Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿಂದೆ ಜಾರಿಗೊಳಿಸಿದ್ದ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಲು ಅವಕಾಶ ಕೊಡಿ: ಕೆ. ಜಯಪ್ರಕಾಶ್ ಹೆಗ್ಡೆ
    ಉಡುಪಿ ಜಿಲ್ಲೆ

    ಹಿಂದೆ ಜಾರಿಗೊಳಿಸಿದ್ದ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಲು ಅವಕಾಶ ಕೊಡಿ: ಕೆ. ಜಯಪ್ರಕಾಶ್ ಹೆಗ್ಡೆ

    Updated:04/04/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಹಿಂದೆ ಕೇವಲ 20 ತಿಂಗಳ ಕಾಲ ಸಂಸದನಾಗಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪೂರ್ಣಗೊಳಿಸುವುದರೊಂದಿಗೆ ಈ ಬಾರಿಯ ಚುನಾವಣೆಯಲ್ಲಿ ಒಂದು ಅವಕಾಶವನ್ನು ನೀಡಿ. ಮನೆ ಮನೆಗೆ ಭೇಟಿ ನೀಡಿ ಮತ ಕೇಳುವ ವೇಳೆ ಅಭಿವೃದ್ಧಿ ಮತ್ತು ಸಿದ್ದರಾಮಯ್ಯ ನೇತೃತ್ವದ ಉತ್ತಮ ಕಾರ್ಯಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡುವಂತೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ ಹೆಗ್ಡೆ ಪಕ್ಷ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

    Click Here

    Call us

    Click Here

    ಅವರು ಬುಧವಾರ ನಾಮಪತ್ರ ಸಲ್ಲಿಕೆಗೂ ಮುನ್ನ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ನಡೆದ ಪಕ್ಷ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.

    ಕಳೆದ ಬಾರಿ ಸಂಸದನಾಗಿ 20 ತಿಂಗಳುಗಳ ಕಾಲ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ ತೃಪ್ತಿ ನನಗಿದೆ. ಆಸ್ಕರ್ ಫೆರ್ನಾಂಡಿಸ್ ಭೂ ಸಾರಿಗೆ ಸಚಿವರಾಗಿದ್ದ ವೇಳೆ ಮಲ್ಪೆ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ, ಕಡೂರು, ಚಿಕ್ಕಮಗಳೂರು, ಮೂಡಿಗೆರೆ ಬಿಸಿರೋಡ್ ರಾಷ್ಟ್ರೀಯ ಹೆದ್ದಾರಿ, ತುಮಕೂರಿನಿಂದ ಶಿವಮೊಗ್ಗಕ್ಕೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಅನುಮೋದನೆ ಆಗಿತ್ತು. ಅನುಮೋದನೆ ಆಗಿ 10 ವರ್ಷಗಳು ಪೂರ್ಣಗೊಂಡರೂ ಇಂದಿಗೂ ಅದು ಪೂರ್ಣಗೊಂಡಿಲ್ಲ. ಈ ಹಿಂದೆ ನನಗೆ ಅವಕಾಶ ಸಿಕ್ಕಾಗ ಅನುಮೋದನೆ ಪಡೆದುಕೊಳ್ಳುವಲ್ಲಿ ಸಫಲನಾಗಿದ್ದು ಮತ್ತೆ 5 ವರ್ಷ ಅವಕಾಶ ಕೊಟ್ಟಿದ್ದಿದ್ದರೆ ರಸ್ತೆ ಕಾಮಗಾರಿ ಪೂರ್ಣಗೊಳ್ಳುತ್ತಿತ್ತು ಎಂದರು.

    ಕರಾವಳಿಯ ಮೀನುಗಾರರ ಸಮಸ್ಯೆಗಳ ಬಗ್ಗೆ ಅಂದು ಮಂತ್ರಿಯಾಗಿದ್ದಾಗ ಸ್ಪಂದಿಸುವ ಕೆಲಸ ಮಾಡಿದ್ದೆ. ಮಲೆನಾಡಿನ ಅಡಿಕೆ ಧಾರಣೆ 10000 ರೂ ಗಳಿಂದ 90000 ಕ್ಕೆ ಏರಿಸುವ ಪ್ರಯತ್ನವನ್ನು ಮಾಡಿ ಸಫಲನಾಗಿದ್ದೆ. ಕಾಫಿ ಬೆಳೆಗಾರರಿಗೆ ವಿಧರ್ಭ ಪ್ಯಾಕೇಜ್ ಮೂಲಕ ಪರಿಹಾರ ನೀಡುವ ಕೆಲಸ ನನ್ನ 20 ತಿಂಗಳ ಸಂಸದ ಅವಧಿಯಲ್ಲಿ ಮಾಡಿದ್ದೆ ಎಂದರು.

    ರಾಜ್ಯ ಸರಕಾರ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿದರೆ ಸರಕಾರ ದಿವಾಳಿಯಾಗುತ್ತದೆ ಎಂದು ವಿರೋಧ ಪಕ್ಷದವರು ಗೊಂದಲ ಸೃಷ್ಟಿಸಿದರು. ದೊಡ್ಡ ಉದ್ದಿಮೆಯವರಿಗೆ 11 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದಾಗ ಯಾಕೆ ಸರ್ಕಾರ ದಿವಾಳಿಯಾಗಿಲ್ಲ ಆದರೆ ಬಡವರಿಗೆ 4000 – 5000 ನೀಡಿದರೆ ಸರ್ಕಾರ ದಿವಾಳಿಯಾಗುತ್ತದೆ ಎಂಬ ವಾದ ಬಿಜೆಪಿಯವರದ್ದಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಹಸಿದ ಹೊಟ್ಟೆಗೆ ಅನ್ನವನ್ನು ನೀಡುವ ಕೆಲಸ ಮಾಡುತ್ತಿದೆ ವಿನಹ ಮೋಜು ಮಸ್ತಿಗೆ ಉಪಯೋಗಿಸುತ್ತಿಲ್ಲ ಎಂದರು.

    Click here

    Click here

    Click here

    Call us

    Call us

    ತಮಗೆ ಅವಕಾಶ ನೀಡಿದರೇ ಕರಾವಳಿಯ ಮೀನುಗಾರರ ಸಮಸ್ಯೆ, ಹೆದ್ದಾರಿ ಸಮಸ್ಯೆ, ಮಲೆನಾಡು – ಬಯಲುಸೀಮೆಯ ಅಡಿಕೆ – ಕಾಫಿ ಬೆಳೆಗಾರರ ಸಮಸ್ಯೆಗೆ ಪರಿಹಾರದಂತಹ ಕೆಲಸ ಕಾರ್ಯ ಮಾಡಲು ಸಹಕಾರಿಯಾಗಲಿದೆ. ಪ್ರವಾಸೋದ್ಯಮ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ಎಂಜಿನಿಯರಿಂಗ್, ಮೆಡಿಕಲ್ ಕಾಲೇಜು ಸ್ಥಾಪನೆ ಸಾಧ್ಯವಾಗಲಿದೆ ಎಂದರು.

    ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಉಸ್ತುವಾರಿ, ಇಂಧನ ಸಚಿವ ಕೆ. ಜೆ. ಜಾರ್ಜ್ , ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಚಿಕ್ಕಮಗಳೂರು ಜಿಲ್ಲೆಯ ಶಾಸಕರಾದ ರಾಜೇಶಗೌಡ, ಜಿ.ಎಚ್. ಶ್ರೀನಿವಾಸ್, ಎಚ್.ಡಿ.ತಮ್ಮಯ್ಯ ಮತ್ತು ನಯನ ಮೋಟಮ್ಮ, ಮಾಜಿ ಸಚಿವೆ ಮೋಟಮ್ಮ, ಮಾಜಿ ಶಾಸಕಿ ಗಾಯತ್ರಿ ಶಾಂತೇಗೌಡ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಬಿ ಎಂ ಸುಕುಮಾರ್ ಶೆಟ್ಟಿ, ನಾಯಕರಾದ ಅಶೋಕ್ ಕುಮಾರ್ ಕೊಡವೂರು, ಎಂ.ಎ.ಗಫೂರ್, ಮುನಿಯಾಲು ಉದಯಕುಮಾರ್ ಶೆಟ್ಟಿ, ಡಾ. ಅಂಶುಮಂತ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ದಿನೇಶ್ ಹೆಗ್ಡೆ ಮೊಳಹಳ್ಳಿ ಹಾಗೂ ಇತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025

    ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    18/12/2025

    ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.