ಕೆ.ಆರ್.ನಾಯಕ್, ಉದ್ಯಮಿಗಳಾದ ದಾಂಡೇಲಿ ಪ್ರಕಾಶ ಶೆಟ್ಟಿ ದಾಂಡೇಲಿ, ಪ್ರಕಾಶ ಶೆಟ್ಟಿ ಯಡ್ತಾಡಿ, ನಾಗರಾಜ ಶೆಟ್ಟಿ ಚಿತ್ತೂರು, ಸಂತೆಕಟ್ಟೆ ಕಳ್ತೂರು ನಾಗರಾಜ ಶೆಟ್ಟಿ ಅವರ ಸನ್ಮಾನಿಸಲಾಯಿತು. ಪಥ ಸಂಚಲನದಲ್ಲಿ ಪಾಲ್ಗೊಂಡು ಪ್ರಥಮ ಸ್ಥಾನ ಪಡೆದು ಕುಂದಾಪುರ ಪದವಿಪೂರ್ವ ಕಾಲೇಜ್ ಪ್ರೌಢಶಾಲೆ ವಿಭಾಗ ಹಾಗೂ ದ್ವಿತೀಯ ಸ್ಥಾನ ಪಡೆದ ಬೈಂದೂರು ಸರ್ಕಾರಿ ಪ್ರೌಢಶಾಲೆಗೆ ಬಹುಮಾನ ವಿತರಿಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ

    20/08/2026

    ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ

    20/08/2026

    ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು

    20/08/2026
    Leave A Reply Cancel Reply

    2 × 4 =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.