ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಮೆಮೋರಿಯಲ್ ಟ್ರಸ್ಟ್ (ರಿ) ಶಂಕರನಾರಾಯಣ ಪ್ರವರ್ತಿತ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಗೆ ಸುದೀರ್ಘ 25ವರ್ಷಗಳ ಸೇವಾನುಭವ ಹೊಂದಿರುವ ರವಿದಾಸ್ ಶೆಟ್ಟಿ ನೂತನ ಮುಖ್ಯಶಿಕ್ಷಕರಾಗಿ ನೇಮಕಗೊಂಡಿರುತ್ತಾರೆ
ರವಿದಾಸ್ ಶೆಟ್ಟಿ ಅವರು ಎಂಎ, ಎಂಇಡ್ ಪದವೀಧರರಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಹಲವು ಪ್ರಶಸ್ತಿಯೊಂದಿಗೆ (ಜಿಲ್ಲಾಮಟ್ಟದ ಉತ್ತಮಶಿಕ್ಷಕ ಪ್ರಶಸ್ತಿ ಕಾರವಾರ ಮತ್ತು ಉಡುಪಿ ಜಿಲ್ಲೆ, ಜಿಲ್ಲಾ ಆದರ್ಶ ಶಿಕ್ಷಕ, ಸಾಧಕ ಪ್ರಶಸ್ತಿ, ಜೆಸಿಐ ಉಪ್ಪುಂದ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಶುಭದಾ ಶಾಲೆಗಳು ಹಾಗೂ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇರಳ) ಆಯ್ಕೆಯಾದ ನೂತನ ಮುಖ್ಯ ಶಿಕ್ಷಕರಿಗೆ ಸಂಸ್ಥೆಯ ಆಡಳಿತಮಂಡಳಿ, ಬೋಧಕ ಮತ್ತು ಬೋಧಕೇತರ ವೃಂದ ಪಾಲಕರು ಶುಭಕೋರಿರುತ್ತಾರೆ