ಹಿರಿಯ ಯಕ್ಷಗಾನ ಕಲಾವಿದ ಮಾರ್ಗೋಳಿ ಗೋವಿಂದ ಶೇರುಗಾರರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Call us

Call us

Call us

Call us

ಕುಂದಾಪುರ: ಬಡಗುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ, ಸ್ತ್ರೀಪಾತ್ರಗಳ ಮೂಲಕ ತನ್ನ ಕಲಾವರ್ಚಸ್ಸನ್ನು ಅಸಂಖ್ಯ ಯಕ್ಷಪ್ರೀಯರಿಗೆ ಉಣಬಡಿಸಿದ ಕಲಾವಿದ ಕುಂದಾಪುರ ತಾಲೂಕಿನ ಮಾರ್ಗೋಳಿ ಗೋವಿಂದ ಶೇರುಗಾರ್ ಅವರಿಗೆ 2015ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ.

Call us

Click Here

Click here

Click Here

Call us

Visit Now

Click here

ಮಾರ್ಗೋಳಿ ಅವರ ಬದುಕಿನ ಸುತ್ತ:
ಐವತ್ತು ವರುಷಗಳ ರಂಗ ಬದುಕಿನಲ್ಲಿ ತೆಂಕು-ಬಡಗಿನುದ್ದಕ್ಕೂ ತಿರುಗಾಟ ಮಾಡಿದ ಮಾರ್ಗೋಳಿಯವರು ಬಡಗು ತಿಟ್ಟಿನ ಪ್ರಾತಿನಿಧಿಕ ಕಲಾವಿದ. ಬಡಗಿನ ಹಳೆಯ ಕ್ರಮಗಳ ಬಗ್ಗೆ ಅಧಿಕೃತ ದನಿ. ನಾಟ್ಯದಿಂದ ರಂಗಸೂಕ್ಷ್ಮದ ವರೆಗಿನ ಸಂಗತಿಗಳಿಗೆ ಈ ಕಾಲಘಟ್ಟದಲ್ಲಿ ಮಾರ್ಗೋಳಿಯವರು ಯಕ್ಷಗಾನಕ್ಕೆ ಅನಿವಾರ್ಯ. ತನ್ನ ಹದಿಮೂರನೇ ವರುಷದಿಂದ ಬಣ್ಣದ ಬದುಕು ಆರಂಭ. ಕುಂದಾಪುರದ ಬಸ್ರೂರಿನಲ್ಲಿ ನಾಲ್ಕನೇ ತರಗತಿ ತನಕ ವಿದ್ಯಾಭ್ಯಾಸ. ಬದುಕಿನ ಅನಿವಾರ್ಯತೆಯೊಂದಿಗೆ ಬೆಳೆದು, ಬಡಗುತಿಟ್ಟಿನ ಬಹುತೇಕ ಖ್ಯಾತರೊಡನೆ ಪಾತ್ರವಹಿಸಿ, ತಾನೂ ಗಟ್ಟಿಯಾಗಿ ರಂಗದ ಸಾರಸರ್ವಸ್ವವನ್ನುಂಡ ಅಪರೂಪದ ಕಲಾಗಾರಿಕೆ. ಅವರ ರಂಗ ಬದುಕಿನ ಉಚ್ಛ್ರಾಯ ಕಾಲದ ನೆನಪು ಅವರ ಇಳಿವಯಸ್ಸಿನ ಲವಲವಿಕೆಯ ಗುಟ್ಟು.

ಗುರು ವೀರಭದ್ರ ನಾಯಕ್, ಕೊಕ್ಕರ್ಣೆ ಗುಂಡು ನಾಯಕ್, ನರಸಿಂಹ ಕಮ್ತಿ.. ಮೊದಲಾದ ಆಢ್ಯರ ಗರಡಿಯಲ್ಲಿ ತಿದ್ದಿ-ತೀಡಿದ ಅಪ್ಪಟ ಪ್ರತಿಭೆ. ತೆಂಕುಟ್ಟಿನಲ್ಲಿ ಪ್ರಸಿದ್ಧವಾದ ‘ದೇವಿ ಮಹಾತ್ಮೆ’ ಪ್ರಸಂಗದ ‘ಶ್ರೀದೇವಿ’ ಪಾತ್ರಕ್ಕೆ ಬಡಗಿನ ರಂಗದಲ್ಲಿ ಜೀವತುಂಬಿ, ಅದಕ್ಕೆ ಪ್ರತ್ಯೇಕವಾದ ಎತ್ತರದ ಸ್ಥಾನ ರೂಪಿಸಿದ ಕೀರ್ತಿ ಮಾರ್ಗೋಳಿಯವರಿಗೆ ಸಲ್ಲಬೇಕು.

ಮಂದಾರ್ತಿ ಮೇಳದಿಂದ ತಿರುಗಾಟ (1939)ಆರಂಭ. ಮುಂದೆ ಸೌಕೂರು, ಸಾಲಿಗ್ರಾಮ, ಇಡಗುಂಜಿ, ಪೆರ್ಡೂರು, ಅಮೃತೇಶ್ವರೀ, ಕಮಲಶಿಲೆ, ಕೂಡ್ಲು, ಮಾರಣಕಟ್ಟೆ ಮೇಳಗಳಲ್ಲಿ ತಿರುಗಾಟ. ಈ ಮಧ್ಯೆ ಅಮೃತೇಶ್ವರಿ ಮೇಳದ ಯಜಮಾನಿಕೆ ಮಾಡಿದ ಅನುಭವ. ‘ಮಾರಣಕಟ್ಟೆ ಮೇಳವೊಂದರಲ್ಲೇ ಮೂವತ್ತಾರು ತಿರುಗಾಟ ಮಾಡಿದ್ದೇನೆ’ ಎನ್ನುತ್ತಾ, ಮೇಳದ ತಿರುಗಾಟದ ರಸನಿಮಿಷಗಳನ್ನು ಹಂಚಿಕೊಳ್ಳುತ್ತಾರೆ.

Margoli Govinda Sherugar  Yakshagana - Kannada rojyotsava award1ಏರುಜವ್ವನದದ ಇವರ ಸ್ತ್ರೀಸಹಜ ಒನಪು-ಒಯ್ಯಾರಗಳ ಪಾತ್ರಗಳನ್ನು ಈಗಲೂ ಹಿರಿಯರು ಜ್ಞಾಪಿಸಿಕೊಳ್ಳುತ್ತಾರೆ. ನಾಲ್ಕೈದು ದಶಕದ ಹಿಂದೆ ಕುಂಬಳೆಯಲ್ಲಿ ಜರುಗಿದ ‘ಪಂಚವಟಿ’ ಪ್ರಸಂಗದ ‘ಮಾಯಾಶೂರ್ಪನಖಿ’ಯ ಪಾತ್ರವನ್ನು ರಂಗದಲ್ಲಿ ಬಿಡಿ, ಚೌಕಿಯಲ್ಲೇ ನೋಡಲು ಜನ ಮುಗಿಬೀಳುತ್ತಿದ್ದರಂತೆ. ಚೌಕಿಯಿಂದ ರಂಗಸ್ಥಳಕ್ಕೆ ಹೋಗುವ ದಾರಿಯ ಇಕ್ಕೆಡೆಯಲ್ಲೂ ಇವರಿಗೆ ರಕ್ಷಣೆ ಒದಗಿಸಬೇಕಾದ ಪ್ರಸಂಗ ಬಂದಿತಂತೆ. ಈ ಘಟನೆ ಹೇಳುವಾಗ 86ರ ಮಾರ್ಗೋಳಿಯರು ನಾಚಿ ನೀರಾಗಿ 24ರ ಯುವಕರಾಗುತ್ತಾರೆ!

Call us

ಮಾರ್ಗೋಳಿಯವರ ಕಸೆ ಸ್ತ್ರೀಪಾತ್ರಗಳಲ್ಲಿ ಪ್ರತ್ಯೇಕವಾದ ಛಾಪು. ‘ಮೀನಾಕ್ಷಿ’ ಮೆಚ್ಚಿನ ಪಾತ್ರ. ಶಶಿಪ್ರಭೆ, ಭ್ರಮರಕುಂತಳೆ, ಚಿತ್ರಾಂಗದೆ, ಚಿತ್ರಲೇಖೆ ಹೀಗೆ ಅನೇಕ ಪಾತ್ರಗಳ ಶಿಲ್ಪ ಎಂದೂ ಮಾಸದು! ದೇಹ ಮಾಗುತ್ತಿದ್ದಾಗ ‘ನನ್ನ ಸ್ತ್ರೀಪಾತ್ರ ಇನ್ನು ಸಾಕು’ ಎಂದು ಕಂಡದ್ದೇ ತಡ, ಪುರುಷ ಪಾತ್ರಗಳ ನಿರ್ವಹಣೆ. ರಾಮ, ಕೃಷ್ಣ, ಅರ್ಜುನ, ಸುಧನ್ವ, ತಾಮ್ರಧ್ವಜ, ಕಮಲಭೂಪ.. ಪಾತ್ರಗಳ ನಿರ್ವಹಣೆ. ಪಾತ್ರಗಳನ್ನು ನಿರ್ವಹಿಸಿ, ಪ1986ರಿಂದ ರಂಗನಿವೃತ್ತಿ. ಎಂಟು ವರುಷ ಮಹಿಳೆಯರಿಗೆ ತರಬೇತಿ ನೀಡಿ ತನ್ನದೇ ಆದ ಯಕ್ಷತಂಡವನ್ನು ರೂಪಿಸಿದ್ದರು.

‘ಸ್ತ್ರೀವೇಷಧಾರಿಯಾದವನು ಭಾವಜೀವಿಯಾಗಿರಬೇಕು. ಜೀವನವನ್ನು ಅತ್ಯಂತ ಸೂಕ್ಷ್ಮವಾಗಿ ಅನುಭವಿಸುವವರಿಗೆ, ಗಮನಿಸುವವರಿಗೆ ಹೆಚ್ಚಿಗೆ ಒಲಿಯುತ್ತದೆ’ ಎನ್ನುತ್ತಾರೆ. ಹದಿನೆಂಟು ದಿವಸದ ಮಹಾಭಾರತ, ಹನ್ನೆರಡು ದಿವಸದ ರಾಮಾಯಣ ಪ್ರಸಂಗಗಳ ಪ್ರದರ್ಶನಗಳನ್ನು ನೆನಪಿಸಿಕೊಳ್ಳುವಾಗ ಭಾವುಕರಾಗುತ್ತಾರೆ. (ಕುಂದಾಪ್ರ ಡಾಟ್ ಕಾಂ ಸುದ್ದಿ)

ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಬೆಂಗಳೂರಿನ ‘ಕಲಾಶ್ರೀ ಪ್ರಶಸ್ತಿ’, ‘ಯಕ್ಷ ಸವ್ಯಸಾಚಿ’, ‘ರಂಗಸ್ಥಳದ ರಾಣಿ’ ಪುರಸ್ಕಾರ, ‘ಪಾತಾಳ ಪ್ರಶಸ್ತಿ’. ಸಾಲಿಗ್ರಾಮ ಮೇಳದ ಯಜಮಾನರಾಗಿದ್ದ ದಿ.ಪಳ್ಳಿ ಸೋಮನಾಥ ಹೆಗ್ಡೆಯವರ ಹೆಸರಿನಲ್ಲಿ ನೀಡುವ ‘ಪಳ್ಳಿ ಸೋಮನಾಥ ಹೆಗ್ಡೆ ಪ್ರಶಸ್ತಿ’ಗೆ ಸೇರಿದಂತೆ ಹತ್ತಾರು ಗೌರವ ಪುರಸ್ಕಾರಗಳು ಮಾರ್ಗೋಳಿ ಅವರ ಮುಡಿಗೇರಿದೆ.

Leave a Reply

Your email address will not be published. Required fields are marked *

5 × two =