Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಬ್ಬಡಿ ಪಂದ್ಯಾಟ ಸಮಾರೋಪ, ವಿಜೇತರಿಗೆ ಟ್ರೋಫಿ ವಿತರಣೆ
    ಊರ್ಮನೆ ಸಮಾಚಾರ

    ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಬ್ಬಡಿ ಪಂದ್ಯಾಟ ಸಮಾರೋಪ, ವಿಜೇತರಿಗೆ ಟ್ರೋಫಿ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ (ಉಡುಪಿ ವಲಯ) ಪುರುಷರ ಕಬಡ್ಡಿ ಪಂದ್ಯಾಟದ ಕಾರ್ಯಕ್ರಮದ ಸಮಾರೋಪ ಸಮಾರಂಭ ಗುರುವಾರ ಜರುಗಿತು.

    Click Here

    Call us

    Click Here

    ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಮಾತನಾಡಿ, ಬೈಂದೂರಿನ ಜನತೆ ಕಬಡ್ಡಿ ಕ್ರೀಡೆಗೆ ತುಂಬಾ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಅಲ್ಲದೆ ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ. ಮಕ್ಕಳಲ್ಲಿ ಆತ್ಮ ವಿಶ್ವಾಸವನ್ನು ಬೆಳಸಲು ಕ್ರೀಡೆ ಅತ್ಯವಶ್ಯಕ ಎಂದು ತಿಳಿಸಿದರು.

    ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಶ್ರೀಮುತ್ತಯ್ಯ ಪೂಜಾರಿ ಅವರು ಮಾತನಾಡಿ ತಾವು ಪದವಿ ಹಂತದಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ ಸಂದರ್ಭ ಹಾಗೂ 30 ವರ್ಷಗಳ ಹಿಂದೆ ಬೈಂದೂರಿನ ಕಾಲೇಜಿನಲ್ಲಿ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಿದ ಸಂದರ್ಭವನ್ನು ನೆನೆಸಿಕೊಂಡರು.

    ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜು ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಅವರು ಮಾತನಾಡಿ ಈ ಒಂದು ಕಬಡ್ಡಿ ಪಂದ್ಯಾಟವನ್ನು ಆಯೋಜಿಸಲು ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

    ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ ಡಿʼಸೋಜಾ, ಕಬಡ್ಡಿ ಪಂದ್ಯಾಟದ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ತಿತವಾಗಿ ಸಂಘಟಿಸಿರುವ ಕುರಿತು ಅಭಿನಂದನೆಯನ್ನು ಸಲ್ಲಿಸಿದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ನಿರ್ದೇಶಕರಾದ ರೋಷನ್ ಕುಮಾರ್ ಶೆಟ್ಟಿ, ಅಜ್ಜರಕಾಡು ಪಾಟ್ಕಾರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ, ಪಂದ್ಯದ ಪರಿವೀಕ್ಷಕ ರಾಮಚಂದ್ರ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹರೀಶ್ ಎಲ್. ಕಾಲೇಜಿನ ಕ್ರೀಡಾ ಉಪನ್ಯಾಸಕರಾದ ಪ್ರಭಾಕರ್ ಉಪಸ್ಥಿತರಿದ್ದರು.

    ಉಪನ್ಯಾಸಕಿ ಡಾ. ಲತಾ ಪೂಜಾರಿ ಸ್ವಾಗತಿಸಿದರು. ಕ್ರೀಡಾ ಸಂಚಾಲಕರಾದ ಮೋಹನ ಕುಮಾರ್ ವಂದಿಸಿದರು. ಉಪನ್ಯಾಸಕರಾದ ನವೀನ್ ಹೆಚ್.ಜೆ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಒಟ್ಟು ಉಡುಪಿ ವಲಯದ 23 ತಂಡಗಳು ಪಾಲ್ಗೊಂಡಿದ್ದು, ಪ್ರಥಮ ಸ್ಥಾನವನ್ನು ಆಳ್ವಾಸ್ ಕಾಲೇಜು ಮೂಡುಬಿದಿರೆ, ದ್ವಿತೀಯ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು, ತೃತೀಯ ಸ್ಥಾನವನ್ನು ಲಕ್ಷ್ಮೀ ಸೋಮ ಬಂಗೇರಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಚತುರ್ಥ ಸ್ಥಾನವನ್ನು ಶಾರಾದ ಕಾಲೇಜು ಬಸ್ರೂರು ಇಲ್ಲಿನ ವಿದ್ಯಾರ್ಥಿಗಳು ಪಡೆದುಕೊಂಡರು.

    ವಿಜೇತ ತಂಡಗಳಿಗೆ ಅತಿಥಿಗಳು ಟ್ರೋಫಿಯನ್ನು ವಿತರಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    10 − 4 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.