ಗಂಗೊಳ್ಳಿ: 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಇದರ ವತಿಯಿಂದ ಮಾರಿಕಾಂಬಾ ಮಹಿಳಾ ಸಹಕಾರಿ ಸಂಘ ಕೊಡಪಾಡಿ ಗುಜ್ಜಾಡಿ ಸಹಕಾರದೊಂದಿಗೆ 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Call us

Click Here

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವ ಯುವ ಮುಖಂಡ ದಿನೇಶ ಬಿಲ್ಲವ ವಹಿಸಿದ್ದರು. 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಾಧಕ ವಿದ್ಯಾರ್ಥಿನಿಯರಾದ ಸಿಂಚನಾ, ಸ್ಫೂರ್ತಿ, ನಿಷ್ಕಲ ಇವರನ್ನು ಸನ್ಮಾನಿಸಲಾಯಿತು.

ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಶುಭಾಶಂಸನೆಗೈದರು.

ಮುಖ್ಯ ಅತಿಥಿಯಾಗಿ ಪತ್ರಕರ್ತ ಬಿ.ರಾಘವೇಂದ್ರ ಪೈ, ಮಾಜಿ ಮಂಡಲ ಪ್ರಧಾನ ಬಿ. ಸದಾನಂದ ಶೆಣೈ, ನಿವೃತ್ತ ಶಿಕ್ಷಕ ದೇವು ಮಾಸ್ಟರ್, ಇಂದುಧರ ದೇವಸ್ಥಾನದ ಮೊಕ್ತೇಸರ ಸಂಜೀವ ಜಿ.ಟಿ., ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಅಧ್ಯಕ್ಷೆ ಸುಮಿತ್ರಾ, ಸುರೇಶ ಜಿ., ನರಸಿಂಹ ಎಂ.ಜಿ., ನಾಗರಾಜ ಜಿ.ಎಂ., ಶ್ರೀಕಾಂತ ಎನ್., ಜಿ.ಈಶ್ವರ ಉಪಸ್ಥಿತರಿದ್ದರು.

ಗೌರವ ಶಿಕ್ಷಕಿ ಭೂದೇವಿ ಸ್ವಾಗತಿಸಿದರು. ಅಕ್ಷತಾ ವಿನಯ್ ಕಾರ್ಯಕ್ರಮ ನಿರ್ವಹಿಸಿದರು. ಸುಮಿತ್ರಾ ಜಿ. ವಂದಿಸಿದರು.

Click here

Click here

Click here

Click Here

Call us

Call us

Leave a Reply