Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ ವಲಯ ಬ್ರಾಹ್ಮಣ ಪರಿಷತ್ತಿನ 29ನೇ ವಾರ್ಷಿಕ ಅಧಿವೇಶನ
    ಊರ್ಮನೆ ಸಮಾಚಾರ

    ಉಪ್ಪುಂದ ವಲಯ ಬ್ರಾಹ್ಮಣ ಪರಿಷತ್ತಿನ 29ನೇ ವಾರ್ಷಿಕ ಅಧಿವೇಶನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ದೇಶ ರಾಜ್ಯದ ಹಿತಕ್ಕೆ ಸತ್ಯ ಧರ್ಮದ ಪ್ರತಿಪಾದನೆಗೆ ತನ್ನದೇ ಆದ ಕೊಡುಗೆಯನ್ನು ಬ್ರಾಹ್ಮಣ ಸಮಾಜ ನೀಡಿದ್ದು ವಿವಿಧ ಸಾಮ್ರಾಜ್ಯಗಳ ಸ್ಥಾಪನೆಯಲ್ಲೂ ಸುಶಾಸನ ನೆಲೆಸುವಂತೆ ಮಾಡುವಲ್ಲಿಯೂ ಸಾವಿರಾರು ವರ್ಷಗಳಿಂದ ಆಳುವ ಪ್ರಭುಗಳಿಗೆ ಸಲಹೆ ನೀಡುತ್ತಾ ಸ್ಪೂರ್ತಿಯ ಸೆಲೆಯಾಗಿ ಲೋಕ ಹಿತಕ್ಕಾಗಿ ಶ್ರಮಿಸುತ್ತಾ ಬಂದಿದೆ. ಪ್ರಸ್ತುತ ಕಾಲಘಟ್ಟದಲ್ಲಿಯೂ ವಿಪ್ರರೂ ಗಾಯತ್ರಿ ಉಪಾಸನೆ, ನಿತ್ಯ ಕರ್ಮಾನುಷ್ಠಾನ ಮಾಡಿ ವಿಪ್ರರು ಬ್ರಾಹ್ಮಣ್ಯದ ಕುರಿತು ಜ್ಞಾನವನ್ನು ಹೊಂದಿರಬೇಕೆಂದು ವೇದಮೂರ್ತಿ, ಪ್ರಶಾಂತ ಅಡಿಗ ಸೌಕೂರು ಇವರು ಹೇಳಿದರು.

    Click Here

    Call us

    Click Here

    ಅವರು ಅರೆಹೊಳೆ ಶಾಸ್ತ್ರೀಯ ಮನೆಯಲ್ಲಿ ನಡೆದ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯದ ೨೯ನೇ ವಾರ್ಷಿಕ ಅಧಿವೇಶನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಉಪನ್ಯಾಸ ನೀಡಿದರು.

    ಗಣಹೋಮದೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು, ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಅಧ್ಯಕ್ಷ ಶುಭಚಂದ್ರ ಹತ್ವಾರ್ ಜ್ಯೋತಿ ಬೆಳಗಿಸಿ ಅಧಿವೇಶನ ಉದ್ಘಾಟಿಸಿ ಮಾತನಾಡುತ್ತಾ ಬ್ರಾಹ್ಮಣ ಸಂಘಟನೆಯ ವಿಚಾರವಾಗಿ ಮಹತ್ವದ ಮಹಿತಿಗಳನ್ನು ನೀಡುತ್ತಾ ಶ್ರೀ ಗಾಯತ್ರಿ ಟ್ರಸ್ಟ್ ಮೂಲಕ ವಿಪ್ರ ಭವನವನ್ನು ಕುಂದಾಪುರದಲ್ಲಿ ನಿರ್ಮಿಸಲಾಗುವುದು ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು. ಹಾಗೂ ಈ ಬಗ್ಗೆ ಪೂರಕ ಮಾಹಿತಿಗಳನ್ನು ಒದಗಿಸುವ ಕಾರ್ಯ ಸಂಘಟನೆಗಳಿಂದ ಆಗಬೇಕು ಎಂದು ಕರೆ ನೀಡಿದರು.

    ವಲಯದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿವೃತ್ತರಾದ ವೆಂಕಟೇಶ ಮಯ್ಯ ಉಪ್ಪುಂದ, ಜಯಲಕ್ಷ್ಮೀ ಶಾಸ್ತ್ರೀ ಅರೆಹೊಳೆ ವಲಯದ ಪರವಾಗಿ ಇವರನ್ನು ಸನ್ಮಾನಿಸಲಾಯಿತು. ಸ್ಕೌಡ್ಸ್ ಆಂಡ್ ಗೈಡ್ಸ್ ರಾಷ್ಟ್ರ ಮಟ್ಟದ ಆಯ್ಕೆಗೆ ಶ್ರೀನಾಭ ಉಪಾಧ್ಯ ಮತ್ತು ಸಿ.ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕುಮಾರಿ ದಿವ್ಯಶ್ರೀ ಮಯ್ಯ ಅವರನ್ನಾ ವಲಯದ ಪರವಾಗಿ ಅಭಿನಂದಿಸಲಾಯಿತು. 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಯಲ್ಲಿ ಹಾಗೂ ಪಿಯುಸಿಯಲ್ಲಿ ವಲಯಕ್ಕೆ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನಾ ವಿಶೇಷವಾಗಿ ಅಭಿನಂದಿಸಲಾಯಿತು.

    ಉಪ್ಪುಂದ ವಲಯದ ಅಧ್ಯಕ್ಷ ಅರುಣ್ ಶ್ಯಾನುಭೋಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಉದ್ಯಮಿ ಕೆ.ಉಮೇಶ್ ಶ್ಯಾನುಭೋಗ ಕಿರಿಮಂಜೇಶ್ವರ, ವೇದ ಮೂರ್ತಿ ಶ್ರೀ ವೆಂಕಟೇಶ ಶಾಸ್ತ್ರೀ ಅರೆಹೊಳೆ, ಗೌರವಾಧ್ಯಕ್ಷ ಯು. ಸಂದೇಶ ಭಟ್, ಕಾರ್ಯದರ್ಶಿ ಪ್ರಶಾಂತ ಮಯ್ಯ, ಕೋಶಾಧ್ಯಕ್ಷ ಹೆಚ್ ಜಗದೀಶ್ ರಾವ್, ಮಹಿಳಾವೇದಿಕೆ ಅಧ್ಯಕ್ಷೆ ಹೇಮಾ ಹೊಳ್ಳ, ಯುವ ವೇದಿಕೆ ಅಧಕ್ಷ ಪದ್ಮನಾಭ ಹೆಬ್ಬಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು, ಶ್ರುತಿ ಶಾಸ್ತ್ರೀ, ಮೇಘನಾ ಶಾಸ್ತ್ರೀ, ರಚನಾ ಪ್ರಾರ್ಥಿಸಿದರು, ದೀಟಿ ಸೀತಾರಾಮಯ್ಯ ಸ್ವಾಗತಿಸಿದರು, ಪ್ರಶಾಂತ ಮಯ್ಯ ವಂದಿಸಿದರು, ಪ್ರಕಾಶ ಐತಾಳ್ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Call us

    Call us

    ಸಮಾರೋಪ ಸಮಾರಂಭದಲ್ಲಿ ಕುಂದಾಪುರ ತಾಲೂಕು ಬ್ರಾಹ್ಮಣ ಪರಿಷತ್ತಿನ ಯುವ ವೇದಿಕೆ ಅಧ್ಯಕ್ಷ ಅವನೀಶ ಹೊಳ್ಳ ಮುಖ್ಯ ಅತಿಥಿಗಳಾಗಿದ್ದರು. ವೇದ ಮೂರ್ತಿ ನಾಗರಾಜ ಶಾಸ್ತ್ರೀ ಅರೆಹೊಳೆ, ಗೌರವಾಧ್ಯಕ್ಷ ಯು. ಸಂದೇಶ ಭಟ್, ಕಾರ್ಯದರ್ಶಿ ಪ್ರಶಾಂತ ಮಯ್ಯ, ಹೇಮಾ ಹೊಳ್ಳ, ಪದ್ಮನಾಭ ಹೆಬ್ಬಾರ್ ಉಪಸ್ಥಿತಿಯಲ್ಲಿದ್ದರು. ಕುಂದಾಪುರ ತಾಲೂಕು ಬ್ರಾಹ್ಮಣ ಪರಿಷತ್ತಿನ ಕಾರ್ಯದರ್ಶಿ ರತ್ನಾಕರ ಉಡುಪ ಬಹುಮಾನ ವಿತರಿಸಿದರು. ಹಾಗೆಯೇ ತಾಲೂಕು ಮಹಿಳಾ ಅಧ್ಯಕ್ಷೆ ಸಂಧ್ಯಾ ಉಡುಪ ವಿದ್ಯಾರ್ಥಿ ವೇತನ ವಿತರಿಸಿದರು. ವಲಯಾಧ್ಯಕ್ಷ ಅರುಣ ಶ್ಯಾನುಭೋಗ ಅಧ್ಯಕ್ಷತೆ ವಹಿಸಿದರು. ಆತಿಥ್ಯ ವಹಿಸಿದ ಅರೆಹೊಳೆ ವೆಂಕಟೇಶ ಶಾಸ್ತ್ರೀ, ನಾಗರಾಜ ಶಾಸ್ತ್ರೀಯವರನ್ನು ಪರಿಷತ್ತಿನ ಪರವಾಗಿ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

    ಸಾನ್ವಿ ಅಡಿಗ ಪ್ರಾರ್ಥಿಸಿದರು, ಪ್ರಶಾಂತ ಮಯ್ಯ ಸ್ವಾಗತಿಸಿದರು, ಪದ್ಮನಾಭ ಹೆಬ್ಬಾರ್ ವಂದಿಸಿದರು, ಶಿಕ್ಷಕಿ ಸುಮಾ ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮೊದಲು ನಡೆದ ವಾರ್ಷಿಕ ಮಹಾಸಭೆಯಲ್ಲಿ ವರದಿ ಮತ್ತು ಆಯಾವ್ಯಯ ಮಂಡಿಸಿ ಸಭೆಯ ಒಪ್ಪಿಗೆ ಪಡೆಯಲಾಯಿತು. ಮುಂದಿನ ೨ ವರ್ಷದ ಅವಧಿಗೆ ನೂತನ ಕಾರ್ಯಕಾರಿ ಮಂಡಳಿ ರಚಿಸಲಾಯಿತು. ವಿಪ್ರ ಸದಸ್ಯರಿಂದ ಪೌರಾಣಿಕ ಯಕ್ಷಗಾನ ಪ್ರದರ್ಶನ ನಡೆಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.