Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ – ಆಪರೇಟಿವ್ ಗೋಳಿಹೊಳೆ ಶಾಖೆಯಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆ
    ಊರ್ಮನೆ ಸಮಾಚಾರ

    ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ – ಆಪರೇಟಿವ್ ಗೋಳಿಹೊಳೆ ಶಾಖೆಯಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಇದರ ಗೋಳಿಹೊಳೆ ಶಾಖೆಯ ವಾರ್ಷಿಕೋತ್ಸವ ಹಾಗೂ ಸೌಹಾರ್ದ ಸಹಕಾರಿ ದಿನಾಚರಣೆಯ ಅಂಗವಾಗಿ ಸೋಮವಾರ ಗೋಳಿಹೊಳೆಯ ಮಹಿಷಮರ್ಧಿನಿ ಸಭಾಭವನದಲ್ಲಿ ಗ್ರಾಹಕರ ಸಭೆ ಹಾಗೂ ಸಹಕಾರಿ ಸದಸ್ಯರು – ಸದಸ್ಯರ ಮಕ್ಕಳಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

    Click Here

    Call us

    Click Here

    ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿಯ ನಿರ್ದೇಶಕ ಎಸ್. ಕೆ. ಮಂಜುನಾಥ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿ ಸರ್ಕಾರದ ಯಾವುದೇ ಅನುದಾನ ಮತ್ತು ಪ್ರೋತ್ಸಾಹವಿಲ್ಲದೆ ಸಂಘದ ಸದಸ್ಯರಿಂದಲೇ ಸೌಹಾರ್ದ ಸಹಕಾರಿ ಸಂಸ್ಥೆಗಳು ಪ್ರಗತಿ ಸಾಧಿಸಿವೆ. ಸಹಕಾರಿ ರಂಗದಲ್ಲಿ ವಿಶ್ವಾಸಾರ್ಹತೆಯನ್ನು ಕಾಯ್ದುಕೊಂಡು ಬಂದಿರುವುದು ಶ್ಲಾಘನಾರ್ಹ. ಸೌಹಾರ್ದ ಸೊಸೈಟಿಗಳು ಸರ್ಕಾರ ವಿಧಿಸಿದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ. ರಾಜಕೀಯ ಉದ್ದೇಶದಿಂದಾಗಿ ಒಳ್ಳೆಯ ಸಹಕಾರಿ ಸಂಸ್ಥೆಗಳು ಮೂಲೆ ಗುಂಪಾಗಿರುವುದು ವಿಷಾದನೀಯ ಎಂದರು.

    ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು. ಶಾಖಾ ವ್ಯಾಪ್ತಿಯ ಕೊರಗ ಸಮುದಾಯದ ಮಕ್ಕಳಿಗೆ ಪ್ರತಿವರ್ಷದಂತೆ ಸಮವಸ್ತ್ರ ವಿತರಿಸಲಾಯಿತು. ಸಂಘದ ಅದೃಷ್ಟಶಾಲಿ ಸದಸ್ಯರನ್ನು ಆಯ್ಕೆ ಮಾಡಿ ವಿಶೇಷ ಬಹುಮಾನ ನೀಡಲಾಯಿತು.

    ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಭಾಗದ ಶಾಖೆಯೊಂದರಲ್ಲಿ ಶೇ.100 ವಸೂಲಾತಿ ಆಗಿರುವುದು ದಾಖಲೆಯಾಗಿದೆ. ಗ್ರಾಹಕರ ಸಹಕಾರದೊಂದಿಗೆ ಪ್ರಾಮಾಣಿಕತೆಯಿಂದ ಸೇವೆ ನೀಡುತ್ತಿರುವ ಸಿಬ್ಬಂದಿ ಇದಕ್ಕೆ ಕಾರಣರಾಗಿದ್ದಾರೆ. ಸದಸ್ಯರಿಗೆ ಸಂಸ್ಥೆಯ ಮೂಕಲ ಅವಶ್ಯ ಸೇವೆಯನ್ನು ಒದಗಿಸಲು ಸಂಘ ಸಿದ್ಧವಾಗಿದೆ ಎಂದರು.

    ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ಸಹಕಾರಿಗಳಾದ ಟಿ. ನಾರಾಯಣ ಹೆಗ್ಡೆ ಮತ್ತು ನಾರಾಯಣ ಶೆಟ್ಟಿ ಚುಚ್ಚಿ ಅವರನ್ನು ಸನ್ಮಾನಿಸಲಾಯಿತು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಗೋಳಿಹೊಳೆ ಗ್ರಾಪಂ ಅಧ್ಯಕ್ಷ ವಸಂತ್ ಹೆಗ್ಡೆ, ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ಉಡುಪಿ ಜಿಲ್ಲಾ ಅಧ್ಯಕ್ಷ ಜಗನ್ನಾಥ ಶೆಟ್ಟಿ, ಸೌಹಾರ್ದ ಸಂಯೋಜಕ ವಿಜಯ ಬಿ.ಎಸ್, ನಿವೃತ್ತ ಮುಖ್ಯಶಿಕ್ಷಕ ಜೆ. ರತ್ನಾಕರ ಶೆಟ್ಟಿ, ಸಂಘದ ಉಪಾಧ್ಯಕ್ಷ ಎಂ. ವಿನಾಯಕ ರಾವ್, ನಿರ್ದೇಶಕ ಸೀತಾರಾಮ ಮಡಿವಾಳ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಕಿಟ್ಟಣ್ಣ ರೈ ಉಪಸ್ಥಿತರಿದ್ದರು.

    ಅಧ್ಯಕ್ಷ ಎಸ್. ರಾಜು ಪೂಜಾರಿ ಸ್ವಾಗತಿಸಿ, ವ್ಯವಸ್ಥಾಪಕ ರಾಘವೇಂದ್ರ ಪೂಜಾರಿ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣಿ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.