Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೇಂದ್ರ ಸರಕಾರದ ಐತಿಹಾಸಿಕ ಕಾರ್ಯಕ್ರಮಗಳೇ ಗೆಲುವಿಗೆ ಶ್ರೀರಕ್ಷೆ: ಬಿ.ವೈ. ರಾಘವೇಂದ್ರ
    ಊರ್ಮನೆ ಸಮಾಚಾರ

    ಕೇಂದ್ರ ಸರಕಾರದ ಐತಿಹಾಸಿಕ ಕಾರ್ಯಕ್ರಮಗಳೇ ಗೆಲುವಿಗೆ ಶ್ರೀರಕ್ಷೆ: ಬಿ.ವೈ. ರಾಘವೇಂದ್ರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಭಾರತವನ್ನು ವಿಶ್ವಗುರುವನ್ನಾಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಚುನಾವಣೆ ಇದಾಗಿದೆ. ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಯಾಗಿದೆ. ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮೋದಿಯವರಿಗೆ ಪಟ್ಟಾಭಿಷೇಕ ಮಾಡಬೇಕು ಎಂದು ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು.

    Click Here

    Call us

    Click Here

    ಅವರು ಲೋಕಸಭಾ ಚುನಾವಣೆ ಅಂಗವಾಗಿ ನಾಗೂರು ಗ್ರಾಮದ ಲಲಿತಾ ಕೃಷ್ಣ ಸಭಾಭವನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಕಂಬದಕೋಣೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲ ಏರ್ಪಡಿಸಿದ್ದ “ಬೂತ್ ಮಟ್ಟದ ಕಾರ್ಯಕರ್ತರ” ಸಮಾವೇಶದಲ್ಲಿ ಪಾಲ್ಗೊಂಡು ಸಭಾ ಕಾರ್ಯಕ್ರಮ ಉದ್ಘಾಟಿಸಿ

    ದೇಶ, ಕರ್ನಾಟಕ, ಕ್ಷೇತ್ರದ ರೈತರು, ಬಡವರು, ಮಹಿಳೆಯರು ಸಹಿತ ಎಲ್ಲರೂ ಸ್ವಾಭಿಮಾನದಿಂದ ಬದುಕಬೇಕಾದರೆ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ 60 ವರ್ಷಕ್ಕೂ ಹೆಚ್ಚು ಕಾಲ ಈ ದೇಶವನ್ನು ಆಳಿದ್ದರೂ ಬಡವರನ್ನು ಅಭಿವೃದ್ಧಿ ಮಾಡಿಲ್ಲ. ಬಡವರು ಬಡವರಾಗಿಯೇ ಇರುವಂತೆ ನೋಡಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು 10 ವರ್ಷಗಳಲ್ಲಿ ಅದೆಷ್ಟೋ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ದೇಶ, ರಾಜ್ಯ, ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಿದ್ದಾರೆ. ವಿವಿಧ ವಿಶ್ವವಿದ್ಯಾಲಯು, ಕೇಂದ್ರೀಯ ವಿದ್ಯಾಲಯ ಸೇರಿದಂತೆ ಅನೇಕ ಕೊಡುಗೆಯನ್ನು ಶಿವಮೊಗ್ಗ ಕ್ಷೇತ್ರಕ್ಕೂ ನೀಡಿದ್ದಾರೆ ಎಂದರು.

    ಸದಾ ನಿಮ್ಮ ಸೇವೆಯಲ್ಲಿ:
    ಕಳೆದ ಚುನಾವಣೆಯಲ್ಲಿ ಅತ್ಯಧಿಕ ಮತ ನೀಡಿದ್ದೀರಿ. ಈ ಬಾರಿಯೂ ಅದಕ್ಕಿಂತ ಹೆಚ್ಚು ಮತ ನೀಡುವ ವಿಶ್ವಾಸವೂ ಇದೆ. ಜೀವನ ಪೂರ್ತಿ ನಿಮ್ಮ ಸೇವೆ ಮಾಡಿದರೂ ಋಣ ತೀರಿಸಲು ಸಾಧ್ಯವಿಲ್ಲ. ಮತದಾರರ ಮೌಲ್ಯವನ್ನು ಉಳಿಸಿಕೊಂಡು ಅಭಿವೃದ್ಧಿ ಕಾರ್ಯದಲ್ಲಿ ಮುನ್ನೆಡೆಯುತ್ತೇವೆ ಎಂದರು.

    ಜನರ ಬದುಕು ಕಸಿದ ಕಾಂಗ್ರೆಸ್:
    ಕಾಂಗ್ರೆಸ್ ಸರಕಾರ ಜನರ ಬದುಕಿಗೆ ಮಾರಕವಾಗಿದೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಹಾಲಿಗೆ 5 ರೂ. ಪ್ರೋತ್ಸಾಹಧನ ಘೋಷಣೆ ಮಾಡಿದ್ದರು. ರಾಜ್ಯದಲ್ಲಿ ರೈತರು ಬರಗಾಲ ಎದುರಿಸುತ್ತಿದ್ದರೂ ಕಳೆದ 6 ತಿಂಗಳಿಂದ ಹಾಲಿನ ಪ್ರೋತ್ಸಾಹಧನ ನೀಡಿಲ್ಲ. 650 ಕೋ.ರೂ. ನೀಡಲು ಬಾಕಿಯಿದೆ. ಪ್ರಧಾನ ನರೇಂದ್ರ ಮೋದಿಯವರು ಕೃಷಿ ಸಮ್ಮಾನ ಅಡಿಯಲ್ಲಿ ವಾರ್ಷಿಕ 6 ಸಾವಿರ ರೂ.ಗಳನ್ನು ರೈತರಿಗೆ ನೀಡುತ್ತಿದ್ದು, ಅದಕ್ಕೆ ಬಿ.ಎಸ್.ಯಡಿಯೂಪ್ಪ ಅವರು ಸಿಎಂ ಆಗಿದ್ದಾಗ 4 ಸಾವಿರ ಸೇರಿಸಿ ಕೊಡುತ್ತಿದ್ದರು. ಅದನ್ನು ಈಗ ಕಾಂಗ್ರೆಸ್ ಸರಕಾರ ನಿಲ್ಲಿಸಿಬಿಟ್ಟಿದೆ. ಒಟ್ಟಾರೆಯಾಗಿ ಕಾಂಗ್ರೆಸ್ ಸರಕಾರ ಜನರ ಬದುಕಿಗೆ ಮಾರಕವಾಗಿದೆ ಎಂದರು.

    Click here

    Click here

    Click here

    Call us

    Call us

    298 ಕೋಟಿ ರೂ. ಕಾಮಗಾರಿ:
    ಶಿವಮೊಗ್ಗ ಕ್ಷೇತ್ರದ ಕಂಬದಕೋಣೆ ಜಿ.ಪಂ. ವ್ಯಾಪ್ತಿಯಲ್ಲಿ ಸುಮಾರು 298 ಕೋ.ರೂ. ಕಾಮಗಾರಿಯಾಗಿದೆ. ಗ್ರಾಮೀಣ ರಸ್ತೆಗೆ 40 ಕೋ.ರೂ., ಕಿಂಡಿ ಅಣೆಕಟ್ಟಿಗೆ 11 ಕೋ.ರೂ., ಬಂದರಿಗೆ 212 ಕೋ.ರೂ., ಶಾಲಾ ಕಾಲೇಜು ಅಭಿವೃದ್ಧಿಗೆ 2.78 ಕೋ.ರೂ., ಕೆರೆ ಅಭಿವೃದ್ಧಿಗೆ 1.10 ಕೋ.ರೂ., ನದಿ ದಂಡೆ ಸಂಕ್ಷಣೆಗೆ 5.72 ಕೋ.ರೂ ನೀಡಲಾಗಿದೆ. ವಿವಿಧ ಸಮುದಾಯ ಭವನ, ದೇವಸ್ಥಾನಗಳ ಅಭಿವೃದ್ಧಿಗೆ 25 ಕೋ.ರೂ. ಒದಗಿಸಲಾಗಿದೆ. ಹೀಗೆ ಮುಂದೆಯೂ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯಲಿದೆ ಎಂದರು.

    ಈ ವೇಳೆ ಶಾಸಕರಾದ ಗುರುರಾಜ್ ಗಂಟಿಹೊಳೆ, ಮಂಡಲದ ಅಧ್ಯಕ್ಷ ದೀಪಕ್ ಶೆಟ್ಟಿ, ಪ್ರಮುಖರಾದ ಸದಾನಂದ ಉಪ್ಪಿನಕುದ್ರು, ಕಿರಿಮಂಜೇಶ್ವರ ಪಂಚಾಯತ್ ಅಧ್ಯಕ್ಷ ಶೇಖರ ಖಾರ್ವಿ, ಶಿವರಾಜ ಪೂಜಾರಿ, ಅಶೋಕ್ ಮೂರ್ತಿ, ಪ್ರಿಯದರ್ಶಿನಿ ಬೆಸ್ಕೂರು, ಉಮೇಶ್ ಶೆಟ್ಟಿ ಕಲ್ಗದ್ದೆ, ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು. ಕಾರ್ಯದರ್ಶಿ ಮಹೇಂದ್ರ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.