ಎಸ್‌ಕೆಪಿಎ ಕುಂದಾಪುರ ಬೈಂದೂರು ವಲಯ: ತರಬೇತಿ ಕಾರ್ಯಗಾರ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಮೇ.17:
ತನ್ನದೆಯಾದ ಕಲ್ಪನೆಯ ಮೂಲಕ ಛಾಯಾಗ್ರಹಣ ಮಾಡುದರ ಮೂಲಕ ಒಂದೋಂದು ಚಿತ್ರಗಳಿಗು ಅವಿನಾಭಾವ ಸಂಭಂಧ ಸೃಷ್ಟಿ ಮಾಡುವ ಕಲಾಕಾರರು ಛಾಯಾಗ್ರಾಹಕರು. ಯಾವುದೇ ಚಿತ್ರ ಕೇವಲವಲ್ಲ ಹಾಗೂ ಆ ಚಿತ್ರವನ್ನು ಸೃಷ್ಟಿಸಿದ ಕಲಾವಿದ,ಛಾಯಾಗ್ರಾಹಕ ಯಾವತ್ತು ಕೇವಲ ಅನ್ನಿಸಿಕೊಳ್ಳುದಿಲ್ಲ ಸಮಾಜದಲ್ಲಿ ಛಾಯಗ್ರಾಹಕರ ಮೌಲ್ಯ ಅಪಾರವಾದದ್ದು ಎಂದು ಪತ್ರಕರ್ತ ಲಕ್ಷ್ಮೀ ಮಚ್ಚಿನ ಹೇಳಿದರು.

Call us

Click Here

ಅವರು ಕುಂದಾಪುರದ ಶ್ರೇಯಸ್ಸ್ ಇನ್ ಸಭಾಂಗಣದಲ್ಲಿ ಶುಕ್ರವಾರ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಕುಂದಾಪುರ, ಬೈಂದೂರು ವಲಯದ ವತಿಯಿಂದ ಆಯೋಜಿಸಲಾದ ಕ್ಯಾನಾನ್ ಕಾರ್ಯಗಾರವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಕುಂದಾಪುರ,ಬೈಂದೂರು ವಲಯದ ಅಧ್ಯಕ್ಷ ದಿವಾಕರ ಶೆಟ್ಟಿ ವಹಿಸಿದ್ದರು.

ಈ ಸಂಧರ್ಭದಲ್ಲಿ ಕ್ಯಾನಾನ್ ತರಬೇತುದಾರ ಮ್ಯಾತಿಯು, ವ್ಯವಹಾರ ವ್ಯವಸ್ಥಾಪಕ ಅಜಯ್, ಸಂಘದ ಗೌರವಾಧ್ಯಕ್ಷರಾದ ಶ್ರೀಧರ್ ಹೆಗ್ಡೆ, ಸಲಹಾ ಸಮಿತಿ ಆದ್ಯಕ್ಷ ದಿನೇಶ್ ಗೋಡೆ, ನಿಕಟ ಪೂರ್ವ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಪ್ರಧಾನ ಕಾರ್ಯದರ್ಶಿ ದಿನೇಶ್ ರಾಯಪ್ಪನ ಮಠ, ಕೋಶಾಧಿಕಾರಿ ಹರೀಶ್ ಹಂಗಳೂರು ಮೊದಲಾದವರು ಉಪಸ್ಥಿತರಿದ್ದರು.

ಶ್ರೀನಿವಾಸ್ ಶೇಟ್ ಪ್ರಾರ್ಥಿಸಿದರು, ದಿವಾಕರ ಶೆಟ್ಟಿ ಸ್ವಾಗತಿಸಿದರು, ಹರೀಶ್ ಹಂಗಳೂರು ವಂದಿಸಿದರು.

Click here

Click here

Click here

Click Here

Call us

Call us

Leave a Reply