ಕುಂದಾಪುರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಇಲ್ಲಿಗೆ ಸಮೀಪದ ಸಿದ್ದಾಪುರ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿದ್ದಾಪುರ ಗ್ರಾಮದ ಪ್ರವೀಣ್ (26) ಪೊಲೀಸರು ವಶಕ್ಕೆ ಪಡೆದ ವ್ಯಕ್ತಿ.
ಪೋಲೀಸರು ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು ಗಾಂಜಾ ಸೇವನೆ ಮಾಡಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕಟಣೆ ದಾಖಲಾಗಿದೆ.