Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚಿತ್ರೋದ್ಯಮಕ್ಕೆ ಸಹಕಾರ ನೀಡಿ ಡಾಲಿ ಮನವಿ: ಸ್ಥಳದಲ್ಲೆ ಸಮ್ಮತಿ ಸೂಚಿಸಿದ ಸಿದ್ದರಾಮಯ್ಯ
    ಸಿನಿ ಟಾಕೀಸ್

    ಚಿತ್ರೋದ್ಯಮಕ್ಕೆ ಸಹಕಾರ ನೀಡಿ ಡಾಲಿ ಮನವಿ: ಸ್ಥಳದಲ್ಲೆ ಸಮ್ಮತಿ ಸೂಚಿಸಿದ ಸಿದ್ದರಾಮಯ್ಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು:
    15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ಈ ಬಾರಿ ಬೆಂಗಳೂರು ಚಿತ್ರೋತ್ಸವಕ್ಕೆ ನಟ ಡಾಲಿ ಧನಂಜಯ್ ಅವರನ್ನು ಈ ಬಾರಿಯ ಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಸರ್ಕಾರ ಘೋಷಿಸಿದೆ. ಡಾಲಿ ಧನಂಜಯ್ ಅವರನ್ನು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನೇಮಕ ಮಾಡಿರುವುದು ಅವರ ಅಭಿಮಾನಿಗಳಿಗೆ, ಸಿನಿಮಾ ಪ್ರೇಮಿಗಳಿಗೆ ಖುಷಿ ತಂದಿದೆ.

    Click Here

    Call us

    Click Here

    ವಿಧಾನಸೌಧದ ಮುಂಭಾಗದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ ನೀಡಿದರು.

    ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಡಾಲಿ ಧನಂಜಯ, ಸಾಧು ಕೋಕಿಲ, ಆರಾಧನಾ ಸೇರಿದಂತೆ ಅನೇಕ ಸಿನಿ ಗಣ್ಯರು ಉಪಸ್ಥಿತರಿದ್ದರು.

    ಈ ಬಾರಿ ಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿರುವ ಡಾಲಿ ಧನಂಜಯ ಮಾತನಾಡಿ ಚಿತ್ರೋದ್ಯಮದ ಪರವಾಗಿ ಒಂದಿಷ್ಟು ಬೇಡಿಕೆಗಳನ್ನು ಸಿಎಂ ಮುಂದಿಟ್ಟರು.

    ‘ಕೊರೊನಾ ಬಳಿಕ ಸಬ್ಸಿಡಿಯನ್ನು ನಿಲ್ಲಿಸಲಾಗಿದೆ, ಇದರ ಜೊತೆಗೆ ಪ್ರಶಸ್ತಿ ಕೂಡ ನಿಂತಿದೆ. ಕಲಾವಿದರಿಗೆ ಪ್ರೋತ್ಸಾಹ ಕೂಡ ತುಂಬಾ ಮುಖ್ಯ. ಕಾಂತರ, ಕೆಜಿಎಫ್ ಅಂತಹ ಸಿನಿಮಾಗಳು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ. ಇದರ ಜೊತೆಗೆ ಸರ್ಕಾರದ ಪ್ರೋತ್ಸಾಹ ಕೂಡ ತುಂಬಾ ಮುಖ್ಯ. ಸದ್ಯ ನಿಂತಿರುವ ಪ್ರಶಸ್ತಿ ಮತ್ತು ಸಬ್ಸಿಡಿಯನ್ನು ಮುಂದುವರಿಸಬೇಕೆಂದು ಚಿತ್ರರಂಗದ ಪರವಾಗಿ ನಾನು ಸಿಎಂ ಬಳಿ ಕೇಳಿಕೊಳ್ಳುತ್ತಿದ್ದೇನೆ’ ಎಂದರು.

    Click here

    Click here

    Click here

    Click Here

    Call us

    Call us

    ಧನಂಜಯ್ ಮಾತುಗಳಿಗೆ ಸಿಎಂ ಸಿದ್ದರಾಮಯ್ಯ ಅಲ್ಲೇ ಸಮ್ಮತಿ ಸೂಚಿಸಿದರು. ಚಿತ್ರೋತ್ಸವ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಚಿತ್ರೋತ್ಸವಕ್ಕೆ ಸರ್ಕಾರ ಎಲ್ಲಾ ರೀತಿಯ ಸಹಾಯವನ್ನು ನೀಡಿದೆ, ಮುಂದೆಯೂ ಸಹ ಚಿತ್ರರಂಗಕ್ಕೆ ಎಲ್ಲಾ ರೀತಿಯ ಸಹಾಯವನ್ನು ಮಾಡಲಿದೆ. ಕನ್ನಡ ಚಿತ್ರರಂಗಕ್ಕೆ ಎಲ್ಲಾ ರೀತಿಯ ಬೆಂಬಲ, ಹಣಕಾಸಿನ ಸಹಕಾರವನ್ನು ಕೊಡುತ್ತೇನೆ. 2019 ರಿಂದ ಚಲನಚಿತ್ರ ಪ್ರಶಸ್ತಿಗಳನ್ನು ಕೊಟ್ಟಿಲ್ಲ. ಈಗ ನಾನು ಕಮಿಟಿಗಳನ್ನು ಮಾಡಿದ್ದೇನೆ. ಆ ಕಮಿಟಿ ವರದಿ ಕೊಟ್ಟ ತಕ್ಷಣ ಎಲ್ಲಾ ವರ್ಷದ ಪ್ರಶಸ್ತಿಗಳನ್ನು ಕೊಡುತ್ತೇವೆ’ ಎಂದರು.

    ಚಲನಚಿತ್ರೋತ್ಸವ ಮಾರ್ಚ್ 7 ರವರೆಗೆ ನಡೆಯಲಿದೆ. ಈ ಬಾರಿ 50ಕ್ಕೂ ಹೆಚ್ಚು ರಾಷ್ಟ್ರಗಳಿಂದ ಆಸ್ಕರ್ ಪ್ರಶಸ್ತಿಗೆ ನಾಮಾಂಕಿತವಾದ ಸಿನಿಮಾಗಳೂ ಸೇರಿದಂತೆ 200ಕ್ಕೂ ಹೆಚ್ಚು ಚಲನಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾರರ್, ಹಾಸ್ಯ ಮತ್ತು ವಿಸ್ಮಯದ ಪರಿಗೆ ಪ್ರೇಕ್ಷಕ ಫಿದಾ –  ‘ಛೂ ಮಂತರ್’ ಚಿತ್ರ ವಿಮರ್ಶೆ

    11/02/2025

    ಯಾಕೂಬ್ ಖಾದರ್ ಗುಲ್ವಾಡಿ ನಿರ್ದೇಶನದ ಟ್ರಿಪಲ್‌ ತಲಾಖ್‌ ಸಿನಿಮಾಗೆ ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಚಿತ್ರ ಪ್ರಶಸ್ತಿ

    24/01/2025

    ಕನ್ನಡದ ಅತೀ ದೊಡ್ಡ ಡಾನ್ಸ್‌ ಮ್ಯೂಸಿಕ್‌ ವಿಡಿಯೋ ಸಾಂಗ್‌. ಡ್ಯಾನ್ಸ್ ಪ್ರತಿಭೆಯ ಅನಾವರಣ “ನಿಲ್ಲಬೇಡ”

    23/11/2024
    Leave A Reply Cancel Reply

    6 − three =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.