Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಾತೀಯತೆ, ಕುಟುಂಬ ರಾಜಕಾರಣದ ವಿರುದ್ಧ ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧೆ: ಕೆ.ಎಸ್. ಈಶ್ವರಪ್ಪ
    ಊರ್ಮನೆ ಸಮಾಚಾರ

    ಜಾತೀಯತೆ, ಕುಟುಂಬ ರಾಜಕಾರಣದ ವಿರುದ್ಧ ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧೆ: ಕೆ.ಎಸ್. ಈಶ್ವರಪ್ಪ

    Updated:24/04/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ನರೇಂದ್ರ ಮೋದಿಯವರು ವಿಶ್ವವೇ ಪುರಸ್ಕರಿಸುವ ನಾಯಕ. ಅಂತರಾಷ್ಟ್ರೀಯ ಸಂಬಂಧ, ರಾಷ್ಟ್ರದ ಭದ್ರತೆ, ಹಿಂದೂ ಧರ್ಮದ ಉಳಿವು ಇವೆಲ್ಲದಕ್ಕೂ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಪ್ರಧಾನಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನೂ ಕೂಡ ಗೆದ್ದು ಅವರು ಪ್ರಧಾನಿಯಾಗಲು ಬೆಂಬಲಿಸುವುದುದೇ ನನ್ನ ಗುರಿಯಾಗಿದೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು.

    Click Here

    Call us

    Click Here

    ಅವರು ಗುರುವಾರ ಉಪ್ಪಂದದ ದೇವಕಿ ಬಿ.ಆರ್. ಸಭಾಂಗಣದಲ್ಲಿ ಜರುಗಿದ ರಾಷ್ಟ್ರಭಕ್ತ ಬಳಗದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ ಕಾಂಗ್ರೆಸ್ ಸೋಲಿಸುವುದು, ಮೋದಿ ಪ್ರಧಾನಿಯಾಗುವುದು ಹಾಗೂ ಬಿಜೆಪಿಯ ಹೊಂದಾಣಿಕೆ ರಾಜಕಾರಣಕ್ಕೆ ಕೊನೆ ಹಾಡಲು ಕಾರ್ಯಕರ್ತರ ನಮ್ಮ ಜೊತೆಗೆ ಬಂದಿದ್ದಾರೆ. ಜಾತೀಯತೆ, ಕುಟುಂಬ ರಾಜಕಾರಣ, ಬಿಜೆಪಿಯ ಹಿರಿಯ ಕಿರಿಯ ಕಾರ್ಯಕರ್ತರ ನೋವು ಈ ಎಲ್ಲದಕ್ಕೂ ಒಂದು ಪರಿಹಾರ ಕಂಡುಕೊಳ್ಳಲು ಚುನಾವಣೆ ಎದುರಿಸುತ್ತಿದ್ದೇನೆ. ರಾಷ್ಟ್ರಭಕ್ತ ಬಳಗ ಸಂಘಟನೆಗೆ ದಿನದಿಂದ ದಿನಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದರು.

    ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಮಾತನಾಡಿ ರಾಜ್ಯದಲ್ಲಿ ಈಶ್ವರಪ್ಪನವರ ಬಗ್ಗೆ ಅನುಕಂಪದ ಅಲೆ ಎದ್ದಿದೆ. ಹಿಂದೂ ಕಾರ್ಯಕರ್ತರು ಅವರ ಪರವಾಗಿ ನಿಂತಿದ್ದಾರೆ. ಎಲ್ಲಾ ಸಮಾಜವನ್ನು ಗೌರವಿಸುತ್ತಾ ಬಂದಿರುವ ಈಶ್ವರಪ್ಪನವರಿಗೆ ಅನ್ಯಾಯವಾಗಿರುವುದು ಬೇಸರ ತರಿಸಿದೆ. ಈ ಭಾರಿಯ ಚುನಾವಣೆಯಲ್ಲಿ ಅವರಿಗೆ ದೊರೆಯುತ್ತಿರುವ ಬೆಂಬಲ ನೋಡಿದರೆ ಗೆಲುವು ಸುಲಭವಾಗಿ ದೊರೆಯುವ ವಿಶ್ವಾಸವಿದೆ ಎಂದರು.

    ತಾಲೂಕು ಪಂಚಾಯತ್ ಮಾಜಿ ಸದಸ್ಯ ನಾರಾಯಣ ಗುಜ್ಜಾಡಿ, ಹಿಂದೂ ಜಾಗರಣೆಯ ಅಧ್ಯಕ್ಷ ಯಶವಂತ ಗಂಗೊಳ್ಳಿ, ಉಪ್ಪುಂದ ಗ್ರಾ.ಪಂ ಮಾಜಿ ಸದಸ್ಯ ರಾಜು ದೇವಾಡಿಗ ಕಂಚಿಕಾನ್, ರಾಷ್ಟ್ರಭಕ್ತರ ಬಳಗ ಬೈಂದೂರು ಮುಖಂಡರಾದ ಮಂಜುನಾಥ ರಾವ್ ಬೈಂದೂರು, ಗಣೇಶ್ ರಾವ್ ಬೈಂದೂರು, ರೇಣುಕಾ, ಚಂದ್ರಯ್ಯ ಆಚಾರ್ಯ, ವಿಷ್ಣು, ವಿನಯ್ ನಾಯರಿ ನಾವುಂದ ಇನ್ನಿತರರು ಉಪಸ್ಥಿತರಿದ್ದರು.

    ಶ್ರೀಧರ್ ಬಿಜೂರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗೋಪಾಲಕೃಷ್ಣ ನಾಡ ಕಾರ್ಯಕ್ರಮ ನಿರೂಪಿಸಿದರು, ಶ್ರೀಧರ್ ದೇವಾಡಿಗ ಬಡಾಕೆರೆ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026

    ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    06/07/2026
    Leave A Reply Cancel Reply

    four × one =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.