Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹಾಲಿಂಗೇಶ್ವರ ಗೆಳೆಯರ ಬಳಗದ ದಶಮ ಸಂಭ್ರಮ ಸಮ್ಮಿಲನ
    ಊರ್ಮನೆ ಸಮಾಚಾರ

    ಮಹಾಲಿಂಗೇಶ್ವರ ಗೆಳೆಯರ ಬಳಗದ ದಶಮ ಸಂಭ್ರಮ ಸಮ್ಮಿಲನ

    No Comments
    Facebook Twitter Pinterest LinkedIn WhatsApp Reddit Tumblr Email
    ???????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಮನೆ, ಮಠ, ದೇಗುಲ, ಆಚಾರ-ವಿಚಾರ, ಸಂಬಂಧ ಎಂಬಿತ್ಯಾದಿಗಳು ಬೇರೆ ಯಾವುದೇ ರಾಷ್ಟ್ರಗಳಲ್ಲಿಲ್ಲ. ಇನ್ನೊಬ್ಬರಿಗಾಗಿ ಬದುಕುವ ಪರೋಪಕಾರದ ಜೀವನ ನಮ್ಮ ಸಂಸ್ಕಾರ. ಪ್ರತಿಯೊಂದರಲ್ಲಿಯೂ ತಾಯ್ತನ ಕಾಣುವುದು ನಮ್ಮ ದೇಶದ ವಿಶೇಷತೆಯಾಗಿದೆ ಎಂದು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪದ್ಮನಾಭ ಮೆರ್ಟ ಹೇಳಿದರು.

    Click Here

    Call us

    Click Here

    ಗುಡೇ ಮಹಾಲಿಂಗೇಶ್ವರ ಗೆಳೆಯರ ಬಳಗದ ದಶಮ ಸಂಭ್ರಮ ಸಮ್ಮಿಲನ-2024 ಉದ್ಘಾಟಿಸಿ ಮಾತನಾಡಿದರು. ವ್ಯಕ್ತಿಯೊಬ್ಬರ ಪ್ರತಿಭೆ, ಸಾಮರ್ಥ್ಯ ತೋರ್ಪಡಿಸಲು ವೇದಿಕೆ ಅಗತ್ಯವಾಗಿದ್ದು. ಸಂಘ ಸಂಸ್ಥೆಗಳ ಮೂಲಕ ಈ ವೇದಿಕೆ ಲಭ್ಯವಾಗುತ್ತದೆ. ಗೆಳೆಯರ ಬಳಗವು ಹಲವು ಮಂದಿಯ ಸಾಧನೆಗೆ ವೇದಿಕೆ ಕಲ್ಪಿಸಿದ ಹೆಗ್ಗಳಿಕೆ ಹೊಂದಿದೆ. ಯುವಕರು ದೇಶದ ಅಮೂಲ್ಯ ಸಂಪತ್ತು, ಸುಸಂಸ್ಕೃತ ಸಮಾಜವನ್ನು ಕಟ್ಟುವ ಕಾರ್ಯದಲ್ಲಿ ಯುವ ಜನತೆ ಮನಸು ಮಾಡಬೇಕು. ಸ್ವ-ಅಭಿವೃದ್ಧಿಯ ಜತೆಗೆ ಸಮಾಜದ ಅಭಿವೃದ್ಧಿ ಕಡೆಗೆ ಸದಾ ಚಿಂತನಾಶೀಲರಾಗಬೇಕು ಎಂದರು.

    ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಎಚ್. ಜಯಶೀಲ ಎನ್. ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಜೀವರಕ್ಷಕ ಈಶ್ವರ ಮಲ್ಪೆ ಇವರಿಗೆ ‘ಶಿವಶ್ರೀ’ ಪ್ರಶಸ್ತಿ ಪ್ರಧಾನಿಸಲಾಯಿತು. ಅರ್ಹ ಫಲಾನುಭವಿಗಳಿಗೆ ವಿದ್ಯಾರ್ಥಿ ವೇತನ, ಅಶಕ್ತರಿಗೆ ವೈದ್ಯಕೀಯ ನೆರವು ವಿತರಿಸಲಾಯಿತು. ಉದ್ಯಮಿಗಳಾದ ಎಚ್. ವಿಜಯ್ ಶೆಟ್ಟಿ, ವಾಜುರಾಜ ಶೆಟ್ಟಿ, ಕಿರಣ್ ಶೆಟ್ಟಿ, ಪ್ರಗತಿಪರ ಕೃಷಿಕ ಗೋವಿಂದ ಗಾಣಿಗ, ನಾಗರಾಜ ಮೆರ್ಟ, ಭಜನಾ ಮಂಡಳಿ ಅಧ್ಯಕ್ಷ ಶ್ರೀನಾಥ ಮೆರ್ಟ, ಗೆಳೆಯರ ಬಳಗದ ಸ್ಥಾಪಕಾಧ್ಯಕ್ಷ ಮಹೇಂದ್ರ ಪೂಜಾರಿ ಇದ್ದರು. ಶಿಕ್ಷಕ ಶ್ರೀಧರ ಗಾಣಿಗ ಸ್ವಾಗತಿಸಿ, ಸುರೇಶ ಮೆಟ್ಟಿನಹೊಳೆ ಪ್ರಾಸ್ತಾವಿಸಿದರು. ಮಂಜುನಾಥ ಹಿಲಿಯಾಣ ನಿರೂಪಿಸಿದರು.

    ಸಾಂಸ್ಕೃತಿಕ ಸಮ್ಮಿಲನದ ಪ್ರಯುಕ್ತ ಸಾಸ್ತಾನದ ಡ್ಯಾನ್ಸ್ ಸ್ಟಡಿಯೋ ತಂಡದವರಿಂದ ಸನಾತನ ವೈಭವ ಪ್ರಸ್ತುತಿಯ ನಾಟ್ಯವೈಭವ ಹಾಗೂ ಇನಿ ದನಿ ಕಾರ್ಯಕ್ರಮ ಪ್ರಸ್ತುತಗೊಂಡಿತು. ನಂತರ ಉಡುಪಿಯ ಅಭಿನಯ ಕಲಾವಿದರಿಂದ ಶಾಂಭವಿ ನಾಟಕ ಪ್ರದರ್ಶನಗೊಂಡಿತು. ಬೆಳಿಗ್ಗೆ ದೇವರ ಸನ್ನಿಧಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಶತರುದ್ರಾಭಿಷೇಕ ನಡೆಯಿತು. ಮಧ್ಯಾಹ್ಮ ಮಹಾಅನ್ನಸಂತರ್ಪಣೆ ಜರುಗಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    1 × four =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.