Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಒಗ್ಗಟ್ಟು ಮತ್ತು ಐಕ್ಯತೆಯನ್ನು ಕಾಪಾಡಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸೋಣ: ಸಚಿವೆ ಹೆಬ್ಬಾಳ್ಕರ್
    ಉಡುಪಿ ಜಿಲ್ಲೆ

    ಒಗ್ಗಟ್ಟು ಮತ್ತು ಐಕ್ಯತೆಯನ್ನು ಕಾಪಾಡಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸೋಣ: ಸಚಿವೆ ಹೆಬ್ಬಾಳ್ಕರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು.

    Click Here

    Call us

    Click Here

    ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ದೊಡ್ಡಣ್ಣಗುಡ್ಡೆಯ ಪುಷ್ಪ ಹರಾಜು ಕೇಂದ್ರದಲ್ಲಿ ಆಯೋಜಿಸಿರುವ ಫಲಪುಷ್ಟ ಪ್ರದರ್ಶನಕ್ಕೆ ಸಚಿವರು ಚಾಲನೆ ನೀಡಿದರು.

    ಈ ವೇಳೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಾಲ್, ಎಡಿಸಿ ಜಿ.ಎಸ್.ಮಮತಾ ದೇವಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಉಸ್ತುವಾರಿ ಸಚಿವರು ಗಣರಾಜ್ಯೋತ್ಸವದ ಸಂದೇಶ ನೀಡಿ, ಡಾ|| ಬಿ.ಆರ್ ಅಂಬೇಡ್ಕರ್ರವರು ತಮ್ಮ ಅನುಭವ ಜ್ಞಾನ, ಅಧ್ಯಯನ, ದೂರದೃಷ್ಟಿಯ ಒಳನೋಟಗಳಿಂದ ಸಮಾಜದ ಎಲ್ಲಾ ಶೋಷಿತ ಜನ ಸಮುದಾಯದ ಏಳಿಗೆಗೆ, ಸಹಬಾಳ್ವೆಯಿಂದ ಮುಖ್ಯ ವಾಹಿನಿಗೆ ಬಂದು ಎಲ್ಲರಂತೆ ಬದುಕುವ ಅವಕಾಶಗಳನ್ನು ಕಲ್ಪಿಸುವ ಶ್ರೇಷ್ಠ ಸಂವಿಧಾನವನ್ನು ರಚಿಸಿ ಈ ಮೂಲಕ ಮಾನವತೆಯ ಉಳಿವು ಏಳಿಗೆ ಹಾಗೂ ಬೆಳವಣಿಗೆಗೆ ಸಹಕಾರಿಯಾಗಿದ್ದಾರೆ ಎಂದರು.

    ನಮ್ಮ ಸಂವಿಧಾನವು ನಮಗೆ ಮುಕ್ತ, ಪ್ರಜಾಪ್ರಭುತ್ವ, ರಾಷ್ಟ್ರದ ನಾಗರಿಕ ಹಕ್ಕುಗಳನ್ನು ನೀಡಿದೆ ಆದರೆ ನಮ್ಮ ಪ್ರಜಾಪ್ರಭುತ್ವದ ಕೇಂದ್ರ ತತ್ವಗಳಾದ ನ್ಯಾಯ, ಸ್ವಾತಂತ್ರ, ಸಮಾನತೆ ಮತ್ತು ಭಾತೃತ್ವವನ್ನು ಯಾವಾಗಲೂ ಅನುಸರಿಸುವ ಜವಾಬ್ದಾರಿಯನ್ನು ನಮ್ಮ ಮೇಲೆ ಇರಿಸಿದೆ. ರಾಷ್ಟ್ರಪಿತ ಗಾಂಧೀಜಿಯವರ ಜೀವನ ಮತ್ತು ಮೌಲ್ಯಗಳನ್ನು ನಾವು ಮನಸ್ಸಿನಲ್ಲಿಟ್ಟುಕೊಂಡರೆ ಈ ಸಂವಿಧಾನಿಕ ಆದರ್ಶಗಳನ್ನು ಅನುಸರಿಸಲು ನಮಗೆ ಸುಲಭವಾಗುತ್ತದೆ.

    ನಮ್ಮ ದೇಶದ ಆರ್ಥಿಕತೆಯು ವಿಶ್ವದಲ್ಲಿ ನಾಲ್ಕನೆಯ ಸ್ಥಾನ ಪಡೆದಿದ್ದು, ಸಾಕ್ಷರತೆ ಪ್ರಮಾಣವು ನಾಲ್ಕು ಪಟ್ಟಿಗಿಂತ ಹೆಚ್ಚಾಗಿರುತ್ತದೆ, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸಿ ಆಹಾರ ಧಾನ್ಯದ ನಿವ್ವಳ ರಪ್ತುದಾರರಾಗಿದ್ದೇವೆ. ಬಡತನ ಪ್ರಮಾಣದಲ್ಲಿ ಗಮನಾರ್ಹ ಇಳಿಕೆ ಸಾಧಿಸಿ, ಶ್ವೇತ ಕ್ರಾಂತಿಯು ನಮ್ಮನ್ನು ವಿಶ್ವದ ಅತಿದೊಡ್ಡ ಹಾಲು ಉತ್ಪಾದಿಸುವ ರಾಷ್ಟ್ರವನ್ನಾಗಿ ಮಾಡಿದೆ. ವಿಶ್ವದಲ್ಲಿ ವೈಜ್ಞಾನಿಕವಾಗಿ ಹಾಗೂ ತಾಂತ್ರಿಕವಾಗಿ ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಿ ಹೊರಹೊಮ್ಮಿದ್ದೇವೆ. ನಮ್ಮ ವಿಜ್ಞಾನಿಗಳ ಸಾಧನೆ ವಿಶ್ವವೇ ತಿರುಗಿ ನೋಡುವಂತೆ ಮಾಡಿ ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದೆ.

    Click here

    Click here

    Click here

    Call us

    Call us

    ಈ ಸಂದರ್ಭದಲ್ಲಿ ನಮ್ಮ ಗಡಿ ಕಾಯುವ ಹಾಗೂ ದೇಶಕ್ಕಾಗಿ ಯಾವುದೇ ತ್ಯಾಗಕ್ಕಾಗಿ ಸಿದ್ಧರಾಗಿರುವ ನಮ್ಮ ಯೋಧರಿಗೆ, ಕರ್ತವ್ಯದ ಸಾಲಿನಲ್ಲಿ ಪ್ರಾಣ ತ್ಯಾಗ ಮಾಡಿದ ವೀರ ಸೈನಿಕರಿಗೆ ಅರೆಸೇನಾ ಹಾಗೂ ಪೊಲೀಸ್ ಪಡೆಗಳ ಎಲ್ಲಾ ಧೈರ್ಯಶಾಲಿಗಳಿಗೆ ವಂದಿಸುತ್ತೇನೆ ಎಂದ ಅವರು, ದೇಶದಲ್ಲಿ ಯಾವುದೇ ದುಷ್ಟ ಶಕ್ತಿಗಳು ತಲೆ ಎತ್ತದಂತೆ ಮಾಡುವುದರ ಜೊತೆಗೆ ಸರ್ವ ಧರ್ಮಗಳನ್ನು ಗೌರವಿಸಿ ಯಾವುದೇ ಕೋಮು ಗಲಭೆಗಳಿಗೆ ಅವಕಾಶಕೊಡದೇ ಸರ್ವ-ಧರ್ಮ ಸಮನ್ವಯ ಭಾವ ಬೆಳೆಸಿಕೊಂಡು ಹೋಗಲು ನಾವೆಲ್ಲರೂ ಇಂದು ಪ್ರತಿಜ್ಞೆ ಮಾಡಬೇಕಾಗಿದೆ ಎಂದರು.

    ರಾಜ್ಯ ಸರ್ಕಾರದ ಯೋಜನೆಗಳು ಸರ್ವರಿಗೂ ಅನುಕೂಲವಾಗುವಂತಿರಬೇಕು ಎಂಬ ದೃಷ್ಠಿಯಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾತಿ, ಧರ್ಮ, ಲಿಂಗಬೇಧಗಳಿಲ್ಲದೇ ಸರ್ವರಿಗೂ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆ ಮೆರೆಯಲಿದೆ. ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗುವ ನೈಪುಣ್ಯತೆಯನ್ನು ಜನರು ಬೆಳೆಸಿಕೊಳ್ಳಬೇಕು.

    ರಾಜ್ಯದಾದ್ಯಂತ ತೀವ್ರ ಮಳೆಯ ಕೊರತೆಯಿಂದಾಗಿ ಬರಗಾಲದ ಛಾಯೆ ಆವರಿಸಿದೆ. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿದ್ದು, ಈ ಜಿಲ್ಲೆಯ ಮೂರು ತಾಲೂಕುಗಳಲ್ಲೂ ಬರದ ಛಾಯೆ ಆವರಿಸಿದ್ದು, ಜಿಲ್ಲೆಯ ಹೆಬ್ರಿ, ಬ್ರಹ್ಮಾವರ ಹಾಗೂ ಕಾರ್ಕಳ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಈಗಾಗಲೇ ಸೇರಿಸಲಾಗಿದೆ. ಬರ ನಿರ್ವಹಣೆಗೆ ಜಿಲ್ಲಾಡಳಿತ ಸನ್ನದ್ದವಾಗಿದ್ದು, ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.

    ಬರ ಸಮೀಕ್ಷೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಒಟ್ಟು 13,937 ಹೆಕ್ಟೇರ್ ನಷ್ಟು ಭತ್ತದ ಬೆಳೆ ಹಾನಿ ಅಂದಾಜಿಸಲಾಗಿದ್ದು, ರೂ.11 ಕೋಟಿ 85 ಲಕ್ಷ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ, ಸರ್ಕಾರದಿಂದ ಮೊದಲನೇ ಕಂತಿನಲ್ಲಿ 19,071 ರೈತರಿಗೆ ರೂ.2 ಕೋಟಿ 64 ಲಕ್ಷ ಪರಿಹಾರವನ್ನು ಪಾವತಿಸಲಾಗಿದೆ.

    ಸರ್ಕಾರಿ ಅಧಿಕಾರಿಗಳು ಜನರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಸರ್ಕಾರದ ನಾನಾ ಸೇವೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದು, ಜನರ ಸಮಸ್ಯೆಗಳನ್ನು ಸ್ಥಳೀಯವಾಗಿ ಜಿಲ್ಲಾ ಮಟ್ಟದಲ್ಲಿ ಬಗೆಹರಿಸಲು ಪ್ರಾರಂಭಿಸಿರುವ ಜನತಾ ದರ್ಶನಕ್ಕೆ ಜಿಲ್ಲೆಯಲ್ಲಿ ಈವರೆಗೆ 403 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕೃತವಾಗಿದ್ದು, ಅವುಗಳಲ್ಲಿ 401 ಅರ್ಜಿಗಳನ್ನು ಈಗಾಗಲೇ ವಿಲೇವಾರಿ ಮಾಡಲಾಗಿದೆ.

    ನಮ್ಮ ಕರ್ನಾಟಕವು ಜೈವಿಕ ತಂತ್ರಜ್ಞಾನದಲ್ಲಿ ಭಾರತದ ರಫ್ತು ಮತ್ತು ಉತ್ಪಾದನೆಯಲ್ಲಿ ಶೇ.60 ಕೊಡುಗೆ ನೀಡುತ್ತಿದೆ, ಇದು ಇಪ್ಪತ್ತು ಶತಕೋಟಿ ಮೌಲ್ಯಗಳನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಬಯೋಟೆಕ್ ಪಾಲಿಸಿಯನ್ನು ಜಾರಿಗೆ ತಂದಿದ್ದೇವೆ.

    ಅಕ್ರಮ ಸಾಗುವಳಿ ಮಂಜೂರಿಗೆ ಡಿಜಿಟಲ್ ಸ್ಪರ್ಶ ನೀಡಲು ನಮ್ಮ ಸರ್ಕಾರ ಬಗರ್ಹುಕುಂ ಎಂಬ ವಿನೂತನ ತಂತ್ರಾಂಶವೊಂದನ್ನು ರೂಪಿಸುವ ಮೂಲಕ ಭೂ ಮಂಜೂರಾತಿ ಸಮಿತಿಯ ತಾಂತ್ರಿಕ ನೆರವಿನಿಂದಲೂ ರೈತರ ಸಾಗುವಳಿ ಪರಿಶೀಲನೆ ಮಾಡುವ ಮೂಲಕ ಭೂ ಮಂಜೂರಾತಿ ಪ್ರಕ್ರಿಯೆಗೆ ಮೊದಲ ಬಾರಿಗೆ ಹೊಸ ಆಯಾಮ ನೀಡಲಾಗಿದೆ.

    ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ರೈತರ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲು ಕ್ರಮವಹಿಸಿದೆ ಎಂದು ಮಾನ್ಯ ಮುಖ್ಯಮಂತ್ರಿಗಳು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಘೋಷಿಸಿದ್ದಾರೆ

    ಖಾಸಗಿ ವೈದ್ಯಕೀಯ ವ್ಯವಸ್ಥೆಯಡಿ ಮಂಡಿಚಿಪ್ಪು, ಹೃದಯ ಕವಾಟ ಬದಲಾವಣೆಯಂತಹ ಶಸ್ತ್ರ ಚಿಕಿತ್ಸೆಗಳು ದುಬಾರಿಯಾಗಿರುವುದರಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚಿದ್ದು, 2021-22 ರಲ್ಲಿ 13 ಲಕ್ಷಗಳಿದ್ದರೆ, 2022-23 ನೇ ಸಾಲಿನಲ್ಲಿ 22 ಲಕ್ಷ ದುಪ್ಪಟ್ಟಾಗಿದೆ. ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ.

    ರಾಜ್ಯದಲ್ಲಿ ಉದ್ಯೋಗ ಸೃಜನೆಗೆ ಆದ್ಯತೆ ನೀಡಲಾಗಿದ್ದು, ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನ ಸಮಿತಿಯಲ್ಲಿ 73 ಯೋಜನೆಗಳಿಗೆ ಅನುಮೋದನೆ ನೀಡುವುದರೊಂದಿಗೆ 3935 ಕೋಟಿ ಬಂಡವಾಳ ಹೂಡಿಕೆಯಾಗಿ ಅಂದಾಜು 14,500 ಉದ್ಯೋಗ ಸೃಷ್ಠಿಯಾಗಲಿದೆ.

    ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ತೆಯ ನಿರ್ಮಾಣ ಮತ್ತು ಉನ್ನತ್ತೀಕರಣ, ಒಳಚರಂಡಿ ಸಂಸ್ಕರಣ ಘಟಕಗಳ ದುರಸ್ಥಿ ಸೇರಿದಂತೆ ಗೃಹಾ ಸೇವಾ ಸಂಪರ್ಕಗಳನ್ನು ಒದಗಿಸಲು ರೂ.30 ಕೋಟಿ ಅನುದಾನ ಬಿಡುಗಡೆಯಾಗಿರುತ್ತದೆ.

    ಉಡುಪಿ ಜಿಲ್ಲೆ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ವಕೀಲರ ಭವನ ಹಾಗೂ ಎ.ಡಿ.ಆರ್ ಸಂಕೀರ್ಣವನ್ನು ಒಳಗೊಂಡ ಅನೆಕ್ಸ್ ನ್ಯಾಯಾಲಯ ನಿರ್ಮಾಣಕ್ಕೆ ರೂ.15.14 ಕೋಟಿಗಳಿಗೆ ಅನುಮೋದನೆ ನೀಡಲಾಗಿದೆ.

    ಹಿಂದುಳಿದ ವರ್ಗಗಳ ಇಲಾಖೆಯ ವಸತಿ ನಿಲಯ ಹಾಗೂ ವಸತಿ ಶಾಲೆಗಳಿಗೆ 6036 ವಿದ್ಯಾರ್ಥಿಗಳು ದಾಖಲಾಗಿ ಶಿಕ್ಷಣ ಸೇರಿದಂತೆ ಮೂಲ ಸೌಲಭ್ಯಗಳನ್ನು ಪಡೆಯುತ್ತಿದ್ದು, 2567 ವಿದ್ಯಾರ್ಥಿಗಳಿಗೆ ರೂ.1 ಕೋಟಿ 46 ಲಕ್ಷ ಶುಲ್ಕ ವಿನಾಯಿತಿ ಮಂಜೂರು ಮಾಡಲಾಗಿರುತ್ತದೆ. ಬಾರ್ಕೂರು ಹಾಗೂ ಕುಂದಾಪುರದಲ್ಲಿ ಹೊಸದಾಗಿ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ತಲಾ 5 ಕೋಟಿಗಳಂತೆ 10 ಕೋಟಿ ಗಳನ್ನು ಮಂಜೂರು ಮಾಡಲಾಗಿದೆ.

    ಮೀನುಗಾರಿಕೆಯಲ್ಲಿ ತೊಡಗಿರುವ ಯಾಂತ್ರೀಕೃತ ದೋಣಿಗಳಿಗೆ 73,808 ಕಿಲೋ ಲೀಟರ್ ಮಾರಾಟ ಕರರಹಿತ ಡೀಸೆಲ್, 5074 ಪರ್ಮಿಟ್ ಹೊಂದಿರುವ ಮೀನುಗಾರರಿಗೆ ಸಬ್ಸಿಡಿ ದರದಲ್ಲಿ ಸೀಮೆಎಣ್ಣೆಯನ್ನು, ಜೀವ ರಕ್ಷಕ ಕಿಟ್ಟುಗಳು ಸೇರಿದಂತೆ ಮೀನುಸಾಗಾಟ ವಾಹನಕ್ಕೆ ಸಹಾಯಧನ ಒದಗಿಸಲಾಗಿದೆ.

    ಜಿಲ್ಲೆಯ ಹೆಬ್ರಿ ತಾಲೂಕು ಕೆರೆಬೆಟ್ಟು, ಶಿವಪುರ ಗ್ರಾಮದಲ್ಲಿ 114 ಎಕ್ರೆ ಹಾಗೂ ಕಾರ್ಕಳದ ನಿಟ್ಟೆಯಲ್ಲಿ 51 ಎಕ್ರೆ ಜಮೀನಿನಲ್ಲಿ ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಕಾಪು ತಾಲೂಕಿನ ಎಲ್ಲೂರು ಹಾಗೂ ಸಾಂತೂರು ಗ್ರಾಮದಲ್ಲಿ 942 ಎಕ್ರೆ ಸ್ಥಳ ಪರಿಶೀಲನೆ ಮಾಡಿ, ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಕೈಗಾರಿಕೆ ಸ್ಥಾಪನೆಯ ಪ್ರಕ್ರಿಯೆಯ ವೇಗವನ್ನು ಹೆಚ್ಚಿಸಿ, ಮುಂದಿನ ದಿನಗಳಲ್ಲಿ ಸ್ಥಳೀಯ ಜನರಿಗೆ ಉದ್ಯೋಗ ಲಭಿಸುವಂತೆ ಮಾಡಲು ಸೂಚನೆ ನೀಡಲಾಗಿದೆ.

    ಜಿಲ್ಲೆಯ ಸುಂದರ ಪ್ರಕೃತಿ ತಾಣಗಳು, ಕಡಲ ತೀರಗಳ ಧಾರ್ಮಿಕ ಕೇಂದ್ರಗಳು ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರವಾಸಿಗರನ್ನು ಆಕರ್ಷಿಸಿದೆ. ಇಲ್ಲಿ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು.

    ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಡಿಸೆಂಬರ್ ಅಂತ್ಯಕ್ಕೆ 3740 ನೋಂದಣಿಯಾಗಿ ಶೇ.84 ರಷ್ಟು ಪ್ರಗತಿ ಸಾಧಿಸಲಾಗಿದೆ.

    ಜಿಲ್ಲೆಯಲ್ಲಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು 59 ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ಗಳನ್ನು ಖರೀದಿಸಲು 1 ಕೋಟಿ 72 ಲಕ್ಷ ಅತಿಥಿ ಶಿಕ್ಷಕರಿಗೆ 2 ಕೋಟಿ ಹಾಗೂ ವಿವೇಕ ಶಾಲಾ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಈವರೆಗೆ 18 ಕೋಟಿ 48 ಲಕ್ಷ ಅನುದಾನ ನೀಡಲಾಗಿದೆ.

    ಮಹಾತ್ಮಗಾಂಧಿ ರಾಷ್ಟೀಯ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಸ್ತುತ ಸಾಲಿನಲ್ಲಿ 9ಲಕ್ಷ ಮಾನವ ದಿನಗಳನ್ನು ಗುರಿಯಲ್ಲಿ ಈವರೆಗೆ 7 ಲಕ್ಷ ಮಾನವ ದಿನಗಳನ್ನು ಸೃಜಿಸಿ 37 ಕೋಟಿ 70 ಲಕ್ಷ ಅನುದಾನ ಪಾವತಿಸಿ, 5069 ಶಾಶ್ವತ ಆಸ್ತಿಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಸೃಜಿಸಲಾಗಿದೆ.

    ಸಂವಿಧಾನ ಜಾರಿಗೆ ಬಂದ 75 ವರ್ಷಾಚರಣೆಯ ಹಿನ್ನೆಲೆ, ಸಂವಿಧಾನದ ಮೌಲ್ಯ ಹಾಗೂ ಧ್ಯೇಯಗಳನ್ನು ಜನಸಾಮಾನ್ಯರಿಗೆ ಅರಿವು ಮೂಡಿಸಲು ಸಂವಿಧಾನ ಜಾಗೃತಿ ಜಾಥಾದ ಸ್ಥಬ್ಧಚಿತ್ರಕ್ಕೆ ಇಂದು ನಾನೇ ಚಾಲನೆ ನೀಡಿದ್ದೇನೆ ಈ ಜಾಥಾವು ಜಿಲ್ಲೆಯ 155 ಗ್ರಾಮ ಪಂಚಾಯತಿಗಳಲ್ಲಿ ಸಾಗಿ ಜನಸಾಮಾನ್ಯರಲ್ಲಿ ಜಾಗೃತ ಮೂಡಿಸಲಿದೆ. ಕಳೆದ ಸೆಪ್ಟಂಬರ್ ಮಾಹೆಯಲ್ಲಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮವನ್ನು ಶಾಲಾ-ಕಾಲೇಜುಗಳಲ್ಲಿ ಯಶಸ್ವಿಯಾಗಿ ಜಿಲ್ಲೆಯಲ್ಲಿ ನಡೆಸಲಾಗಿದೆ.

    ದೇಶದ ನಾಗರೀಕರಾಗಿ ಭವ್ಯ ಪರಂಪರೆ, ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಹೋಗುವತ್ತ ನಾವೆಲ್ಲರೂ ಯೋಚಿಸಬೇಕಾಗಿದೆ. ಜಾತಿ, ಭಾಷೆ, ಪಂಗಡ, ಸಂಕುಚಿತ ಭಾವನೆಯಿಂದ ಹೊರಬಂದು ಸ್ನೇಹ ಹಾಗೂ ಸೌಹಾರ್ದತೆಯ ವಾತಾವರಣ ನಿರ್ಮಿಸಿ ದೇಶದ ಒಗ್ಗಟ್ಟು ಮತ್ತು ಐಕ್ಯತೆಯನ್ನು ಕಾಪಾಡಿ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಸೇರಿ ಶ್ರಮಿಸೋಣ ಎಂದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರ್ಕಾರಿ, ಸರ್ಕಾರೇತರ ಸಂಸ್ಥೆಗಳ ದೈನಂದಿನ ಚಟುವಟಿಕೆಯಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ

    20/12/2025

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.