Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ‘ಕುಂದಾಪ್ರ ಕನ್ನಡ ಅಧ್ಯಯನ ಪೀಠ’ ಸ್ಥಾಪನೆ ಪ್ರಸ್ತಾವನೆಗೆ ಮತ್ತೆ ಜೀವಕಳೆ, ಅನುದಾನ ಮಂಜೂರು
    ಊರ್ಮನೆ ಸಮಾಚಾರ

    ‘ಕುಂದಾಪ್ರ ಕನ್ನಡ ಅಧ್ಯಯನ ಪೀಠ’ ಸ್ಥಾಪನೆ ಪ್ರಸ್ತಾವನೆಗೆ ಮತ್ತೆ ಜೀವಕಳೆ, ಅನುದಾನ ಮಂಜೂರು

    Updated:11/03/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ
    : ಕುಂದಾಪ್ರ ಕನ್ನಡ ಅಧ್ಯಯನ ಪೀಠ ಆರಂಭಕ್ಕೆ ಆಸ್ಥೆ ವಹಿಸಿ ಮಂಗಳೂರು ವಿಶ್ವವಿದ್ಯಾನಿಲಯವು ಸರಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ನಾಲ್ಕು ವರ್ಷಗಳ ಜೀವಕಳೆ ದೊರೆತಿದೆ. ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಟಿಪ್ಪಣಿಯಾಗಿದ್ದು, ಶೀಘ್ರವೇ ಅನುದಾನ ಬಿಡುಗಡೆಗೊಂಡು ಅಧ್ಯಯನ ಪೀಠ ಸ್ಥಾಪನೆಯ ಹಾದಿ ಸುಗಮವಾಗಲಿದೆ.

    Click Here

    Call us

    Click Here

    ನಾಲ್ಕು ವರ್ಷಗಳ ಹಿಂದೆ ಅಧ್ಯಯನ ಪೀಠ ಆರಂಭಿಸಲು ಮಂಗಳೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಆರಂಭದಲ್ಲಿ ವಿಶ್ವ ವಿದ್ಯಾನಿಲಯದ ಆಂತರಿಕ ಸಂಪನ್ಮೂಲದಿಂದ ರೂ.25 ಲಕ್ಷ ಹಣವನ್ನು ಮೀಸಲಿರಿಸಿ, ಪೀಠದ ಸಮರ್ಪಕ ಹಾಗೂ ರಚನಾತ್ಮಕ ಕೆಲಸಗಳಿಗೆ ಸರಕಾರದಿಂದ 1.50 ಕೋಟಿ ಅನುದಾನವನ್ನು ನಿರೀಕ್ಷಿಸಿತ್ತು. ಅಂತಿಮವಾಗಿ ಸರಕಾರದ ಅನುದಾನ ಬಂದ ಬಳಿಕವಷ್ಟೇ ಅಧ್ಯಯನ ಪೀಠ ಸ್ಥಾಪಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು.

    ಫೆ.20ರಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮತ್ತೆ ಪತ್ರ ಬರೆದು ವಿಶ್ವವಿದ್ಯಾನಿಲಯಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದು, ಅದಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದರು.

    ದಶಕಗಳಿಂದ ಕುಂದಾಪ್ರ ಕನ್ನಡ ಅಕಾಡೆಮಿ ಅಥವಾ ಅಧ್ಯಯನ ಪೀಠಕ್ಕಾಗಿ ವಿವಿಧ ಸಂಘಟನೆಗಳು, ಸಾಹಿತಿಗಳು, ಸಂಶೋಧಕರು, ಸಾಹಿತ್ಯ ಸಮ್ಮೇಳನಗಳ ಠರಾವುಗಳ ಮೂಲಕ ಅಧ್ಯಯನ ಪೀಠ ಅಥವಾ ಅಕಾಡೆಮಿಗಾಗಿ ಮನವಿ ಮಾಡುತ್ತಲೇ ಬಂದಿದ್ದವು. ಅಂತಿಮವಾಗಿ ಮಂಗಳೂರು ವಿವಿ ಅಧ್ಯಯನ ಪೀಠ ಸ್ಥಾಪನೆಯ ನಿರ್ಣಯ ಕೈಗೊಂಡಿತ್ತು. ಕಳೆದ ವರ್ಷ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಹಿಂದಿನ ಸರಕಾರದ ಅವಧಿಯಲ್ಲಿ ಅಧೀವೇಶನಲ್ಲಿ ಅಕಾಡೆಮಿಗಾಗಿ ಹತ್ಕೊತ್ತಾಯವನ್ನು ಮಂಡಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರು ಅಕಾಡೆಮಿ ರಚನೆ ಸಾಧ್ಯವಿಲ್ಲ ಎಂದಿದ್ದರು. ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಕೂಡ ಅಧ್ಯಯನ ಪೀಠಕ್ಕೆ ಅನುದಾನ ದೊರಕಿಸಿಕೊಡುವ ಬಗ್ಗೆ ಪ್ರಯತ್ನಿಸಿದ್ದು, ಕಳೆದ ಅವಧಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಮಾಡಿದ್ದರು. ಈ ಭಾರಿಯೂ ಮತ್ತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಮಾಡಿದ್ದರು. ಸದ್ಯ ಆರ್ಥಿಕ ಇಲಾಖೆಯ ಅನುಮೋದನೆ ದೊರೆತು ಜಿಯೋ ಟ್ಯಾಗಿಂಗ್‌ ಬಾಕಿ ಇದೆ.

    ಕುಂದಾಪುರ ನೆಲದ ಭಾಷೆಯಾಗಿರುವ ಕುಂದಾಪ್ರ ಕನ್ನಡದ ತುಲನಾತ್ಮಕ ಅಧ್ಯಯನದ ಕುಂದಾಪ್ರ ಕನ್ನಡ, ಭಾಷೆಯ ಉಳಿವು, ಪ್ರಸರಣ, ದಾಖಲಾತಿ ದೃಷ್ಟಿಯಿಂದ, ಕುಂದಾಪ್ರ ಕನ್ನಡದಲ್ಲಿ ಸಾಹಿತ್ತಿಕ ಚಟುವಟಿಕೆಗಳು, ಸಂಶೋಧನೆ, ವಿಚಾರ ಸಂಕೀರಣ, ಭಾಷಾ ಬೆಳವಣಿಗೆಗೆ ಪೂರಕ ಕಾರ್ಯಕ್ರಮಗಳು, ಈ ನೆಲದ ಐತಿಹ್ಯವನ್ನು ಬೆಳಕಿಗೆ ತರುವ ಕಾರ್ಯಚಟುವಟಿಕೆಗಳು ಸೇರಿದಂತೆ ಹಲವು ವಿಚಾರಗಳು ಅಧ್ಯಯನ ಪೀಠದ ಮೂಲಕ ನಡೆಯಬೇಕು ಎಂಬುದು ಕುಂದಾಪ್ರ ಕನ್ನಡಿಗರ ಆಶಯವಾಗಿತ್ತು.

    Click here

    Click here

    Click here

    Call us

    Call us

    ನಾಮಕಾವಸ್ಥೆ ಆಗದಿರಲಿ:
    ಬಹುಪಾಲು ಅಧ್ಯಯನ ಪೀಠಗಳು ನಾಮಕಾವಸ್ಥೆಯ ಸಂಸ್ಥೆಗಳಾಗಿವೆ. ಸರಕಾರದಿಂದ ಸಮರ್ಪಕ ಅನುದಾನ ದೊರೆಯದಿರುವುದು, ಜಾತಿ ಹಾಗೂ ಹುದ್ದೆಯ ರಾಜಕಾರಣ, ಹಾಲಿ ಉಪನ್ಯಾಸಕರಿಗೆ ವಹಿಸುವ ಹೆಚ್ಚುವರಿ ಜವಾಬ್ದಾರಿ ಮೊದಲಾದ ಕಾರಣಗಳಿಂದಾಗಿ ಅಧ್ಯಯನ ಪೀಠಗಳು ಸೊರಗಿವೆ. ಆರಂಭಿಕ ನಿಧಿಯ ಜೊತೆಗೆ ಸರಕಾರ ಹೆಚ್ಚಿನ ಅನುದಾನ ಒದಗಿಸುವುದು ಅಗತ್ಯವಿದೆ.

    • ಕುಂದಾಪ್ರ ಕನ್ನಡದ ಅಧ್ಯಯನ ಪೀಠ ಆರಂಭಿಸುವ ಬಗ್ಗೆ ಮಂಗಳೂರು ವಿಶ್ವವಿದ್ಯಾನಿಲಯ ನಿರ್ಧರಿಸಿದಾಗಲಿಂದ ಅದಕ್ಕೆ ಅನುದಾನ ಮಂಜೂರು ಮಾಡಿಸುವ ಬಗ್ಗೆ ಆಸ್ಥೆ ವಹಿಸಿದ್ದೆ. ಹಿಂದಿನ ಮುಖ್ಯಮಂತ್ರಿಗಳು ಹಾಗೂ ಈಗಿನ ಮುಖ್ಯಮಂತ್ರಿಗಳ ಬಳಿಯೂ ಮನವಿ ಮಾಡಲಾಗಿತ್ತು. ಅಂತಿಮವಾಗಿ ಅನುದಾನ ಬಿಡುಗಡೆಗೊಂಡಿದೆ. ಜಿಯೋ ಟ್ಯಾಗಿಂಗ್‌ ಬಳಿಕ ಒಂದು ವಾರದಲ್ಲಿ ಅನುದಾನ ದೊರೆಯುವ ಸಾಧ್ಯತೆ ಇದೆ. – ಕೆ. ಜಯಪ್ರಕಾಶ್‌ ಹೆಗ್ಡೆ, ಅಧ್ಯಕ್ಷರು, ರಾಜ್ಯ ಹಿಂದುಳಿದ ವರ್ಗಗಳ ಆಯೋಗ
    • ಕುಂದಾಪ್ರ ಕನ್ನಡದ ತುಲನಾತ್ಮಕ ಅಧ್ಯಯನ, ಸಂಶೋಧನೆ, ಭಾಷೆಯ ಉಳಿವು, ಪ್ರಸರಣ ಹಾಗೂ ದಾಖಲಾತಿ ದೃಷ್ಟಿಯಿಂದ ಅಧ್ಯಯನ ಪೀಠ ಅಥವಾ ಅಕಾಡೆಮಿಯ ಅಗತ್ಯವಿದೆ ಎಂಬುದನ್ನು ಹಲವು ವರ್ಷಗಳಿಂದ ಮನವರಿಕೆ ಮಾಡುತ್ತಲೇ ಬರಲಾಗಿದೆ. ಅಧ್ಯಯನ ಕೇಂದ್ರಕ್ಕೆ ಅನುದಾನ ಮಂಜುರಾದರೆ ವಿಶ್ವವಿದ್ಯಾಲಯದ ರಚನಾತ್ಮಕ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಿದೆ – ಎ.ವಿ ನಾವಡ, ಹಿರಿಯ ಸಂಶೋಧಕರು
    • ಮಂಗಳೂರು ವಿವಿಯಲ್ಲಿ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಆರಂಭಿಸುವ ಬಗ್ಗೆ ಸಿಂಡಿಕೇಟ್ ಸಭೆಗಳಲ್ಲಿ ಸತತವಾಗಿ ಚರ್ಚೆಯಾಗಿದೆ. ಅಂತಿಮವಾಗಿ ಸರಕಾರದ ಅನುದಾನ ಬಂದ ಬಳಿಕವೇ ಪೀಠ ಸ್ಥಾಪಿಸುವ ಬಗ್ಗೆ ನಿರ್ಧಾರವಾಗಿತ್ತು. ಪೀಠವನ್ನು ಕುಂದಾಪ್ರ ಕನ್ನಡ ಭಾಷಿಕರೇ ಹೆಚ್ಚಿರುವ ಭಾಗದ ಯಾವುದಾದರೂ ಸರಕಾರಿ ಅಥವಾ ಅನುದಾನಿತ ಕಾಲೇಜಿನಲ್ಲಿ ಆರಂಭಿಸಬೇಕು ಎಂಬುದು ನನ್ನ ಅಭಿಪ್ರಾಯವಾಗಿತ್ತು. ಆದರೆ ಅಧ್ಯಯನ ಕೇಂದ್ರದ ಕಾರ್ಯಚಟುವಟಿಕೆಗಳನ್ನು ಮುಂದುವರಿಸಲು ಸ್ನಾತಕೋತ್ತರ ವಿಭಾಗದ ನುರಿತ ಪ್ರಾಧ್ಯಾಪಕರು ಬೇಕಾಗಿರುವುದರಿಂದ ವಿವಿಯಲ್ಲಿಯೇ ಆರಂಭಿಸುವುದು ಸೂಕ್ತ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಗಿತ್ತು. ಇದೀಗ ಅಧ್ಯಯನ ಕೇಂದ್ರಕ್ಕೆ ಅನುದಾನ ಮಂಜೂರಾಗಿರುವುದು ಖುಷಿ ನೀಡಿದೆ. – ಪ್ರೋ. ಕರುಣಾಕರ ಎ. ಕೋಟೆಗಾರ್, ನಿಕಟಪೂರ್ವ ಸಿಂಡಿಕೇಟ್ ಸದಸ್ಯರು, ಮಂಗಳೂರು ವಿವಿ
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.