Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನವರಿ 7ರಂದು ಬೈಂದೂರು ಕಂಬಳ: ಕ್ಯಾರ್ತೂರು ಪರಿಸರದಲ್ಲಿ ಭರದ ಸಿದ್ದತೆ
    ಊರ್ಮನೆ ಸಮಾಚಾರ

    ಜನವರಿ 7ರಂದು ಬೈಂದೂರು ಕಂಬಳ: ಕ್ಯಾರ್ತೂರು ಪರಿಸರದಲ್ಲಿ ಭರದ ಸಿದ್ದತೆ

    Updated:06/01/2024No Comments
    Facebook Twitter Pinterest LinkedIn WhatsApp Reddit Tumblr Email
    DCIM100MEDIADJI_0863.JPG
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಬೈಂದೂರು ತಾಲೂಕು ರೈತ ಸಂಘದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ರಾಜ್ಯ ಮಟ್ಟದ ಹೊನಲು ಬೆಳಕಿನ ಕಂಬಳೋತ್ಸವ ಮತ್ತು ರೈತರ ಸಮಾಗಮ ಕಾರ್ಯಕ್ರಮ ʼಬೈಂದೂರು ಕಂಬಳʼ ಜನವರಿ 7ರಂದು ನಡೆಯಲಿದ್ದು, ಕ್ಯಾರ್ತೂರಿನಲ್ಲಿ ಭರದ ತಯಾರಿ ನಡೆದಿದೆ.

    Click Here

    Call us

    Click Here

    ಗಂಗಾನಾಡು ಗ್ರಾಮದ ಕ್ಯಾರ್ತೂರು ಶ್ರೀ ನರಸಿಂಹ ದೇವಸ್ಥಾನದ ಪಕ್ಕದ ವಿಶಾಲ ಗದ್ದೆ ಆಯೋಜಿಸಲಾಗಿರುವ ಬೈಂದೂರು ಕಂಬಳ ನಡೆಯಲಿದ್ದು ಅದಕ್ಕಾಗಿ ಸಿದ್ದತೆ ನಡೆಸಲಾಗಿದೆ. ಸಂಜೆ 5ರಿಂದ ಮೆರವಣಿಗೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕಂಬಳ ಜರುಗಲಿದೆ. ಕಂಬಳಕ್ಕಾಗಿಯೇ ಹೊಸತಾಗಿ ಎರಡು ಟ್ರ್ಯಾಕ್ ಇರುವ ಕಂಬಳಗದ್ದೆಯನ್ನು ನಿರ್ಮಾಣ ಮಾಡಲಾಗಿದೆ. ಕರ್ತೂರು ಪರಿಸರವನ್ನು ವಿದ್ಯುದಲಂಕಾರಗಳಿಂದ ಸಿಂಗರಿಸಲಾಗಿದ್ದು ಹಬ್ಬದ ಸಂಭ್ರಮ ಕಳೆಗಟ್ಟಿದೆ.

    .JPG

    ಗ್ರಾಮೀಣ ಭಾಗದಲ್ಲಿಯೂ ಕಂಬಳವನ್ನು ದೊಡ್ಡ ಮಟ್ಟದಲ್ಲಿ ಸಂಘಟಿಸಿ ಅದ್ಧೂರಿಯಾಗಿ ರೈತರ ಹಬ್ಬವಾಗಿ ಆಚರಿಸಬೇಕು ಎಂಬ ಸದುದ್ದೇಶದೊಂದಿಗೆ ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಬೈಂದೂರು ಕಂಬಳದ ನೇತೃತ್ವ ವಹಿಸಿದ್ದು, ಇದಕ್ಕೆ ಬೈಂದೂರಿನ ಮರಾಠಿ ಹಾಗೂ ಗೊಂಡ ಸಮಾಜ, ಬೈಂದೂರು ತಾಲೂಕು ಸಾಂಪ್ರದಾಯಿಕ ಕಂಬಳ ಸಮಿತಿ ಹಾಗೂ ಕಂಬಳಾಭಿಮಾನಿಗಳು ಸಾಥ್ ನೀಡಿದ್ದಾರೆ.

    ಬೈಂದೂರು ಕಂಬಳ ಶೀರ್ಷಿಕೆ ಗೀತೆ ವೀಡಿಯೋ

    ಕಂಬಳದೊಂದಿಗೆ ರೈತರನ್ನು ಒಗ್ಗೂಡಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳ ರೈತ ಸಂಘಗಳಿಗೆ ಹಾಗೂ ಕಂಬಳಕ್ಕೆ ಸರ್ವ ಪಕ್ಷಗಳ ಮುಖಂಡರನ್ನು ಕರೆಯಲಾಗುತ್ತದೆ. ಅಂದಾಜು 10 ಸಾವಿರಕ್ಕೂ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

    ಆಕರ್ಷಕ ಬಹುಮಾನ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಿಂದ ನೂರಾರು ಜೊತೆ ಕೋಣಗಳು ಕಂಬಳೋತ್ಸವದಲ್ಲಿ ಪಾಲ್ಗೊಳ್ಳಲಿದ್ದು, ವಿಜೇತ ಕೋಣಗಳಿಗೆ ಆಕರ್ಷಕ ಬಹುಮಾನ ನೀಡಿ ಗೌರವಿಸಲಾಗುತ್ತದೆ. ಹಲಗೆ ವಿಭಾಗ ಹಾಗೂ ಹಗ್ಗ ಹಿರಿಯ ವಿಭಾಗದ ಪ್ರಥಮ ಸ್ಥಾನಿ ಕೋಣಗಳಿಗೆ ಒಂದು ಪವನ್ ಚಿನ್ನ ಹಾಗೂ ಟ್ರೋಫಿ, ದ್ವಿತೀಯ ಅರ್ಧ ಪವನ್ ಚಿನ್ನ ಹಾಗೂ ಟ್ರೋಫಿ, ಹಗ್ಗ ಕಿರಿಯ ವಿಭಾಗ ಹಾಗೂ ಸಬ್ ಜ್ಯೂನಿಯರ್ ವಿಭಾಗದಲ್ಲಿ ಪ್ರಥಮ ಅರ್ಧ ಪವನ್ ಚಿನ್ನ ಹಾಗೂ ಟ್ರೊಫಿ, ದ್ವಿತೀಯ ಕಾಲು ಪವನ್ ಚಿನ್ನ ಹಾಗೂ ಟ್ರೋಫಿ ನೀಡಿ ಗೌರವಿಸಲಾಗುತ್ತದೆ. ಅಲ್ಲದೇ ಕೋಣ ಓಡಿಸುವವರಿಗೆ ನಾನಾ ವಿಭಾಗದಲ್ಲಿ ಬಹುಮಾನ, ಉತ್ತಮ ವೇಷಭೂಷಣದೊಂದಿಗೆ ಅತಿಹೆಚ್ಚು ಕೋಣಗಳನ್ನು ತಂದವರಿಗೂ ವಿಶೇಷ ಬಹುಮಾನ ನೀಡಿ ಗೌರವಿಸಲಾಗುವುದು. ಸಾಧಕ ರೈತರನ್ನೂ ಕೂಡ ಸನ್ಮಾನಿಸಲಾಗುತ್ತದೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.