ಶ್ರೀ ಜಗದಾಂಬ ಗೋಪಾಲಕೃಷ್ಣ ದೇವಸ್ಥಾನ: ಪುನ: ಪ್ರತಿಷ್ಠಾ ವರ್ಧಂತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
 ಗಂಗೊಳ್ಳಿಯ ಶ್ರೀ ಜಗದಾಂಬ ಗೋಪಾಲಕೃಷ್ಣ (ಅಂಬಿಕಾ) ದೇವಸ್ಥಾನದ ದೇವರ ಪುನ: ಪ್ರತಿಷ್ಠಾ ವರ್ಧಂತಿ ಉತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸೋಮವಾರ ವಿಜೃಂಭಣೆಯಿಂದ ನಡೆಯಲಿದೆ.

Call us

Click Here

ದೇವರ ಪುನ: ಪ್ರತಿಷ್ಠಾ ವರ್ಧಂತಿ ಉತ್ಸವದ ಧಾರ್ಮಿಕ ಕಾರ್ಯಕ್ರಮಗಳು ಬೆಳಿಗ್ಗೆ ದೇವತಾ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ವರ್ಧಂತಿ ಉತ್ಸವದ ಪ್ರಯುಕ್ತ ದೇವರಿಗೆ ಶತಕಲಶಾಭಿಷೇಕ, ಸಾನ್ನಿಧ್ಯ ಹವನ, ಮಹಾ ಪೂಜೆ, ಮಹಾ ಸಮಾರಾಧನೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಜಿ.ಅನಂತಕೃಷ್ಣ ಭಟ್, ಜಿ.ವಸಂತ ಭಟ್, ಜಿ.ವಿಠಲದಾಸ ಭಟ್, ಸೇವಾದಾರರಾದ  ದಿ.ನಗರ ಸುದರ್ಶನ ಶ್ರೀಧರ ನಾಯಕ್ ಅವರ ಮಕ್ಕಳು, ಅರ್ಚಕ ಕುಟುಂಬಸ್ಥರು, ಪುರೋಹಿತರು, ಸಮಾಜ ಬಾಂಧವರು ಮೊದಲಾದವರು ಉಪಸ್ಥಿತರಿದ್ದರು.

Leave a Reply