Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ ಗ್ರಾಪಂ ಅಧ್ಯಕ್ಷರನ್ನು ವಜಾಗೊಳಿಸಲು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
    ಊರ್ಮನೆ ಸಮಾಚಾರ

    ಉಪ್ಪುಂದ ಗ್ರಾಪಂ ಅಧ್ಯಕ್ಷರನ್ನು ವಜಾಗೊಳಿಸಲು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಕರ್ನಾಟಕ ರಾಜ್ಯ ದಲಿತ ಸಂಘರ್ಷ ಜಿಲ್ಲಾ ಸಮಿತಿ ಉಡುಪಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತಾಲೂಕು ಸಮಿತಿ ಬೈಂದೂರು, ಡಾ. ಬಿ.ಆರ್.ಅಂಬೇಡ್ಕರ್ ಮಹಿಳಾ ಸಂಘ ಬೈಂದೂರು ಮತ್ತು ದಲಿತ ಸಂಘರ್ಷ ಸಮಿತಿ ಮಹಿಳಾ ಘಟಕ ತಾಲೂಕು ಸಮಿತಿ ಬೈಂದೂರು, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಗ್ರಾಮ ಸಮಿತಿ ಉಪ್ಪುಂದ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ವಿರೋಧಿ ಉಪ್ಪುಂದ ಗ್ರಾಪಂ ಅಧ್ಯಕ್ಷರನ್ನು ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಗ್ರಾಪಂ ಎದುರು ಶುಕ್ರವಾರ ಧರಣಿ ಹಮ್ಮಿಕೊಳ್ಳಲಾಗಿತ್ತು.

    Click Here

    Call us

    Click Here

    ಈ ವೇಳೆ ದಲಿತ ದೌರ್ಜನ್ಯ ಜಾಗೃತಿ ಸಮಿತಿ ಉಡುಪಿ ಜಿಲ್ಲಾ ಸದಸ್ಯ ವಾಸುದೇವ ಮುದೂರು ಮಾತನಾಡಿ ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಜಾತಿವಾದಿ ಮನಸ್ಥಿತಿ ನಿವಾರಣೆಯಾಗದಿರುವುದು ಸಮಾಜಕ್ಕೆ ಕಳಂಕ. ಸಂವಿಧಾನಬದ್ಧ ವ್ಯವಸ್ಥೆಯಡಿ ಆಯ್ಕೆಯಾದ ಜನಪ್ರತಿನಿಧಿಗಳು ಜನ ಹಾಗೂ ದೀನದಲಿತರ ಪರ ವಾಗಿ ಕೆಲಸ ಮಾಡಬೇಕೆ ಹೊರತು ಸರ್ವಾಧಿಕಾರಿ ಧೋರಣೆ ಸರಿಯಲ್ಲ ಎಂದು ಹೇಳಿದ್ದಾರೆ.

    ಜನರಲ್ಲಿ ಸಂವಿಧಾನದ ಆಶಯ, ಹಕ್ಕೊತ್ತಾಯದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸರಕಾರದ ಆದೇಶದಂತೆ ಸಂವಿ ಧಾನ ಜಾಗೃತಿ ಜಾಥಾ ಹಮ್ಮಿ ಕೊಳ್ಳಲಾಗಿತ್ತು. ಆದರೆ ಡಾ.ಬಿ.ಆರ್.ಅಂಬೇಡ್ಕರ್ ಹಾಕಿಕೊಟ್ಟ ಸಂವಿಧಾನದಡಿ ಗೆದ್ದು ಬಂದು ಗ್ರಾಪಂ ಅಧ್ಯಕ್ಷರಾಗಿರುವ ಉಪ್ಪುಂದ ಗ್ರಾಪಂ ಪ್ರಥಮ ಪ್ರಜೆ ಕಾಲಿಗೆ ಚಪ್ಪಲಿ ಧರಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಅಗೌರವ ತೋರಿದ್ದಾರೆ. ಹೀಗೆಯೇ ಬೇರೆ ಬೇರೆ ವಿಚಾರದಲ್ಲಿ, ಆಡಳಿತಾತ್ಮಕ ವ್ಯವಸ್ಥೆಯಲ್ಲಿ ದುರ್ವ ರ್ತನೆ ತೋರುವ ಇವರ ದುರಾಡಳಿತದ ಸೊಕ್ಕನ್ನು ಮುರಿಯಲು ದಸಂಸ ಸಿದ್ಧವಿದೆ. ಮೊದಲು ಮನಸ್ಥಿತಿ ಸರಿಪಡಿಸಿಕೊಳ್ಳಿ ಇಲ್ಲವಾದರೆ ಕುರ್ಚಿ ಬಿಡಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ದಸಂಸ ಕುಂದಾಪುರ ತಾಲೂಕು ಸಂಚಾಲಕ ರಾಜು ಬೆಟ್ಟಿನಮನೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳು ಪ್ರಭುಗಳಾಗಬೇಕು. ಆದರೆ ಕೊಳಕು ರಾಜಕೀಯದ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡುವ ಪ್ರವೃತ್ತಿಗಳು ಅಪಾಯಕಾರಿಯಾಗಿದೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ ಸಂವಿಧಾನ ಕೇವಲ ದಲಿತರಿಗೆ ಮಾತ್ರ ಸಂವಿಧಾನ ನೀಡಿಲ್ಲ. ಇಡೀ ದೇಶ, ವಿಶ್ವ ಮೆಚ್ಚುವ ಸಂವಿಧಾನ ನೀಡಿದ್ದಾರೆ. ಅಂಬೇಡ್ಕರ್ ವಿಚಾರಧಾರೆ ಬಂದಾಗ ಜಾತಿ ಎಳೆದು ತರುವ ಕೀಳು ಮನಸ್ಥಿತಿ ನಿಲ್ಲಬೇಕು. ಇಂತಹ ವರ್ತನೆಯನ್ನು ಪಕ್ಷಾತೀತವಾಗಿ ಖಂಡಿಸಬೇಕು ಎಂದರು.

    ಸ್ಥಳಕ್ಕೆ ಆಗಮಿಸಿದ ಬೈಂದೂರು ತಾಪಂ ಇಓ ಭಾರತಿ ಹಾಗೂ ಉಪತಹಶಿಲ್ದಾರ್ ಲತಾ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ದಸಂಸ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ ಗಿಳಿಯಾರು, ಹಿರಿಯ ದಲಿತ ಮುಖಂಡ ಮುಡೂರ ಮಾಸ್ಟರ್ ಅಂಬಾಗಿಲು, ಮಹಿಳಾ ಒಕ್ಕೂಟದ ಸಂಚಾಲಕಿ ಗೀತಾ ಸುರೇಶ್, ದಸಂಸ ಜಿಲ್ಲಾ ಸಮಿತಿ ಸದಸ್ಯ ಮಂಜುನಾಥ ನಾಗೂರು, ಕುಂದಾಪುರ ತಾಲೂಕು ಸಮಿತಿಯ ಸುರೇಶ್ ಹಕ್ಲಾಡಿ, ಬೈಂದೂರು ತಾಲೂಕು ಸಮಿತಿ ಪ್ರಧಾನ ಸಂಚಾಲಕ ನಾಗರಾಜ ಉಪ್ಪುಂದ, ಸಂಘಟನಾ ಸಂಚಾಲಕ ಗೋವಿಂದ ಹಳಗೇರಿ, ಸತೀಶ್ ಯಡ್ತರೆ, ಕೋಶಾಧಿಕಾರಿ ಕೆ.ಭಾಸ್ಕರ್ ಕೆರ್ಗಾಲು, ಜ್ಯೋತಿಬಾಪುಲೆ ಅಂಬೇಡ್ಕರ್ ಸಂಘದ ಅಧ್ಯಕ್ಷೆ ನಾಗಮ್ಮ, ದಸಂಸ ಮುಖಂಡರಾದ ರಾಮ ಮಯ್ಯಾಡಿ, ಸದಾನಂದ ಮೋವಾಡಿ, ರಾಘವೇಂದ್ರ ಶಿರೂರು, ಮಾಧವ ಬಾಕಾಡ, ಸುಂದರ ಬಾಬು ಹೊಸ್ಕೋಟೆ, ಶಿವರಾಜ ಬೈಂದೂರು, ಲಕ್ಷ್ಮಣ ಬೈಂದೂರು, ಶಿವರಾಮ ಹಳಗೇರಿ, ರಮೇಶ ನಾಡ, ರಂಗ ಯಡ್ತರೆ, ರಾಮ ಉಪ್ಪುಂದ, ಸಂದೀಪ ಮರವಂತೆ, ವಿನಯಾ ಮಾಸ್ತಿಕಟ್ಟೆ, ಗೀತಾ ಸುರೇಶ್, ಭಾರತಿ ಶಿರೂರು, ನಾಗರತ್ನಾ ಭಾಸ್ಕರ್ ಮೊದಲಾದವರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.