Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಹಸೆಮಣೆ ಏರುವ ಮುನ್ನ ಮತದಾನಗೈದ ವಧುಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯಗಳು ಬರದಿಂದ ಸಾಗುತ್ತಿದ್ದು ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ಶೇ.57.49 ಮಂದಿ ಮತ ಚಲಾಯಿಸಿದ್ದಾರೆ. ಇಂದು ಮದುವೆ ತಯಾರಿಯಲ್ಲಿದ್ದ ಮಧುಗಳು ಕೂಡ, ಹಸೆಮಣೆ ಏರುವ ಮುನ್ನವೇ ಮತದಾನ ಮಾಡಿ ತಮ್ಮ ಜವಾಬ್ದಾರಿ ಮೆರೆದಿದ್ದಾರೆ.

ಪೋಟೋದಲ್ಲಿ ಇರುವಂತೆ ಕ್ರಮವಾಗಿ (ಬಲದಿಂದ ಎಡಕ್ಕೆ) ಯಡಬೆಟ್ಟು ವಿದ್ಯೋದಯ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ವಧು ಸೂರ್ತಿ ಆಚಾರ್ಯ, ಗೋಪಾಡಿ ಗ್ರಾ.ಪಂ ವ್ಯಾಪ್ತಿಯ ಮತಗಟ್ಟೆಯಲ್ಲಿ ವಧು ಹೃತಿಕಾ ಹಾಗೂ ವಡೆರಹೋಬಳಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ವಧು ಅಶ್ವಿನಿ ಮತಚಲಾಯಿಸಿದರು.

Exit mobile version