Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ ಪರಂಪರೆಗೆ ಗಂಗೊಳ್ಳಿಯು ಎರಡು ಯತಿಗಳನ್ನು ನೀಡಿದೆ: ಪರ್ತಗಾಳಿ ಶ್ರೀ
    ಊರ್ಮನೆ ಸಮಾಚಾರ

    ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ ಪರಂಪರೆಗೆ ಗಂಗೊಳ್ಳಿಯು ಎರಡು ಯತಿಗಳನ್ನು ನೀಡಿದೆ: ಪರ್ತಗಾಳಿ ಶ್ರೀ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ:
    ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಮುಖ್ಯವಾಗಿ ಉಪಕಾರ ಮಾಡುವ ಸಮಾಜವೇ ವಿನಹ: ಅಪಕಾರ ಮಾಡುವ ಸಮಾಜವಲ್ಲ. ಜನರ ಒಳಿತನ್ನೇ ಬಯಸುತ್ತದೆ ವಿನಹ: ಕೆಟ್ಟ ಚಿಂತನೆ ಮಾಡುದಿಲ್ಲ ಎಂಬುದನ್ನು ನಾರಾಯಣ ಮಲ್ಯರು ಮೂರ್ತಿ ಪ್ರತಿಷ್ಠಾಪನೆ ಮೂಲಕ ತೋರಿಸಿಕೊಟ್ಟಿದ್ದಾರೆ. ಪಂಚ ನದಿಗಳ ಸಂಗಮವಾಗುವ ಪವಿತ್ರವಾದ ಗಂಗೊಳ್ಳಿಯು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ ಪರಂಪರೆಗೆ ಎರಡು ಯತಿಗಳನ್ನು ನೀಡಿದ ಶ್ರೇಷ್ಠ ಕ್ಷೇತ್ರವಾಗಿದೆ ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿ ಹೇಳಿದರು.

    Click Here

    Call us

    Click Here

    ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವದ ನಿಮಿತ್ತ ಮೊಕ್ಕಾಂಗೆ ದೇವಸ್ಥಾನಕ್ಕೆ ಆಗಮಿಸಿದ ಶ್ರೀಗಳು ಆಶೀರ್ವಚನ ನೀಡಿ ಮಾತನಾಡಿದರು.

    ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ ಪ್ರಾರಂಭಗೊಂಡು ಮುಂದಿನ ವರ್ಷ 550 ಪೂರ್ಣಗೊಳ್ಳುತ್ತಿದೆ. ಇದರ ಉದ್ದೇಶಕ್ಕಾಗಿ ಮತ್ತು ಮಠದ ಮೂಲ ಶ್ರೀ ರಾಮ ದೇವರ ಪ್ರೀತ್ಯರ್ಥ 550 ದಿನಗಳ 550 ಕೋಟಿ ರಾಮತಾರಕ ಮಂತ್ರ ಜಪ ಅಭಿಯಾನ ಪ್ರಾರಂಭಿಸುವ ಸಂಕಲ್ಪ ಮಾಡಲಾಗಿದ್ದು, ಈ ಪುಣ್ಯ ಸ್ಥಳದಲ್ಲಿ ಈ ಅಭಿಯಾನದ ಉದ್ಘೋಷ ಮಾಡುತ್ತಿದ್ದೇವೆ. ಈ ಅಭಿಯಾನ ಎ.17ರಿಂದ ಪ್ರಾರಂಭಗೊಂಡು 2025ರ ಅ.18ರ ಪರ್ಯಂತ 550 ದಿನಗಳ ಕಾಲ ಈ ಅಭಿಯಾನ ಪ್ರಚಲಿತದಲ್ಲಿರುತ್ತದೆ. 550 ದಿನ, 550 ಕೋಟಿ, 550 ವರ್ಷಗಳ ಮಹೋತ್ಸವನ್ನು ಪರ್ತಗಾಳಿಯ ಮಠದಲ್ಲಿ ಮುಂದಿನ ವರ್ಷ ಸಮಾಜ ಬಾಂಧವರೊಂದಿಗೆ ಸೇರಿಕೊಂಡು ಆಚರಿಸಲು ಸಂಕಲ್ಪ ಮಾಡಲಾಗಿದೆ ಎಂದು ಹೇಳಿದರು.

    ದೇವಳದ ಆಡಳಿತ ಮಂಡಳಿ ಸದಸ್ಯ ಜಿ. ವೇದವ್ಯಾಸ ಕೆ. ಆಚಾರ್ಯ ಮತ್ತು ಜಿ.ವೆಂಕಟೇಶ ನಾಯಕ್ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ, ತಾಂತ್ರಿಕ ಜಿ. ವಸಂತ ಭಟ್, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಊರಿನ ಹತ್ತು ಸಮಸ್ತರು, ಸಮಾಜ ಬಾಂಧವರು ಉಪಸ್ಥಿತರಿದ್ದರು.

    ದೇವಸ್ಥಾನದ ಆಡಳಿತ ಮೊಕ್ತೇಸರ ಎನ್. ಸದಾಶಿವ ನಾಯಕ್ ಸ್ವಾಗತಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ

    06/07/2026

    ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    06/07/2026

    ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು

    06/07/2026
    Leave A Reply Cancel Reply

    8 + fourteen =

    Call us

    Click Here

    Call us

    Call us

    Call us
    Highest Viewed Recently
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.