ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಖ್ಯಾತ ಮನೋವೈದ್ಯ ಪದ್ಮಶ್ರೀ ಡಾ. ಸಿ.ಆರ್. ಚಂದ್ರಶೇಖರ್ ಅವರು. ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮೇ.27ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ‘ಒತ್ತಡರಹಿತ ಜೀವನ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಹಿರಿಯ ವಿಶ್ವಸ್ಥಮಂಡಳಿಯ ಸದಸ್ಯರಾದ ಶಾಂತಾರಾಮ್ ಪ್ರಭು ವಹಿಸಲಿದ್ದಾರೆ. ಇನ್ನೋರ್ವ ಅತಿಥಿಗಳಾಗಿ ಲೆಕ್ಕಪರಿಶೋಧಕ ಮತ್ತು ಕಾನೂನು ಸಲಹೆಗಾರರಾದ ಡಾ.ನಾಗರಾಜ ಆಚಾರ್ ಬೆಂಗಳೂರು ಇವರು ಆಗಮಿಸಲಿದ್ದಾರೆ.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ.ಗೊಂಡ, ಐಕ್ಯೂಎಸಿ ಸಂಯೋಜಕರಾದ ಡಾ. ವಿಜಯಕುಮಾರ್ ಕೆ.ಎಮ್. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸತ್ಯನಾರಾಯಣ ಉಪಸ್ಥಿತರಿವರು.
ಆಸಕ್ತ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.