Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಬಿಜೆಪಿಯ ಹಿರಿಯ ಕಟ್ಟಾಳು ಪುಂಡಲೀಕ ನಾಯಕ್ ಇನ್ನಿಲ್ಲ
    ಕುಂದಾಪ್ರದ್ ಸುದ್ಧಿ

    ಕುಂದಾಪುರ: ಬಿಜೆಪಿಯ ಹಿರಿಯ ಕಟ್ಟಾಳು ಪುಂಡಲೀಕ ನಾಯಕ್ ಇನ್ನಿಲ್ಲ

    Updated:04/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಭಾರತೀಯ ಜನತಾ ಪಕ್ಷದ ಹಿರಿಯ ಕಟ್ಟಾಳು ಪುಂಡಲೀಕ ನಾಯಕ್ (75)  ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃದು ಸ್ವಭಾವದ, ಮಿತಭಾಷಿಕರೂ ಆಗಿದ್ದ ನಾಯಕರು ಬದುಕಿನ ಸಂಧ್ಯಾ ಕಾಲದವರೆಗೂ ಬ್ರಹ್ಮಚರ್ಯವನ್ನು ಆಚರಿಸಿದ್ದರು. ಹೋಟೆಲ್ ಉದ್ಯಮ, ಪಕ್ಷ, ಸಂಘಟನೆಯಲ್ಲಿ ಪ್ರಮುಖವಾಗಿ ಗುರುತಿಸಿಕೊಂಡವರು.

    Click Here

    Call us

    Click Here

    ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಸಕ್ರೀಯ ಸದಸ್ಯರಾಗಿದ್ದ ನಾಯಕರು ಕುಂದಾಪುರದಲ್ಲಿ ಸಂಘವನ್ನು ಬಲಪಡಿಸಿದವರಲ್ಲಿ ಓರ್ವರು. ಕುಂದಾಪುರದಲ್ಲಿ ಜನಸಂಘವನ್ನು ಕಟ್ಟಿ ಬೆಳೆಸಿದ ಪುಂಡಲೀಕ ನಾಯಕ್ ಆ  ಮೂಲಕ ರಾಜಕೀಯ ಕ್ಷೇತ್ರಕ್ಕೆ ಧುಮುಕಿ ಪುರಸಭಾ ಸದಸ್ಯರಾಗಿ ಸೇವೆ ಸಲ್ಲಿಸಿಪ್ರಭಾವಿ ನಾಯಕರಾಗಿ ಗುರುತಿಸಿಕೊಂಡವರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜೈಲುವಾಸವನ್ನು ಅನುಭವಿಸಿದ್ದ ಇವರು  1989ರಲ್ಲಿ ಮೊದಲ ಭಾರಿಗೆ ಬಿಜೆಪಿಯ ಅಭ್ಯರ್ಥಿಯಾಗಿಯೂ ಕುಂದಾಪುರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸ್ವರ್ಧಿಸಿದ್ದರು. ಕುಂದಾಪುರದಲ್ಲಿ ಇವರ ಒಡೆತನದಲ್ಲಿ ನಡೆಯುತ್ತಿದ್ದ ‘ನಾಯಕ್ ರೆಸ್ಟೊರೆಂಟ್’ ಆ ಕಾಲದಲ್ಲಿ ಬಹು ಪ್ರಸಿದ್ಧಿಯನ್ನು ಪಡೆದಿತ್ತು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ಆರ್.ಎಸ್.ಎಸ್. ಹಾಗೂ ಬಿಜೆಪಿ ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರುಗಳೊಂದಿಗೆ ಒಡನಾಟ ಹೊಂದಿದ್ದ ಇವರು ಈ ಭಾಗದಲ್ಲಿ ಅನೇಕ ಜನಪರವಾದ ಹೋರಾಟ, ಚಳುವಳಿಗಳನ್ನು ಸಂಘಟಿಸಿದ್ದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಅವರು ಭಜನೆ ಗಾಯಕ ಮತ್ತು ಉತ್ತಮ ತಬಲಾಪಟುವಾಗಿದ್ದರು, ಪುಸ್ತಕಗಳನ್ನು ಓದುವ ಹವ್ಯಾಸ ಇಟ್ಟುಕೊಂಡ ಅವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು.

    ಮೃತರ ನಿವಾಸಕ್ಕೆ ತೆರಳಿದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ವಿಧಾನಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾ ರ್ಜುನ ಹೆಗ್ಡೆ, ಬಿಜೆಪಿ ಅಧ್ಯಕ್ಷ ರಾಜೇಶ್‌ ಕಾವೇರಿ, ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಠದ ಸಂಚಾಲಕ ಕಿಶೋರ್‌ ಕುಮಾರ್‌, ಕಿರಣ್‌ ಕೊಡ್ಗಿ,. ಶಿವಾನಂದ, ಮೋಹನ್‌ದಾಸ್‌ ಶೆಣೈ ಮಾಣಿ ಗೋಪಾಲ, ಬುದ್ದ ರಾಜ್‌ ಶೆಟ್ಟಿ, ಎ.ಎಸ್‌.ಎನ್‌. ಹೆಬ್ಟಾರ್ ಮತ್ತಿತರರು ಅಂತಿಮ ದರ್ಶನ ಪಡೆದರು.

    Click here

    Click here

    Click here

    Call us

    Call us

    ಶಾಸಕ ಸುನೀಲ್‌ ಕುಮಾರ್‌, ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ, ಮಾಜಿ ಶಾಸಕ ರಘುಪತಿ ಭಟ್‌, ಮಲ್ಯಾಡಿ ಶಿವರಾಮ ಶೆಟ್ಟಿ , ಬಿಜೆಪಿಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಕೆ ಉದಯ ಕುಮಾರ್‌ ಶೆಟ್ಟಿ, ಮಾಜಿ ಶಾಸಕ ಯೋಗೀಶ್‌ ಭಟ್‌ ಸೇರಿದಂತೆ ಸೇರಿದಂತೆ ಪಕ್ಷದ ವಿವಿಧ ಗಣ್ಯರು, ಹಿತೈಶಿಗಳು, ಸ್ನೇಹಿತರು ಸಂತಾಪ ಸೂಚಿಸಿದ್ದಾರೆ.

    BJP kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026
    Leave A Reply Cancel Reply

    five × 2 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.