ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಛಾಯಾ ಸಿ ಪೂಜಾರಿ ತಮಿಳುನಾಡು ರಾಜ್ಯದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಗಿದ್ದಾಳೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ ಶಿಕ್ಷಣ ವಿಭಾಗ) ಚಾಮರಾಜನಗರದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿಜೇತಳಾಗಿ ಛಾಯಾ ಚಿನ್ನದ ಪದಕ ಪಡೆದಿದ್ದಳು.
ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು
ಅಭಿನಂದನೆ ಸಲ್ಲಿಸಿದ್ದಾರೆ.