ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ: ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್‌ಗೆ ಪ್ರಥಮ ಸ್ಥಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ಧಾರವಾಡದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಪ್ರಥಮ ಸ್ಥಾನ ಪಡೆದಿರುತ್ತಾಳೆ.

Call us

Click Here

ಪದವಿ ಪೂರ್ವ ವಿಭಾಗದಿಂದ ಭರತನಾಟ್ಯ ಸ್ಪರ್ಧೆಗೆ ಉಡುಪಿ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿಯಾಗಿದ್ದು, ಅಲಕಾ ಹೆಬ್ಬಾರ್ ಕಾಲೇಜಿನ ಸಾಂಸ್ಕೃತಿಕ ತಂಡದ ಉದಯೋನ್ಮುಖ ಪ್ರತಿಭೆ. ಈ ತನಕ ಹಲವು ಕಾರ್ಯಕ್ರಮಗಳಲ್ಲಿ ಭರತನಾಟ್ಯ ಪ್ರದರ್ಶನ ನೀಡಿ ಬಹುಮಾನ ಪಡೆದಿದ್ದಾಳೆ.

ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.

Leave a Reply